September 2022

ಉದ್ಯೋಗ ದಲ್ಲಿದ್ದ ಯುವಕ ಹಣವಿದ್ದ ಬ್ಯಾಗ್ ನೊಂದಿಗೆ ನಾಪತ್ತೆ

ಸಮಗ್ರ ನ್ಯೂಸ್: ಹಣವಿದ್ದ ಬ್ಯಾಗ್‌ನೊಂದಿಗೆ ಹೋದ ಯುವಕ ಮನೆಗೂ ಬಾರದೆ, ಕೆಲಸಕ್ಕೂ ಹಾಜರಾಗದೇ ನಾಪತ್ತೆಯಾದ ಘಟನೆಯೊಂದು ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ನಗರದ ಮಾಯಾ ಟ್ರೇಡರ್ಸ್‌ನಲ್ಲಿ ಉದ್ಯೋಗಿಯಾಗಿರುವ ಕೃಷ್ಣ ಶೆಣೈ (23) ಎಂದು ಗುರುತಿಸಲಾಗಿದೆ. ಈತ ಮೂರು ತಿಂಗಳಿಂದ ಮಾಯಾ ಟ್ರೇಡರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದು, ಕೆಲವರಿಂದ ಸಾಲ ಪಡೆದಿದ್ದು, ಇದನ್ನು ತೀರಿಸುವ ಸಲುವಾಗಿ ಭುವನೇಂದ್ರ ಬ್ಯಾಂಕ್‌ನಿಂದ ಎರಡು ಲಕ್ಷ ರೂಪಾಯಿ ಸಾಲವನ್ನೂ ಕೂಡಾ ಪಡೆದಿದ್ದು, ಆದರೆ ಆತ ಅಂದಿನಿಂದ ನಾಪತ್ತೆಯಾಗಿದ್ದಾನೆ. ಕೃಷ್ಣ 5 ಅಡಿ 11 ಇಂಚು ಎತ್ತರ, […]

ಉದ್ಯೋಗ ದಲ್ಲಿದ್ದ ಯುವಕ ಹಣವಿದ್ದ ಬ್ಯಾಗ್ ನೊಂದಿಗೆ ನಾಪತ್ತೆ Read More »

ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸಿ, ಪ್ಲಾಟ್ ಫಾರಂ ನಿಂದ ಕೆಳಗೆ ಬಿದ್ದು, ತಂದೆ ಮಗ ಮೃತ್ಯು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ, ಮಗ ಮೃತಪಟ್ಟ ಘಟನೆಯೊಂದು ಭದ್ರಾವತಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಘಟನೆ ನಡೆದಿದೆ. ತಾಳಗುಪ್ಪ – ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿದ ಇಬ್ಬರು ಸಾವನ್ನಪ್ಪಿದರು. ರವಿವಾರ ರಾತ್ರಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೋಹನ್ ಪ್ರಸಾದ್ (70 ವ) ಮತ್ತು ಅಮರನಾಥ್ (30 ವ) ಮೃತರು ಎಂದು

ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸಿ, ಪ್ಲಾಟ್ ಫಾರಂ ನಿಂದ ಕೆಳಗೆ ಬಿದ್ದು, ತಂದೆ ಮಗ ಮೃತ್ಯು Read More »

ಯುಡಿಐಡಿ ಸ್ಮಾರ್ಟ್ ಕಾರ್ಡ್ ಪಡೆಯಲು ವಿಕಲಚೇತನರಿಂದ ಆನ್ಲೈನ್ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಈಗಾಗಲೇ ಗುರುತಿನ ಚೀಟಿ (ಯುಡಿಐಡಿ ಸ್ಮಾರ್ಟ್ ಕಾರ್ಡ್) ಪಡೆದಿರುವ ಹಾಗೂ ಹೊಸದಾಗಿ ಗುರುತಿನ ಚೀಟಿ ಪಡೆಯಲು ಎಲ್ಲಾ ವಿಕಲಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿಶಿಷ್ಟ ಅಂಗವಿಕಲ ಗುರುತಿನ ಚೀಟಿಯನ್ನು (ಯುಡಿಐಡಿ ಸ್ಮಾರ್ಟ್‍ಕಾರ್ಡ್) ಹೊಂದದೇ ಇರುವ ಅಂಗವಿಕಲರು ಕೇಂದ್ರ, ರಾಜ್ಯ ಸರ್ಕಾರದಿಂದ ಪಡೆಯಲಾಗುತ್ತಿರುವ ಯೋಜನೆಗಳನ್ನು ಶೀಘ್ರದಲ್ಲಿ ಸ್ಥಗಿತಗೊಳಿಸಲಾಗುತ್ತದೆ. ಆದ್ದರಿಂದ ಜಿಲ್ಲೆಯ ಎಲ್ಲ ವಿಕಲಚೇತನರು www.swavalambacard.gov.in ವೆಬ್‍ಸೈಟ್ ಮೂಲಕ ನೋಂದಾಯಿಸಿಕೊಂಡು ವೈದ್ಯಕೀಯ ಪ್ರಾಧಿಕಾರಗಳಿಂದ ತಪಾಸಣೆಯನ್ನು

ಯುಡಿಐಡಿ ಸ್ಮಾರ್ಟ್ ಕಾರ್ಡ್ ಪಡೆಯಲು ವಿಕಲಚೇತನರಿಂದ ಆನ್ಲೈನ್ ಅರ್ಜಿ ಆಹ್ವಾನ Read More »

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಬೃಹದಾಕಾರದ ಮರ; ಓರ್ವ ಬಲಿ

ಸಮಗ್ರ ನ್ಯೂಸ್: ಚಲಿಸುತ್ತಿರುವ ಬೈಕ್ ಮೇಲೆ ಬೃಹದಾಕಾರದ ಮರ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಗರದ ಆರ್​.ಟಿ.ಓ ಸರ್ಕಲ್ ಬಳಿ ನಡೆದಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸತತವಾಗಿ ಭಾರೀ ಮಳೆ ಸುರಿಯುತ್ತಿರುವುದರಿಂದ ಈ ದುರಂತ ಸಂಭವಿಸಿದೆ.ಬೃಹದಾಕಾರದ ಮರ ಬಿದ್ದ ಪರಿಣಾಮ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಮೃತಪಟ್ಟಿರುವ ವ್ಯಕ್ತಿಯ ಹೆಸರು ಇನ್ನು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಬೃಹದಾಕಾರದ ಮರ; ಓರ್ವ ಬಲಿ Read More »

” ನೀರು ಕೊಡೋ ಮಗನೇ ಏಕವಚನದಲ್ಲಿ ಕೇಳಿದಕ್ಕೆ ಎರಡು ಆಟೋ ಚಾಲಕರ ಗಲಾಟೆಯಲ್ಲಿ ಓರ್ವ ಸಾವು

ಸಮಗ್ರ ನ್ಯೂಸ್: “ನೀರು ಕೊಡೋ ಮಗನೇ’ ಎಂದು ಏಕವಚನದಲ್ಲಿ ಕೇಳಿದ ವಿಚಾರಕ್ಕೆ ಇಬ್ಬರು ಆಟೋ ಚಾಲಕರ ನಡುವೆ ನಡೆದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪೀಣ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರ್‌.ಟಿ.ನಗರ ನಿವಾಸಿ ಸಿದ್ದಿಕ್‌ (23) ಕೊಲೆಯಾದ ಆಟೋ ಚಾಲಕ. ಈ ಸಂಬಂಧ ಅಜಯ್‌ ಎಂಬ ಆಟೋ ಚಾಲಕನನ್ನು ಬಂಧಿಸಲಾಗಿದೆ. ಜಾಲಹಳ್ಳಿ ಕ್ರಾಸ್‌ನಲ್ಲಿರುವ ಆಟೋ ನಿಲ್ದಾಣದಲ್ಲಿ ರಾತ್ರಿ 11.30ರ ಸುಮಾರಿಗೆ ಅಜಯ್‌ ಎಂಬಾತ ಆಟೋ ನಿಲ್ಲಿಸಿಕೊಂಡು ನಿಂತಿದ್ದ. ಅದೇ ವೇಳೆಯಲ್ಲಿ ಸಿದ್ದಿಕ್‌ ಆಟೋ ನಿಲ್ದಾಣಕ್ಕೆ ಬಂದಿದ್ದಾನೆ. ಆಗ

” ನೀರು ಕೊಡೋ ಮಗನೇ ಏಕವಚನದಲ್ಲಿ ಕೇಳಿದಕ್ಕೆ ಎರಡು ಆಟೋ ಚಾಲಕರ ಗಲಾಟೆಯಲ್ಲಿ ಓರ್ವ ಸಾವು Read More »

ಬಿಗ್ ಬಾಸ್ ರಿಯಾಲಿಟಿ ಶೋ ಗೆ ಕಾಲಿಡಲಿದ್ದಾರಾ ಅನಿರುದ್ಧ್

ಬೆಂಗಳೂರು : ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಬಂದ ನಂತರ ನಟ ಅನಿರುದ್ಧ್‌ ರಿಯಾಲಿಟಿ ಶೋ ಬಿಗ್‌ ಬಾಸ್‌ ಮನೆಗೆ ಹೋಗಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ರಿಯಾಲಿಟಿ ಶೋ ಬಿಗ್‌ ಬಾಸ್‌-9ರ ಪೂರ್ಣ ಪ್ರಮಾಣದ ಆವೃತ್ತಿಯಲ್ಲಿ ಅನಿರುದ್ಧ್‌ ಕಾಣಿಸಿಕೊಳ್ಳಲಿದ್ದಾರೆ. ಬಿಗ್‌ ಬಾಸ್‌ ಓಟಿಟಿ ಶೋ ಕೊನೆಯ ಹಂತಕ್ಕೆ ತಲುಪಿದ್ದು, ಈ ವಾರ ಫಿನಾಲೆ ನಡೆಯಲಿದೆ. ಇದರ ಬೆನ್ನಲ್ಲೇ ಟಿವಿಯಲ್ಲಿ ಪ್ರಸಾರವಾಗುವ 100 ದಿನಗಳ ರಿಯಾಲಿಟಿ ಶೋನಲ್ಲಿ ಅನಿರುದ್ಧ್‌ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ಆವೃತ್ತಿಯಲ್ಲೇ ಅನಿರುದ್ಧ್‌ ಬಿಗ್‌

ಬಿಗ್ ಬಾಸ್ ರಿಯಾಲಿಟಿ ಶೋ ಗೆ ಕಾಲಿಡಲಿದ್ದಾರಾ ಅನಿರುದ್ಧ್ Read More »

ಕನ್ನಡದ ಖ್ಯಾತ ಲೇಖಕ, ಸಮಾಜಸೇವಕ ಡಾ.ರಾಮಕೃಷ್ಣ ರಾವ್ ನಿಧನ

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಕನ್ನಡದ ಮಹಾನ್ ವಿಜ್ಞಾನ ಬರಹಗಾರ, ಪ್ರಾಧ್ಯಾಪಕ, ಸಮಾಜಸೇವಕ ಡಾ.ರಾಮಕೃಷ್ಣರಾವ್(87) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ​ ನಿಧನರಾಗಿದ್ದಾರೆ. ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಭೌತಶಾಸ್ತ್ರ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗಗಳ ಮುಖ್ಯಸ್ಥರಾಗಿ ಸೇವೆಸಲ್ಲಿಸಿ ನಿವೃತ್ತರಾಗಿದ್ದಾರೆ. ನಿವೃತ್ತಿಯ ನಂತರ ಸಂದರ್ಶಕ ಪ್ರಾಧ್ಯಾಪಕರಾಗಿ ಬೆಂಗಳೂರು ನಗರದ ಯುವ ವಿದ್ಯಾರ್ಥಿಗಳಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸಲು ಬೆಂಗಳೂರು ಆಕಾಶವಾಣಿಯನ್ನು ಬಳಸಿಕೊಂಡು ವಿಜ್ಞಾನ ಪ್ರಸಾರದಲ್ಲಿ ಖಗೋಳಶಾಸ್ತ್ರ,ನಕ್ಷತ್ರಗಳು, ಗ್ರಹಗಳಿಗೆ ಸಂಬಂಧಿಸಿದ ನಕ್ಷತ್ರ ವೀಕ್ಷಣೆ, ಮುಂತಾದ ಕಾರ್ಯಕ್ರಮಗಳನ್ನು ಸತತವಾಗಿ ನಡೆಸಿಕೊಟ್ಟ ಪ್ರಮುಖರಾಗಿದ್ದಾರೆ.

ಕನ್ನಡದ ಖ್ಯಾತ ಲೇಖಕ, ಸಮಾಜಸೇವಕ ಡಾ.ರಾಮಕೃಷ್ಣ ರಾವ್ ನಿಧನ Read More »

ಹೊಸ ತಿರುವು ತೆಗೆದುಕೊಂಡ ಅಥಣಿ ಹೆಸ್ಕಾಂ ನೌಕರನ ಆತ್ಮಹತ್ಯೆ ! /ಮೇಲಾಧಿಕಾರಿ, ಲೈನಮನ್ ಕಿರುಕುಳದಿಂದ ಆತ್ಮಹತ್ಯೆ, ಡೆತ್ ನೋಟ್‌ನಲ್ಲಿ ಉಲ್ಲೇಖ.

ಅಥಣಿ : ಅಥಣಿ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಮೇಲಾಧಿಕಾರಿ, ಲೈನ್ ಮನ್ ಕಿರುಕುಳಕ್ಕೆ ಬೇಸತ್ತು ಓರ್ವ ಕಾರ್ಮಿಕ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದೀಗ ಹೊಸತಿರುವು ಪಡೆದುಕೊಂಡಿದೆ. ಕಳೆದ ಸೋಮವಾರ ಮಂಜುನಾಥ ಗಂಗಾಧರ ಮುತ್ತಗಿ ಆತ್ಮಹತ್ಯೆ ಮಾಡಿಕೊಂಡಿರುವ ಹೆಸ್ಕಾಂ ಗುತ್ತಿಗೆ ಕಾರ್ಮಿಕ. ಮೂಲತಃ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದ ನಿವಾಸಿಯಾಗಿದ್ದು. ಸಧ್ಯ ಅಥಣಿ ಹೆಸ್ಕಾಂ ಕಚೇರಿಯಲ್ಲಿ 07 ವರ್ಷದಿಂದ ಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಘಟನೆ ಸ್ಥಳಕ್ಕೆ ಅಥಣಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೊಸ ತಿರುವು ತೆಗೆದುಕೊಂಡ ಅಥಣಿ ಹೆಸ್ಕಾಂ ನೌಕರನ ಆತ್ಮಹತ್ಯೆ ! /ಮೇಲಾಧಿಕಾರಿ, ಲೈನಮನ್ ಕಿರುಕುಳದಿಂದ ಆತ್ಮಹತ್ಯೆ, ಡೆತ್ ನೋಟ್‌ನಲ್ಲಿ ಉಲ್ಲೇಖ. Read More »

ಪ್ರಧಾನಿ ಭೇಟಿ ನೀಡಿ ಹತ್ತೇದಿನದಲ್ಲಿ ಕಿತ್ತು ಹೋಯ್ತು‌ ಡಾಂಬರು| ಅಬ್ಬಬ್ಬಾ ನಮ್ಮ ಕಾಮಗಾರಿಗಳ ಗುಣಮಟ್ಟವೇ!!

ಸಮಗ್ರ ನ್ಯೂಸ್: ಮಂಗಳೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೂಳೂರು ಸೇತುವೆ ಮೇಲಿನ ಗುಂಡಿಗಳನ್ನು ಮುಚ್ಚುವ ಸಲುವಾಗಿ ಹಾಕಿದ್ದ ಡಾಂಬರು ಮೋದಿ ಭೇಟಿ ನೀಡಿ ಹೋದ ಹತ್ತೇ ದಿನಗಳಲ್ಲಿ ಕಿತ್ತುಹೋಗಿದೆ. ನವಮಂಗಳೂರು ಬಂದರಿನಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಸೆ.2ರಂದು ನಗರಕ್ಕೆ ಭೇಟಿ ನೀಡಿದ್ದರು. ಬಂಗ್ರಕೂಳೂರಿನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲು ಮೋದಿ ಅವರು ನವಮಂಗಳೂರು ಬಂದರಿನಿಂದ ರಸ್ತೆ ಮಾರ್ಗವಾಗಿ ಸಂಚರಿಸಿದ್ದರು. ಅವರು

ಪ್ರಧಾನಿ ಭೇಟಿ ನೀಡಿ ಹತ್ತೇದಿನದಲ್ಲಿ ಕಿತ್ತು ಹೋಯ್ತು‌ ಡಾಂಬರು| ಅಬ್ಬಬ್ಬಾ ನಮ್ಮ ಕಾಮಗಾರಿಗಳ ಗುಣಮಟ್ಟವೇ!! Read More »

ಗದರಿದ ಟೀಚರ್ ಗೆ ಅಪ್ಪಿ ಮುತ್ತಿಕ್ಕಿದ ಪುಟಾಣಿ| ಈ ಗುರುಶಿಷ್ಯರ ನಿಷ್ಕಲ್ಮಶ ಪ್ರೀತಿಯ ವಿಡಿಯೋ ವೈರಲ್

ಸಮಗ್ರ ಡಿಜಿಟಲ್ ಡೆಸ್ಕ್: ಮಕ್ಕಳು ತಮ್ಮ ಮನಸ್ಸಿನ ಭಾವನೆ ವ್ಯಕ್ತಪಡಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ. ಅದು ಕೋಪವಾದರೂ ಸರಿ, ಪ್ರೀತಿಯಾದರೂ ಸರಿ. ತಮ್ಮ ಭಾವನೆಯನ್ನು ಒಂದು ಚೂರೂ ಅಳುಕಿಲ್ಲದೆ ವ್ಯಕ್ತಪಡಿಸಿ ಬಿಡುತ್ತಾರೆ. ಹಿಂದೆಲ್ಲಾ ವಿದ್ಯಾರ್ಥಿಗಳು ತಪ್ಪು ಮಾಡಿದರೆ ಶಿಕ್ಷಕರು, ಹಿಡಿದು ಬಾರಿಸಿಬಿಡುತ್ತಿದ್ದರು. ಶಿಕ್ಷಕರ ಕೈಯಲ್ಲಿ ಯಾವಾಗಲೂ ಒಂದು ಬೆತ್ತ ಇದ್ದೇ ಇರುತ್ತಿತ್ತು. ಆ ಬೆತ್ತಕ್ಕೆ ಹೆದರಿಯೇ ವಿದ್ಯಾರ್ಥಿಗಳು ತೀಟೆ ಮಾಡುವ ಯೋಚನೆ ಕೂಡಾ ಮಾಡುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ. ಶಿಕ್ಷಕರು ಮಕ್ಕಳ ಮೇಲೆ ಕೈ ಮಾಡುವಂತಿಲ್ಲ.

ಗದರಿದ ಟೀಚರ್ ಗೆ ಅಪ್ಪಿ ಮುತ್ತಿಕ್ಕಿದ ಪುಟಾಣಿ| ಈ ಗುರುಶಿಷ್ಯರ ನಿಷ್ಕಲ್ಮಶ ಪ್ರೀತಿಯ ವಿಡಿಯೋ ವೈರಲ್ Read More »