September 2022

ತಿರುಪತಿ ತಿಮ್ಮಪ್ಪನಿಗೆ ಮುಸ್ಲಿಂ ಉದ್ಯಮಿಯಿಂದ ₹ 1ಕೋಟಿ ದೇಣಿಗೆ

ಸಮಗ್ರ ನ್ಯೂಸ್: ತಿರುಪತಿ ವೆಂಕಟೇಶ್ವರ ಸ್ವಾಮಿಯ ಭಕ್ತರಾಗಿರುವ ಚೆನ್ನೈನ ಉದ್ಯಮಿ ಅಬ್ದುಲ್‌ ಘನಿ ಎಂಬುವವರು ದೇವಸ್ಥಾನಕ್ಕೆ ಮಂಗಳವಾರ ₹1.02 ಕೋಟಿ ದೇಣಿಗೆ ನೀಡಿದ್ದಾರೆ. ಪತ್ನಿ ಸುಬೀನಾಬಾನು ಮತ್ತು ಮಕ್ಕಳೊಂದಿಗೆ ಮಂಗಳವಾರ ದೇವರ ದರ್ಶನ ಪಡೆದ ಘನಿ ಅವರು ತಿರುಪತಿ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ ಪೀಠೋಪಕರಣ ಹಾಗೂ ಪಾತ್ರೆಗಳನ್ನು ಖರೀದಿಸಲು ₹87 ಲಕ್ಷ ಹಾಗೂ ಎಸ್‌.ವಿ.ಅನ್ನಪ್ರಸಾದಂ ಟ್ರಸ್ಟ್‌ಗೆ ₹15 ಲಕ್ಷ ಒದಗಿಸಿದರು. ತಿರುಪತಿ ತಿರುಮಲ ದೇವಾಲಯ ಸಮಿತಿಯ ಅಧಿಕಾರಿಯೊಬ್ಬರಿಗೆ ಘನಿ ಕುಟುಂಬದವರು […]

ತಿರುಪತಿ ತಿಮ್ಮಪ್ಪನಿಗೆ ಮುಸ್ಲಿಂ ಉದ್ಯಮಿಯಿಂದ ₹ 1ಕೋಟಿ ದೇಣಿಗೆ Read More »

ಉದ್ದೀಪನ ಮದ್ದು ಸೇವನೆ ಪ್ರಕರಣ| ಎಂ.ಆರ್ ಪೂವಮ್ಮಗೆ ಎರಡು ವರ್ಷ ನಿಷೇಧ

ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ ರಿಲೇ ಚಿನ್ನದ ಪದಕ ವಿಜೇತೆ ಎಂ.ಆರ್.ಪೂವಮ್ಮ ಅವರಿಗೆ ರಾಷ್ಟ್ರೀಯ ಉದ್ದೀಪನ ನಿಗ್ರಹ ಘಟಕ ಮೇಲ್ಮನವಿ ಸಮಿತಿಯು ಎರಡು ವರ್ಷಗಳ ನಿಷೇಧ ಶಿಕ್ಷೆ ವಿಧಿಸಿದೆ. ಕೇವಲ ಮೂರು ತಿಂಗಳ ನಿಷೇಧವನ್ನು ನೀಡಿದ ಶಿಸ್ತಿನ ಸಮಿತಿಯ ನಿರ್ಧಾರವನ್ನು ಈ ಪ್ಯಾನೆಲ್‌ ರದ್ದು ಮಾಡಿದೆ. ಈ ನಿಷೇಧದ ಕಾರಣದಿಂದಾಗಿ ಎಂಆರ್‌ ಪೂವಮ್ಮ ಮುಂದಿನ ವರ್ಷ ನಡೆಯಲಿರುವ ವಿಶ್ವ ಚಾಂಪಿಯನ್‌ಷಿಪ್‌ ಹಾಗೂ ಏಷ್ಯನ್‌ ಗೇಮ್ಸ್‌ನಿಂದ ಹೊರಬಿದ್ದಂತಾಗಿದೆ. 2021ರ ಫೆಬ್ರವರಿ 18 ರಂದು ಪಟಿಯಾಲಾದಲ್ಲಿ ನಡೆದ ಇಂಡಿಯನ್ ಗ್ರ್ಯಾಂಡ್

ಉದ್ದೀಪನ ಮದ್ದು ಸೇವನೆ ಪ್ರಕರಣ| ಎಂ.ಆರ್ ಪೂವಮ್ಮಗೆ ಎರಡು ವರ್ಷ ನಿಷೇಧ Read More »

ಮಂಗಳೂರು‌ ದಸರಾಕ್ಕೆ ಕೆಎಸ್ಆರ್ ಟಿಸಿ‌ ವಿಶೇಷ ಪ್ಯಾಕೇಜ್| ಮೊದಲ ಬಾರಿಗೆ ನಿಗಮದಿಂದ ಮಂಗಳೂರು ದರ್ಶನ ಪ್ರವಾಸ

ಸಮಗ್ರ ನ್ಯೂಸ್: ಇದೇ ಮೊದಲ ಬಾರಿಗೆ ಕೆಎಸ್‌ಆರ್ಟಿಸಿಯ ಮಂಗಳೂರು ವಿಭಾಗವು ಮಂಗಳೂರು ದಸರಾ ದರ್ಶನ ಪ್ರವಾಸಕ್ಕಾಗಿ ವಿಶೇಷ ಪ್ಯಾಕೇಜ್ ಅನ್ನು ಯೋಜಿಸಿದೆ. ಇದು ದಕ್ಷಿಣ ಕನ್ನಡದ ಒಂಬತ್ತು ಪ್ರಮುಖ ದೇವಾಲಯಗಳನ್ನು ಒಳಗೊಳ್ಳುತ್ತದೆ. ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ನವರಾತ್ರಿ ಉತ್ಸವದ ಎಲ್ಲಾ ದಿನಗಳಲ್ಲಿ ಒಂದು ದಿನದ ಪ್ರವಾಸ ಪ್ಯಾಕೇಜ್ ಲಭ್ಯವಿರುತ್ತದೆ. ಬೆಳಿಗ್ಗೆ 8 ರಿಂದ ರಾತ್ರಿ 10.30 ರವರೆಗೆ ಒಂದು ದಿನದ ಪ್ರವಾಸವು ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರಾರಂಭವಾಗಲಿದೆ. ಮಂಗಳಾದೇವಿ ದೇವಸ್ಥಾನ, ಪೊಳಲಿ ಶ್ರೀ

ಮಂಗಳೂರು‌ ದಸರಾಕ್ಕೆ ಕೆಎಸ್ಆರ್ ಟಿಸಿ‌ ವಿಶೇಷ ಪ್ಯಾಕೇಜ್| ಮೊದಲ ಬಾರಿಗೆ ನಿಗಮದಿಂದ ಮಂಗಳೂರು ದರ್ಶನ ಪ್ರವಾಸ Read More »

ವಿಜಯಪುರ: ಜಾನುವಾರುಗಳಿಗೆ ವ್ಯಾಪಕವಾಗಿ ಹಬ್ಬುತ್ತಿರುವ ಚರ್ಮಗಂಟು ರೋಗ| ಸಾಗಾಟ‌ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ಜಾನುವಾರಗಳಲ್ಲಿ ಚರ್ಮಗಂಟು ವ್ಯಾಪಕವಾಗಿ ಹರಡುತ್ತಿರುವ ಕಾರಣ ರೋಗ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜಾನುವಾರು ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಡಾ. ವಿಜಯ ಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಹತ್ತಿರದ ಮಹಾರಾಷ್ಟ್ರ ರಾಜ್ಯದಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗವು ವ್ಯಾಪಕವಾಗಿ ಹರಡುತ್ತಿದೆ. ವಿಜಯಪುರ ಜಿಲ್ಲೆಯು ಮಹಾರಾಷ್ಟ್ರ ಗಡಿಭಾಗದಲ್ಲಿದ್ದು, ಇಲ್ಲಿಯೂ ಸಹ ಅಲ್ಲಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದೆ. ಮುಂಬರುವ ದಿನಗಳಲ್ಲಿ ಇದು ಇನ್ನೂ ಉಲ್ಬಣವಾಗದಂತೆ ರೋಗ ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲೆಯಲ್ಲಿ ಗೋಟಪಾಕ್ಸ್ ಲಸಿಕೆಗಳನ್ನು

ವಿಜಯಪುರ: ಜಾನುವಾರುಗಳಿಗೆ ವ್ಯಾಪಕವಾಗಿ ಹಬ್ಬುತ್ತಿರುವ ಚರ್ಮಗಂಟು ರೋಗ| ಸಾಗಾಟ‌ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ Read More »

ವಿಜಯಪುರ ಜಿಲ್ಲೆಯಲ್ಲಿ ಸೆ.26 ರಂದು 26ರಂದು ಮಿನಿ ಉದ್ಯೋಗ ಮೇಳ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸೆಪ್ಟೆಂಬರ್ 26ರಂದು ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಳಿಗ್ಗೆ 10 ರಿಂದ ಸಂಜೆ 4ಗಂಟೆಗಳವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವಿಜಯಪುರದಲ್ಲಿ, ವಿವಿಧ ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ಈ ಮೇಳದಲ್ಲಿ ಎಸ್. ಎಸ್.ಎಲ್.ಸಿ., ಪಿ.ಯು.ಸಿ,ಐ.ಟಿ.ಐ, ಪದವಿ ಪಾಸ್ ಆದಂತಹ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಈ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08352-250383 : 9945000793

ವಿಜಯಪುರ ಜಿಲ್ಲೆಯಲ್ಲಿ ಸೆ.26 ರಂದು 26ರಂದು ಮಿನಿ ಉದ್ಯೋಗ ಮೇಳ Read More »

ಸುಳ್ಯ: ಸರ್ಕಾರಿ ಜಾಗ ಅತಿಕ್ರಮಣಕ್ಕೆ ಯತ್ನ..! ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ|

ಸಮಗ್ರ ನ್ಯೂಸ್: ಸರಕಾರಿ ಜಾಗವನ್ನು ಅತಿಕ್ರಮಣಕ್ಕೆ ಯತ್ನಿಸಿದ್ದು, ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವ ಘಟನೆ ಸುಳ್ಯ ನಗರದ ಜಯನಗರ ಎಂಬಲ್ಲಿ ನಡೆದಿದೆ. ಜಯನಗರದ ಸರಕಾರಿ ಶಾಲೆಯ ಸಮೀಪ ಗೋಪಾಲ್ ನಾಯಕ್ ಎಂಬವರಿಗೆ ವಾಸಿಸಲು ಮನೆ ಮತ್ತು ಖಾಲಿ ಜಾಗವಿದ್ದರೂ ಸರಕಾರಿ ಜಾಗವನ್ನು ಅತಿಕ್ರಮಣ ಮಾಡಲು ಸೆ.16 ರಂದು ಜೆ.ಸಿ.ಬಿ ತರಿಸಿ ಕೆಲಸ ಪ್ರಾರಂಭಿಸಿದ್ದರು. ಈ ವೇಳೆ ಸ್ಥಳೀಯರಾದ ಹಸೈನಾರ್ ಜಯನಗರ ಎಂಬವರು ಇದನ್ನು ತಡೆ ಹಿಡಿದು, ಈ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು,

ಸುಳ್ಯ: ಸರ್ಕಾರಿ ಜಾಗ ಅತಿಕ್ರಮಣಕ್ಕೆ ಯತ್ನ..! ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ| Read More »

 ಸಿನಿಮಾ ಶೂಟಿಂಗ್ ವೇಳೆ ಬಾಲಿವುಡ್ ಖ್ಯಾತ ನಟನ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್:  ಕಾಶ್ಮೀರದ ಸುಂದರ ಕಣಿವೆಗಳಲ್ಲಿ ಸಿನಿಮಾ ಶೂಟಿಂಗ್‌ ಮಾಡುತ್ತಿದ್ದ ಬಾಲಿವುಡ್‌ ಖ್ಯಾತ ನಟನ ಮೇಲೆ ಕಲ್ಲು ತೂರಾಟ ನಡೆದಿದೆ. ಬಾಲಿವುಡ್‌ನ ಖ್ಯಾತ ನಟ ಇಮ್ರಾನ್ ಹಶ್ಮಿ ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಟ ಇಮ್ರಾನ್ ಹಶ್ಮಿ ಈ ದಿನಗಳಲ್ಲಿ ತಮ್ಮ ಮುಂಬರುವ ಚಿತ್ರದ ಚಿತ್ರೀಕರಣವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಸುತ್ತಿದ್ದಾರೆ. ಇಮ್ರಾನ್ ಹಶ್ಮಿ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಮುಂಬರುವ ಚಿತ್ರ ‘ಗ್ರೌಂಡ್ ಜೀರೋ’ ಚಿತ್ರೀಕರಣದಲ್ಲಿ

 ಸಿನಿಮಾ ಶೂಟಿಂಗ್ ವೇಳೆ ಬಾಲಿವುಡ್ ಖ್ಯಾತ ನಟನ ಮೇಲೆ ಕಲ್ಲು ತೂರಾಟ Read More »

ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿ

ಉಡುಪಿ: ಮೀನಿನ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆಯೊಂದು ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು ಹೇರಿಕೊಂಡು ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದೆ. ಟೆಂಪೋ ಚಾಲಕನಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ಹೆಜಮಾಡಿ ಟೋಲ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಹೆದ್ದಾರಿಯಿಂದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಆನುವು ಮಾಡಿದ್ದಾರೆ. ಸ್ಥಳಕ್ಕೆ ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಭೇಟಿ ನೀಡಿ

ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿ Read More »

ಅಪಾರ್ಟ್ಮೆಂಟ್ ಕಟ್ಟಡದ ಗೋಡೆ ಕುಸಿದು 4 ಮಂದಿ ಸಾವು

ಸಮಗ್ರ ನ್ಯೂಸ್ : ಅಪಾರ್ಟ್‌ ಮೆಂಟ್‌ ಕಟ್ಟಡದ ಗೋಡೆ ಕುಸಿದು ನಾಲ್ಕು ಮಂದಿ ಮೃತಪಟ್ಟ ಘಟನೆಯೊಂದು ನೋಯ್ಡಾದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ನೋಯ್ಡಾದ ಸೆಕ್ಟರ್‌ ೨೧ರಂದು ವಸತಿ ಸಂಕೀರ್ಣ ಜಲ್‌ ವಾಯು ವಿಹಾರದಲ್ಲಿ ಈ ಘಟನೆ ಸಂಭವಿಸಿದ್ದು, ೧೨ ಮಂದಿ ಅವಶೇಷಗಳಡಿ ಸಿಲುಕಿದ್ದು, ಬುಲ್ಡೋಜರ್‌ ಮೂಲಕ ರಕ್ಷಣಾ ಕಾರ್ಯ ನಡೆದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತೆರಳಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗೋಡೆಯ ಇಟ್ಟಿಗೆಗಳನ್ನು ತೆಗೆಯುವಂತೆ

ಅಪಾರ್ಟ್ಮೆಂಟ್ ಕಟ್ಟಡದ ಗೋಡೆ ಕುಸಿದು 4 ಮಂದಿ ಸಾವು Read More »

ಮೈಸೂರು; ಅ.1 ರಂದು‌ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆ

ಮೈಸೂರು: ನಾಡಹಬ್ಬ ದಸರಾವನ್ನು ಈ ಬಾರಿ  ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ರೈತ ದಸರಾ ಅಂಗವಾಗಿ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಅಕ್ಟೋಬರ್ 1ರಂದು ಜೆ.ಕೆ. ಮೈದಾನದಲ್ಲಿ ಈ ಸ್ಪರ್ಧೆ ನಡೆಯಲಿದ್ದು, ಗೋ ಪಾಲಕರು ಸೆಪ್ಟಂಬರ್ 29 ರಂದು ತಮ್ಮ ಹಸುಗಳೊಂದಿಗೆ ಆಗಮಿಸಿ ನೋಂದಾಯಿಸಬೇಕಾಗಿದೆ. ಸೆಪ್ಟೆಂಬರ್ 30 ಒಂದು ದಿನ ವಿಶ್ರಾಂತಿ ಇರಲಿದ್ದು, ಅಕ್ಟೋಬರ್ 1ರಂದು ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಪ್ರಥಮ ಬಹುಮಾನ 50,000 ರೂಪಾಯಿ, ದ್ವಿತೀಯ ಬಹುಮಾನ 40,000 ರೂಪಾಯಿ, ತೃತೀಯ ಬಹುಮಾನ 30,000 ರೂಪಾಯಿ ಹಾಗೂ

ಮೈಸೂರು; ಅ.1 ರಂದು‌ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆ Read More »