September 2022

ಈ‌ ಮುದ್ದಾದ ಅಕ್ಷರಗಳಿಂದಲೇ ಈ ಡಾಕ್ಟರ್ ಪೇಮಸ್| ಇವರ ಔಷಧ ಚೀಟಿಗೆ ಜನ ಫಿದಾ!!

ಸಮಗ್ರ ನ್ಯೂಸ್: ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್​ ಶಾಪ್​ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತದೆ. ಬಹುತೇಕ ವೈದ್ಯರು ಬರಹ ಅಸ್ಪಷ್ಟವಾಗಿರುತ್ತದೆ. ಜನಸಾಮಾನ್ಯರಿಗೆ ಅದರ ಮೊದಲ ಅಕ್ಷರ ಬಿಟ್ರೆ ಬೇರೇನೂ ಗೊತ್ತಾಗದು. ಆದರೆ ಇಲ್ಲೊಬ್ಬ ಡಾಕ್ಟರ್ ಈಗ ಈ ಅಪವಾದಕ್ಕೆ ಹೊರತಾಗಿದ್ದಾರೆ. ಕೇರಳದ ಮಕ್ಕಳ ತಜ್ಞರೊಬ್ಬರು ಬರೆದಿರುವ ಔಷಧ ಚೀಟಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಕೇರಳದ ಪಾಲಕ್ಕಾಡ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ (ಸಿಎಚ್‌ಸಿ) ಡಾ. ನಿತಿನ್ ನಾರಾಯಣನ್ ಅವರು ತಮ್ಮ ಔಷಧ ಚೀಟಿಯಿಂದಲೇ ಸಾಮಾಜಿಕ […]

ಈ‌ ಮುದ್ದಾದ ಅಕ್ಷರಗಳಿಂದಲೇ ಈ ಡಾಕ್ಟರ್ ಪೇಮಸ್| ಇವರ ಔಷಧ ಚೀಟಿಗೆ ಜನ ಫಿದಾ!! Read More »

ಕೊಕ್ಕಡ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಮಾರಣಾಂತಿಕ ಹಲ್ಲೆ

ಬೆಳ್ತಂಗಡಿ: ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆ ಕರೆಂಟ್ ಕಟ್ ಮಾಡಿದ್ದಕ್ಕೆ ಲೈನ್ ಮ್ಯಾನ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಹಲ್ಲೆ ನಡೆಸಿದಾತನನ್ನು ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ರಿಜೀಶ್ (38) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೆಸ್ಕಾಂ ಪವರ್ ಮ್ಯಾನ್ ದುಂಡಪ್ಪ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ದಿ. ಕಾಂತು ಪೂಜಾರಿ ಎಂಬುವವರ ಮನೆಯ ಕರೆಂಟ್ ಬಿಲ್

ಕೊಕ್ಕಡ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಮಾರಣಾಂತಿಕ ಹಲ್ಲೆ Read More »

ತನ್ನ ಪತಿಯನ್ನು ಹೋಟೆಲ್ ಕೋಣೆಯಲ್ಲಿ ಮಹಿಳೆಯೊಂದಿಗೆ ಅಶ್ಲೀಲ ಭಂಗಿಯಲ್ಲಿ ಕಂಡ ಪತ್ನಿ| ಮುಂದೇನಾಯಿತು ವೀಡಿಯೊ ನೋಡಿ..!

ದೆಹಲಿ: ತನ್ನ ಪತಿ ಹೋಟೆಲ್ ಕೋಣೆಯೊಂದರಲ್ಲಿ ಮತ್ತೊಬ್ಬ ಮಹಿಳೆಯೊಂದಿಗೆ ಅಶ್ಲೀಲ ಭಂಗಿಯಲ್ಲಿರುವುದನ್ನು ಕಂಡ ಪತ್ನಿ ಪಾದರಕ್ಷೆಯಿಂದ ಪತಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಆಗ್ರಾದ ದೆಹಲಿ ಗೇಟ್ ಸಮೀಪ ನಡೆದಿರುವುದಾಗಿ ವರದಿ ತಿಳಿಸಿದೆ. ತಂದೆಗೆ ಚಪ್ಪಲಿಯಿಂದ ಹೊಡೆಯುತ್ತಿರುವ ದೃಶ್ಯವನ್ನು ಮಗಳು ಸೆರೆಹಿಡಿದಿದ್ದು,ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದಾಗಿ ವರದಿ ವಿವರಿಸಿದೆ. ಮಹಿಳೆಯನ್ನು ನೀಲಂ ಎಂದು ಗುರುತಿಸಲಾಗಿದ್ದು, ಪತಿ ದಿನೇಶ್ ಗೋಪಾಲ್ ಎಂಬುದಾಗಿ ವರದಿ ತಿಳಿಸಿದೆ. ತನ್ನ ಪತಿ ದೀರ್ಘಕಾಲದಿಂದಲೂ ಇದೇ ರೀತಿ ವರ್ತಿಸುತ್ತಿರುವುದಾಗಿ ನೀಲಂ ಸುದ್ದಿಗಾರರ ಜತೆ ಮಾತನಾಡುತ್ತ

ತನ್ನ ಪತಿಯನ್ನು ಹೋಟೆಲ್ ಕೋಣೆಯಲ್ಲಿ ಮಹಿಳೆಯೊಂದಿಗೆ ಅಶ್ಲೀಲ ಭಂಗಿಯಲ್ಲಿ ಕಂಡ ಪತ್ನಿ| ಮುಂದೇನಾಯಿತು ವೀಡಿಯೊ ನೋಡಿ..! Read More »

ಸುಳ್ಯ : ಸರಕಾರಿ ಜಾಗ ಅತಿಕ್ರಮಣ ಪ್ರಕರಣ ಸಂಬಂಧ

ಪ್ರತಿಭಟನೆ ಕೈ ಬಿಟ್ಟ ಅಂಬೇಡ್ಕರ್ ರಕ್ಷಣಾ ವೇದಿಕೆ ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಸಬ ಗ್ರಾಮದ ಜಯನಗರದ ಸರಕಾರಿ ಶಾಲೆಯ ಹತ್ತಿರ ಗೋಪಾಲ್ ನಾಯಕ್ ಎಂಬವರು ಸರಕಾರಿ ಜಾಗವನ್ನು ಅತಿಕ್ರಮಣ ಮಾಡಲು ಜೆಸಿಬಿ ಮೂಲಕ ಮಣ್ಣನ್ನು ತೆರವುಗೊಳಿಸಿದ್ದರು. ಈ ಹಿನ್ನಲೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸರಕಾರಿ ಜಾಗವನ್ನು ಆಕ್ರಮಿಸಿಕೊಂಡ ಗೋಪಾಲ್ ನಾಯಕ್ ಎಂಬವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾಧ್ಯಮದ ಮೂಲಕ ಪಿ.ಸುಂದರ ಪಾಟಾಜೆಯವರು ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದರು. ಆ ವಿಚಾವಾಗಿ ಸೆ.22 ರಂದು ಪಿ.ಸುಂದರ

ಸುಳ್ಯ : ಸರಕಾರಿ ಜಾಗ ಅತಿಕ್ರಮಣ ಪ್ರಕರಣ ಸಂಬಂಧ Read More »

“ಪೇ ಸಿಎಂ” ಅಧಿಕೃತಗೊಳಿಸಲು ರಾಜ್ಯ ಸರ್ಕಾರ ಚಿಂತನೆ| ಇನ್ಮುಂದೆ ನೀವೂ ಸಿಎಂಗೆ ಪಾವತಿ ಮಾಡಬಹುದು!!

ಸಮಗ್ರ ನ್ಯೂಸ್: ಕೇವಲ ಒಂದು ದಿನದ ಹಿಂದೆ ತೀವ್ರ ಸದ್ದು ಮಾಡಿದ್ದ “ಪೇ ಸಿಎಂ’ ಅನ್ನು ಈಗ ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ! ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ “ಪೇ ಸಿಎಂ’ ಡಿಜಿಟಲ್‌ “ಪೇ ಟು ಚೀಫ್ ಮಿನಿಸ್ಟರ್‌ ರಿಲೀಫ್ ಫ‌ಂಡ್‌ (ಸಿಎಂಆರ್‌ಎಫ್) ಎಂಬ ಡಿಜಿಟಲ್‌ ಆಯಪ್‌ ಅಭಿವೃದ್ಧಿಪಡಿಸಿ, ಆ ಮೂಲಕ ಅಧಿಕೃತಗೊಳಿಸಲು ಮುಂದಾಗಿದೆ. ಇದರೊಂದಿಗೆ ಸರ್ಕಾರದ ವಿರುದ್ಧದ ಅಭಿಯಾನವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಲೆಕ್ಕಾಚಾರ ಇದಾಗಿದೆ ಎಂದು ಮೂಲಗಳು ತಿಳಿಸಿವೆ. ‘ಪೇ ಸಿಎಂ’ ಹೆಸರಿನಡಿ ಡಿಜಿಟಲ್‌ ಆ್ಯಪ್‌ ಅಭಿವೃದ್ಧಿಪಡಿಸಿ,

“ಪೇ ಸಿಎಂ” ಅಧಿಕೃತಗೊಳಿಸಲು ರಾಜ್ಯ ಸರ್ಕಾರ ಚಿಂತನೆ| ಇನ್ಮುಂದೆ ನೀವೂ ಸಿಎಂಗೆ ಪಾವತಿ ಮಾಡಬಹುದು!! Read More »

ಬಂಟ್ವಾಳ: ನಾವೂರಲ್ಲಿ ಶಂಕಿತ ಉಗ್ರರ ಮಹಜರು-ಸದನದಲ್ಲಿ ರಾಜೇಶ್ ನಾಯ್ಕ್ ಪ್ರಸ್ತಾಪ

ಸಮಗ್ರ ನ್ಯೂಸ್: ಶಾಸಕ ರಾಜೇಶ್ ನಾಯ್ಕ್ ಅವರು ಅಧಿವೇಶನದಲ್ಲಿ ನಾವೂರ ದಲ್ಲಿ ಶಿವಮೊಗ್ಗ ದ ಆರೋಪಿಯನ್ನು ಮಹಜರು ಮಾಡಿದ ವಿಚಾರವಾಗಿ ಶೂನ್ಯ ವೇಳೆಯಲ್ಲಿ ಪ್ರಶ್ನೆ ಎತ್ತಿದ್ದಾರೆ. ಶೂನ್ಯ ವೇಳೆಯಲ್ಲಿ ವಿಚಾರ ಪ್ರಸ್ತಾಪಿಸಿದ ಅವರು, ಈ ಪ್ರಕರಣಕ್ಕೆ ಆತನಿಗೆ ಸ್ಥಳೀಯರು ಯಾರು ಸಹಕಾರ ನೀಡಿದ್ದಾರೆ ಎಂಬುವುದನ್ನು ಸಮರ್ಪಕ ಮಾಹಿತಿ ವಿಚಾರಣೆ ನಡೆಸಿ ಬಹಿರಂಗಗೊಳಿಸಬೇಕು. ಮತ್ತು ಆರೋಪಿಗಳಿಗೆ ಸ್ಥಳಾವಕಾಶ ನೀಡಿದ್ದಾರೆಯೇ ಎಂಬುದರ ಕುರಿತು ಕೂಲಂಕಷವಾಗಿ ಪರಿಶೀಲಿಸಿ ತನಿಖೆ ನಡೆಸುವಂತೆ ಒತ್ತಾಯ ಸದನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮನವಿ ಮಾಡಿದ್ದಾರೆ.

ಬಂಟ್ವಾಳ: ನಾವೂರಲ್ಲಿ ಶಂಕಿತ ಉಗ್ರರ ಮಹಜರು-ಸದನದಲ್ಲಿ ರಾಜೇಶ್ ನಾಯ್ಕ್ ಪ್ರಸ್ತಾಪ Read More »

ರಾಜ್ಯದಲ್ಲಿ ಪ್ರೌಢಶಿಕ್ಷಣ ಹಾಗೂ ಪಿಯು ಶಿಕ್ಷಣ ಇಲಾಖೆ ವಿಲೀನಕ್ಕೆ ಅಸ್ತು

ಸಮಗ್ರ ನ್ಯೂಸ್: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದರು. ನಂತರ ಮಾತನಾಡಿದ ಸಚಿವರು ‘ ರಾಷ್ಟ್ರೀಯ ಶಿಕ್ಷಣ ನೀರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮ ಹಾಗ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು. ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್

ರಾಜ್ಯದಲ್ಲಿ ಪ್ರೌಢಶಿಕ್ಷಣ ಹಾಗೂ ಪಿಯು ಶಿಕ್ಷಣ ಇಲಾಖೆ ವಿಲೀನಕ್ಕೆ ಅಸ್ತು Read More »

ರಾಜ್ಯದಲ್ಲಿ ಕಟ್ಟೆಚ್ಚರವಹಿಸಿ, ಸಂಘಟನೆಗಳ ಮುಖಂಡರು ಎಚ್ಚರದಿಂದಿರಿ| ಅಹಿತಕರ ಘಟನೆ ಸಾಧ್ಯತೆ ಹಿನ್ನಲೆ ಪೊಲೀಸರಿಂದ ಹೈ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳ ಕಚೇರಿಗಳ ಮೇಲೆ ಎನ್‌ಐಎ ಹಾಗೂ ಪೊಲೀಸರ ದಾಳಿ ನಡೆದ ಬಳಿಕ ಎಲ್ಲ ಕಡೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗಾಗಿ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರಗಳ ಪೊಲೀಸ್‌ ಕಮೀಷನರ್‌ಗಳು, ಎಲ್ಲ ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ಕಳುಹಿಸಿರುವ ಸುತ್ತೋಲೆಯಲ್ಲಿ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ. ರಾಜ್ಯದ

ರಾಜ್ಯದಲ್ಲಿ ಕಟ್ಟೆಚ್ಚರವಹಿಸಿ, ಸಂಘಟನೆಗಳ ಮುಖಂಡರು ಎಚ್ಚರದಿಂದಿರಿ| ಅಹಿತಕರ ಘಟನೆ ಸಾಧ್ಯತೆ ಹಿನ್ನಲೆ ಪೊಲೀಸರಿಂದ ಹೈ ಅಲರ್ಟ್ Read More »

ಕುಕ್ಕೆ: ಸರ್ಪಸಂಸ್ಕಾರ ಸೇವಾ ದರ ಪರಿಷ್ಕರಣೆ| ಭಕ್ತಾದಿಗಳಿಗೆ ತಟ್ಟಿದ ದರ ಏರಿಕೆ‌ ಬಿಸಿ

ಸಮಗ್ರ ನ್ಯೂಸ್: ಪ್ರಸಿದ್ದ ನಾಗಾರಾಧನಾ ಪುಣ್ಯತಾಣ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಅಧೀನದ ಪುರಾಣ ಪ್ರಸಿದ್ಧ ಪುಣ್ಯ ಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವಾ ದರವನ್ನು ಪರಿಷ್ಕರಿಸಲಾಗಿದೆ. ಇನ್ನು ಮುಂದೆ ನಡೆಸಲ್ಪಡುವ ‌ಸೇವೆಗಳಿಗೆ 4200 ರೂ ಪರಿಷ್ಕೃತ ದರವನ್ನು ನಿಗದಿಪಡಿಸಲಾಗಿದ್ದು, ಭಕ್ತಾದಿಗಳಿಗೆ ದರ ಏರಿಕೆ‌ ಬಿಸಿ ತಟ್ಟಿದೆ. ಕರ್ನಾಟಕ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಶ್ರೀ ದೇವಳದಲ್ಲಿ ಸರ್ಪದೋಷ ನಿವಾರಣೆಗಾಗಿನಡೆಸುವ ಸರ್ಪಸಂಸ್ಕಾರ ಸೇವೆಯ ಸೇವಾ

ಕುಕ್ಕೆ: ಸರ್ಪಸಂಸ್ಕಾರ ಸೇವಾ ದರ ಪರಿಷ್ಕರಣೆ| ಭಕ್ತಾದಿಗಳಿಗೆ ತಟ್ಟಿದ ದರ ಏರಿಕೆ‌ ಬಿಸಿ Read More »

ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಲು ಪ್ರೇರೇಪಣೆ ಆರೋಪ| ಪಿಎಫ್ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಅರೆಸ್ಟ್

ಸಮಗ್ರ ನ್ಯೂಸ್: ಎನ್ ಐ ಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಫಿಎಫ್‌ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ನನ್ನು ಬಂಧಿಸಿದ್ದಾರೆ. ಈತನನ್ನು ದೆಹಲಿಗೆ ಕರೆತರಲಾಗುತ್ತಿದ್ದು, ಬಳಿಕ ಎನ್ ಐ ಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಹೇಳಲಾಗಿದೆ. ಯಾಸಿರ್ ಹಸನ್ ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಿಸಲು ಪ್ರೇರೇಪಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.‌ ದೇಶದ ಒಳಗೆ ಹಣ ಒಗ್ಗೂಡಿಸಿ ಟೆರರ್ ಫಂಡಿಂಗ್ ನಡೆಸುತ್ತಿದ್ದನು ಎಂಬ ಆರೋಪದಡಿ ಅಧಿಕೃತವಾಗಿ ಯಾಸಿರ್ ಹಸನ್ ನ್ನು ಬಂಧಿಸಿ ಕರೆ ತರಲಾಗುತ್ತಿದೆ ಎಂಬ

ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಲು ಪ್ರೇರೇಪಣೆ ಆರೋಪ| ಪಿಎಫ್ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಅರೆಸ್ಟ್ Read More »