ಸಚಿವ ಡಾ. ಸುಧಾಕರ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.

Ad Widget ... ..

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ. ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಹೇಳಿದ್ದಾರೆ.

Ad Widget

ಇಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯರ ಗೈರು ಹಾಜರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆಗಿದ್ದರು. ಅಲ್ಲದೇ ಸದಸ್ಯರ ಗೈರಿಗೆ ಅಸಮಾಧಾನ ವ್ಯಕ್ತ ಪಡಿಸಿದ್ದರು. ಈ ಬೆನ್ನಲ್ಲೇ ಸಚಿವ ಸುಧಾಕರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *