ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶಿಕ್ಷಣ ಸಾಲ ಸೌಲಭ್ಯ

ಮಂಗಳೂರು : ಮೂರು ವರ್ಷಗಳ ಬಳಿಕ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶಿಕ್ಷಣ ಸಾಲ ಲಭಿಸಲಿದೆ. ಈ ಕುರಿತು ಈಗಾಗಲೇ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದಿಂದ ಸುತ್ತೋಲೆ ಹೊರಡಿಸಲಾಗಿದೆ.

. Ad Widget . Ad Widget

2022-23ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿ ಸುತ್ತೋಲೆ ಹೊರಡಿಸಲಾಗಿದೆ.

. Ad Widget . . Ad Widget . Ad Widget

ಸೆ. 6ರಿಂದ ಅ. 20ರ ವರೆಗೆ ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು.
ಅಲ್ಲದೆ ಈಗಾಗಲೇ ಈ ಮೇಲಿನ ನಿಗಮಗಳ ಮೂಲಕ ಅರಿವು ಯೋಜನೆಯಡಿ ಸಾಲ ಪಡೆದವರಿಗೆ ಉಳಿದ 3 ಮತ್ತು 4ನೇ ಕಂತುಗಳ ಸಾಲ ಬಿಡುಗಡೆಗೂ ಇದೇ ದಿನಾಂಕದಡಿ ಅರ್ಜಿ ಹಾಕಬಹುದು.

Leave a Comment

Your email address will not be published. Required fields are marked *