September 2022

ಏರ್ ಫೋರ್ಸ್ ತರಬೇತಿ ಗೆ ಬಂದಿದ್ದ ಯುವಕ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಏರ್‌ಫೋರ್ಸ್‌ ತರಬೇತಿಗೆ ಬಂದಿದ್ದ ಯುವಕ ತನ್ನನ್ನು ಕೈಬಿಟ್ಟದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಂಗಮ್ಮನಗುಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆಯೊಂದು ನಡೆದಿದೆ. ಅಂಕಿತ್ ಕುಮಾರ್ (27) ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ. ಅಂಕಿತ್‌ ಕುಮಾರ್‌ ದೆಹಲಿ ಮೂಲದವನಾಗಿದ್ದು, ಇಲ್ಲಿಗೆ ಏರ್‌ಫೋರ್ಸ್‌ ತರಬೇತಿಗೆ ಬಂದಿದ್ದ. ಕಾರಣಾಂತರಗಳಿಂದ ತರಬೇತಿಯಿಂದ ಅಂಕಿತ್‌ನನ್ನು ಕೈಬಿಡಲು ನಿರ್ಧರಿಸಲಾಗಿತ್ತು. ಈ ಹಿನ್ನೆಲೆ‌ ಖಿನ್ನತೆಗೊಳಗಾದ ಯುವಕ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ ಅಂಕಿತ್ ಸಾವಿನ ಕುರಿತು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಕೊಲೆಯೆಂದು ಆರೋಪಿಸಿ […]

ಏರ್ ಫೋರ್ಸ್ ತರಬೇತಿ ಗೆ ಬಂದಿದ್ದ ಯುವಕ ಆತ್ಮಹತ್ಯೆಗೆ ಶರಣು Read More »

ಅಂಗಿ ಬನಿಯನ್ ತೆಗೆಯುವ ನಿಯಮ ಮೂಲಭೂತ ಹಕ್ಕಿನ ಉಲ್ಲಂಘನೆ| ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದ ಪರಿಸರ ಸಂರಕ್ಷಣಾ ಒಕ್ಕೂಟ

ಸಮಗ್ರ ನ್ಯೂಸ್: ದೇವರ ದರ್ಶನಕ್ಕಾಗಿ ಅಂಗಿ ಬನಿಯನ್ ತೆಗೆದು ಪ್ರವೇಶಿಸುವುದು ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ದೂರು ಸಲ್ಲಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಮತ್ತೆ ಸುದ್ದಿಯಲ್ಲಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಆಗಮಿಸುವ ಪುರುಷ ಭಕ್ತರು ಅಂಗಿ-ಬನಿಯನ್ ತೆಗೆದು ಬರಬೇಕು ಎಂಬ ಸದ್ಯ ಇರುವ ನಿಯಮವನ್ನು ಬದಲಿಸಲು ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟವು ಮನವಿ ಮಾಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಜೊತೆಗೆ ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ

ಅಂಗಿ ಬನಿಯನ್ ತೆಗೆಯುವ ನಿಯಮ ಮೂಲಭೂತ ಹಕ್ಕಿನ ಉಲ್ಲಂಘನೆ| ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದ ಪರಿಸರ ಸಂರಕ್ಷಣಾ ಒಕ್ಕೂಟ Read More »

ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ; ಖಡಕ್ ಸೂಚನೆ ಕೊಟ್ಟ ನಟ ಅನಿರುದ್ಧ್

ಸಮಗ್ರ ನ್ಯೂಸ್: ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಬಂದ ನಟ ಅನಿರುದ್ಧ್ ಜತ್ಕಾರ್ ಈಗ ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈಗಾಗಲೇ ಅನಿರುದ್ಧ್ ನಾನು ಬಿಗ್ ಬಾಸ್ ಗೆ ಹೋಗ್ತಾಯಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದರು. ಆದರೂ ಸೋಷಿಯಲ್ ಮೀಡಿಯಾಗಳಲ್ಲಿ ಅವರು ಬಿಗ್ ಬಾಸ್ ಗೆ ಹೋಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಈ ಬಗ್ಗೆ ಸ್ವತಃ ಅನಿರುದ್ಧ್ ಖಡಕ್ ಸೂಚನೆ ಕೊಟ್ಟಿದ್ದಾರೆ. ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ. ನಾನು ಬಿಗ್ ಬಾಸ್

ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ; ಖಡಕ್ ಸೂಚನೆ ಕೊಟ್ಟ ನಟ ಅನಿರುದ್ಧ್ Read More »

ಕೇರಳ: ಕಲ್ಲು ತೂರಾಟದಿಂದ ಪಾರಾಗಲು ಹೆಲ್ಮೆಟ್ ಧರಿಸಿ ಬಸ್ ಚಲಿಸಿದ ಚಾಲಕ

ತಿರುವನಂತಪುರಂ: ಕೇರಳದ ಕೆಎಸ್‍ಆರ್‌ಟಿಸಿ ಚಾಲಕರೊಬ್ಬರು ರಾಜ್ಯದಲ್ಲಿ ನಡೆಯುತ್ತಿರುವ ಕಲ್ಲು ತೂರಾಟದಿಂದ ರಕ್ಷಿಸಿಕೊಳ್ಳಲು ಬಸ್ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಗುರುವಾರ ಎನ್‍ಐಎ ನಡೆಸಿದ್ದ ದಾಳಿ ವಿರೋಧಿಸಿ ಇಡೀ ದಿನ ಕೇರಳ ಬಂದ್‌ಗೆ ಪಿಎಫ್‍ಐ (PFI) ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಬಂದ್‌ ಹಿಂಸಾಚಾರ ನಡೆದಿದ್ದು, ಕೇರಳದ ಆಲುವಾ ಬಸ್ ಹಾಗೂ ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳದ ಕೆಎಸ್‍ಆರ್‌ಟಿಸಿ ಚಾಲಕನೊಬ್ಬ ತನ್ನನ್ನು ತಾನೂ ರಕ್ಷಿಸಿಕೊಳ್ಳಲು ಹೆಲ್ಮೆಟ್

ಕೇರಳ: ಕಲ್ಲು ತೂರಾಟದಿಂದ ಪಾರಾಗಲು ಹೆಲ್ಮೆಟ್ ಧರಿಸಿ ಬಸ್ ಚಲಿಸಿದ ಚಾಲಕ Read More »

ಮದುವೆ ಆಗಿ ಒಂದು ವರ್ಷಕ್ಕೆ ಕೈಕೊಟ್ಟ ಪತಿ| ದಿಕ್ಕೆಟ್ಟ ಪತ್ನಿಯಿಂದ ಪತಿ ಸೇರಿ 16 ಮಂದಿ ವಿರುದ್ದ ದೂರು

ಸಮಗ್ರ ನ್ಯೂಸ್: ಪ್ರೀತಿಸಿ ವಿವಾಹವಾದ ಒಂದೇ ವರ್ಷಕ್ಕೆ ಸಂಸಾರದಲ್ಲಿ ಬಿರುಕು ಬಿಟ್ಟಿದ್ದು,‌‌ಪತ್ನಿಗೆ ಪತಿ ಕೈಕೊಟ್ಟಿರುವ ಘಟನೆ ಮೈಸೂರು‌ ಜಿಲ್ಲೆಯ ಹುಣಸೂರಿನಿಂದ ವರದಿಯಾಗಿದೆ. ಹೆತ್ತವರು ಹಾಗೂ ಸಂಬಂಧಿಕರ ಮಾತು ಕೇಳಿ ಪತಿ ಕೈಕೊಟ್ಟಿದ್ದು, ಜಾತಿ ನಿಂದನೆ ಮಾಡಿ ಅಪಪ್ರಚಾರ ಮಾಡಿ ಕೊಲೆ ಬೆದರಿಕೆ ಹಾಕಿ ಪತ್ನಿಯನ್ನ ದೂರ ಮಾಡಿದ ಹಿನ್ನಲೆ ವಂಚನೆಗೆ ಒಳಗಾದ ವಿವಾಹಿತೆ ನ್ಯಾಯಕ್ಕಾಗಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.ಗಂಡ ಸೇರಿದಂತೆ ಒಂದೇ ಕುಟುಂಬದ 16 ಮಂದಿ ಮೇಲೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ

ಮದುವೆ ಆಗಿ ಒಂದು ವರ್ಷಕ್ಕೆ ಕೈಕೊಟ್ಟ ಪತಿ| ದಿಕ್ಕೆಟ್ಟ ಪತ್ನಿಯಿಂದ ಪತಿ ಸೇರಿ 16 ಮಂದಿ ವಿರುದ್ದ ದೂರು Read More »

ಕಲಾವಿದ ಶರವಣ ಧನಪಾಲ್ ನಿಧನ

ಸಮಗ್ರ ನ್ಯೂಸ್: ಹಲವು ದಿನಗಳಿಂದ ಶರವಣ ಧನಪಾಲ್​ ಅವರು ಅನಾರೋಗ್ಯ ಸಮಸ್ಯೆ ಯಿಂಸ ಬಳಲುತ್ತಿದ್ದರು. ಕಿಡ್ನಿ ವೈಫಲ್ಯ ಮತ್ತು ಇನ್​ಫೆಕ್ಷನ್​ ಕಾರಣದಿಂದ ಅವರ ಆರೋಗ್ಯ ಸಾಕಷ್ಟು ಹದಗೆಟ್ಟಿತ್ತು. ವಿಭಿನ್ನ ಪ್ರತಿಭೆ ಮೂಲಕ ಗುರುತಿಸಿಕೊಂಡಿದ್ದ ಕಲಾವಿದ ಹಾಲೋಮ್ಯಾನ್​ ಶರವಣ ಧನಪಾಲ್ ನಿಧನರಾಗಿದ್ದಾರೆ. ಹಲವು ಕಡೆಗಳಲ್ಲಿ ವೇದಿಕೆ ಕಾರ್ಯಕ್ರಮ ನೀಡುವ ಮೂಲಕ ಅವರು ಫೇಮಸ್​ ಆಗಿದ್ದರು. ಅವರು ಮಾಡುವ ಬಲೂನ್​ ಆಕ್ಟ್​ ತುಂಬಾ ಜನಪ್ರಿಯವಾಗಿತ್ತು.

ಕಲಾವಿದ ಶರವಣ ಧನಪಾಲ್ ನಿಧನ Read More »

ಚಿಕ್ಕಮಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ| ಸಂಘಟನೆಯಿಂದ ತೀವ್ರ ಅಕ್ರೋಶ

ಸಮಗ್ರ ನ್ಯೂಸ್: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಹಿನ್ನಲೆ ಸಂಘಟನೆಯಿಂದ ತೀವ್ರ ಅಕ್ರೋಶ ಹೊರಹಾಕಿದ ಘಟನೆ ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತ ಬಳಿ ನಡೆದಿದೆ. ನಗರದ ಹನುಮಂತ ವೃತ್ತದಲ್ಲಿ ಹಾಕಿದ್ದ ಫ್ಲೆಕ್ಸ್ ನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆಗಿರುವುದನ್ನು ಖಂಡಿಸಿ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿದು ಹಲವಾರು ಸಂಘಟನೆ ಕಾರ್ಯಕರ್ತರು ಈ ಸ್ಥಳಕ್ಕೆ ಬಂ‌ದಿದ್ದು, ಈ ಕುರಿತು ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಅಳವಡಿಸಲಾಗಿದೆ. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದವರ

ಚಿಕ್ಕಮಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ| ಸಂಘಟನೆಯಿಂದ ತೀವ್ರ ಅಕ್ರೋಶ Read More »

NIA ದಾಳಿ ಖಂಡಿಸಿ ಪಿಎಫ್ಐ, ಎಸ್ಡಿಪಿಐ ನಿಂದ ಕೇರಳ ಬಂದ್| ಬಸ್ ಗಳಿಗೆ ಕಲ್ಲೇಟು, ಅಲ್ಲಲ್ಲಿ ಪ್ರತಿಭಟನೆ

ಸಮಗ್ರ ನ್ಯೂಸ್: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮೇಲೆ ಎನ್‌ಐಎ ದಾಳಿ ಬೆನ್ನಲ್ಲೇ ಕೇರಳ ಬಂದ್‌ಗೆ ಪಿಎಫ್‌ಐ ಕರೆ ನೀಡಿದೆ. ಪಿಎಫ್‌ಐ ಕಾರ್ಯಕರ್ತರು ಆಲುವಾದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕಲ್ಲು ತೂರಾಟ ಮಾಡಲಾಗಿದ್ದು, ಬಸ್ಸಿನ ಕನ್ನಡಿಗಳು ಒಡೆದು ಹಾನಿ ಮಾಡಿದ್ದಾರೆ. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆಂದು ಆರೋಪಿಸಿ 15 ರಾಜ್ಯಗಳಲ್ಲಿ ಪಿಎಫ್‌ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಎನ್‌ಐಎ ನೇತೃತ್ವದ ಬಹು ಏಜೆನ್ಸಿ ತನಿಖಾ ತಂಡಗಳು ನಡೆಸಿದ ದಾಳಿಗಳು, 106 ನಾಯಕರು ಮತ್ತು

NIA ದಾಳಿ ಖಂಡಿಸಿ ಪಿಎಫ್ಐ, ಎಸ್ಡಿಪಿಐ ನಿಂದ ಕೇರಳ ಬಂದ್| ಬಸ್ ಗಳಿಗೆ ಕಲ್ಲೇಟು, ಅಲ್ಲಲ್ಲಿ ಪ್ರತಿಭಟನೆ Read More »

ಪೇ ಸಿಎಂ ಪೋಸ್ಟರ್ ಕೇಸ್; 8 ಮಂದಿಯ ಬಂಧನ

ಬೆಂಗಳೂರು : ‘ಪೇ ಸಿಎಂ ಪೋಸ್ಟರ್’ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ ಮೂರು ಮಂದಿಯನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೊಲೀಸರು ಇದೀಗ ಮತ್ತೆ ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಗ್ಗೆ ಐದು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಸರ್ಕಾರ ವಿರುದ್ಧ ಶೇ 40 ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಮೂಲಕ

ಪೇ ಸಿಎಂ ಪೋಸ್ಟರ್ ಕೇಸ್; 8 ಮಂದಿಯ ಬಂಧನ Read More »

ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಹಿರಿಯ ಹುಲಿ ಹನುಮ ಸಾವು

ಸಮಗ್ರ ನ್ಯೂಸ್ : ಕಳೆದ ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಶಿವಮೊಗ್ಗ ಸಮೀಪದ ತ್ಯಾವರೆಕೊಪ್ಪ ಹುಲಿ – ಸಿಂಹಧಾಮದ ಹಿರಿಯ ಹುಲಿ ‘ಹನುಮ’ ಬುಧವಾರ ರಾತ್ರಿ ಮೃತಪಟ್ಟಿದೆ. 20 ವರ್ಷದ ಹನುಮನಿಗೆ ನಿರಂತರವಾಗಿ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯವು ಸಹ ಸುಧಾರಣೆ ಕಂಡಿತ್ತು, ಆದರೆ ವಯೋ ಸಹಜ ಸಮಸ್ಯೆಗಳ ಕಾರಣ ಹನುಮ ಮೃತಪಟ್ಟಿರಬಹುದು ಎಂದು ಹೇಳಲಾಗಿದೆ. ಮಲೆ ಶಂಕರ ಹಾಗೂ ಚಾಮುಂಡಿಯ ಮಗನಾದ ‘ಹನುಮ’ನ ಸಾವಿನಿಂದಾಗಿ ಇದೀಗ ಸಫಾರಿಯಲ್ಲಿರುವ ಹುಲಿಗಳ ಸಂಖ್ಯೆ ನಾಲ್ಕಕ್ಕೆ ಇಳಿಕೆಯಾಗಿದೆ.

ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಹಿರಿಯ ಹುಲಿ ಹನುಮ ಸಾವು Read More »