ಮುರುಘಾ ಸ್ವಾಮೀಜಿಯ ಲೈಂಗಿಕ ದೌರ್ಜನ್ಯ ಪ್ರಕರಣ| ಸೆ.14ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಸಮಗ್ರ ನ್ಯೂಸ್: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಡಿಯಲ್ಲಿ ಬಂಧನವಾಗಿರುವ ಚಿತ್ರದುರ್ಗ ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಶರಣರನ್ನು ಸೆ. 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

. Ad Widget . Ad Widget . Ad Widget .

ಶ್ರೀಗಳ ಪೊಲೀಸ್ ಕಸ್ಟಡಿ ಅವಧಿ ಸೋಮವಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಅವರನ್ನು ಚಿತ್ರದುರ್ಗದ 2ನೇ ಅಪರ ಸತ್ರ ನ್ಯಾಯಾಲಯ ಮುಂದೆ ಹಾಜರುಪಡಿಸಲಾಯಿತು. ಬಳಿಕ ಶ್ರೀಗಳಿಗೆ ಸೆ.14 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ, ನ್ಯಾಯಾಧೀಶೆ ಕೋಮಲಾ ಅವರು ಆದೇಶಿಸಿದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಕೋರ್ಟಿಗೆ ಹಾಜರು ಪಡಿಸುವ ಮುನ್ನ ಜಿಲ್ಲಾಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಅವರನ್ನು ಒಳಪಡಿಸಲಾಯಿತು. ಕೋರ್ಟ್​ಗೆ ಹಾಜರು ಪಡಿಸುವ ವೇಳೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಶರಣರಿಗೆ ಜಾಮೀನು ಕೋರಿ ಅವರ ಪರ ವಕೀಲರು ಶನಿವಾರವೇ ಅರ್ಜಿ ಸಲ್ಲಿಸಿದ್ದಾರೆ. ಸೆ.7ರಂದು ಈ ಅರ್ಜಿ ವಿಚಾರಣೆಗೆ ಬರಲಿದೆ

Leave a Comment

Your email address will not be published. Required fields are marked *