September 2022

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸರ್ಕಾರದ ವಿರುದ್ದ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಮಂಡಲದ ಅಧಿವೇಶನ ಸೋಮವಾರ ಆರಂಭಗೊಳ್ಳಲಿದ್ದು, ಹತ್ತು ದಿನಗಳ ಕಲಾಪದಲ್ಲಿ (ಸೆ.12 ರಿಂದ ಸೆ.23) ಬಿಜೆಪಿ ಸರ್ಕಾರದ ಹೆಡೆಮುರಿ ಕಟ್ಟಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಹಲವು ‘ಅಸ್ತ್ರ’ಗಳನ್ನು ಸಿದ್ಧ ಮಾಡಿಕೊಂಡಿವೆ. ಗುತ್ತಿಗೆ ಕಾಮಗಾರಿಯಲ್ಲಿ ಶೇ 40 ಲಂಚದ ಆರೋಪ, ಇತ್ತೀಚಿನ ಮಳೆ ಮತ್ತು ಪ್ರವಾಹದಿಂದ ಜನರಿಗಾದ ಸಂಕಷ್ಟ, ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಅವಾಂತರ ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಉಭಯ ಪಕ್ಷಗಳು ಸಜ್ಜಾಗಿವೆ. ಇದಕ್ಕೆ ತಿರುಗೇಟು ನೀಡಲು ಬಿಜೆಪಿಯೂ ತಯಾರಿ […]

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸರ್ಕಾರದ ವಿರುದ್ದ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು Read More »

ಇಂದು(ಸೆ.12) ದ್ವಿತೀಯ ಪಿಯುಸಿ ಪೂರಕ ಫಲಿತಾಂಶ ಪ್ರಕಟ| ಫಲಿತಾಂಶ ವೀಕ್ಷಿಸುವುದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು (ಸೆ.12) ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿದ ಸಚಿವರು, ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ http://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ’ ಎಂದಿದ್ದಾರೆ. ಫಲಿತಾಂಶ ಪರಿಶೀಲಿಸುವುದು ಹೇಗೆ?karresults.nic.in ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.ಫಲಿತಾಂಶದ ಲಿಂಕ್ ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.ಫಲಿತಾಂಶದ ಲಿಂಕ್ ಅನ್ನು

ಇಂದು(ಸೆ.12) ದ್ವಿತೀಯ ಪಿಯುಸಿ ಪೂರಕ ಫಲಿತಾಂಶ ಪ್ರಕಟ| ಫಲಿತಾಂಶ ವೀಕ್ಷಿಸುವುದು ಹೇಗೆ ಗೊತ್ತಾ? Read More »

ಸಾ.ರಾ ಮಹೇಶ್ ಮೇಲೆ ಭೂ ಹಗರಣ ಆರೋಪ| ರೋಹಿಣಿ ಸಿಂಧೂರಿ ವಿರುದ್ಧ ಒಂದು ಕೋಟಿ ರೂ ಮಾನನಷ್ಟ ಮೊಕದ್ದಮೆ

ಸಮಗ್ರ ನ್ಯೂಸ್: ಮೈಸೂರು ಡಿಸಿ ಆಗಿದ್ದಾಗ ಐಎಎಸ್ ಅಧಿಕಾರಿ ರೋಹಿಣಿಯಿಂದ ಹಲವು ಅಕ್ರಮಗಳನ್ನು ಬಯಲು ಮಾಡಿದ್ದಕ್ಕೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಈ ಸಂಬಂಧ ರೋಹಿಣಿ ವಿರುದ್ಧ ಮಾನನಷ್ಟ ಕೇಸ್ ದಾಖಲು ಮಾಡುವುದಾಗಿ ಜೆಡಿಎಸ್​​ ಶಾಸಕ ಸಾ.ರಾ.ಮಹೇಶ್ ಮೈಸೂರಿನಲ್ಲಿ ಹೇಳಿಕೆ ನೀಡಿದರು. ನಗರದಲ್ಲಿ ಶಾಸಕ ಸಾ. ರಾ ಮಹೇಶ್, ವಕೀಲ್ ಅರುಣ್ ಕುಮಾರ್ ಜಂಟಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಜಿಲ್ಲಾಧಿಕಾರಿ ಐಶಾರಾಮಿ ಜೀವನ ನಡೆಸಿದ್ದಾರೆ. ಸರ್ಕಾರಿ ಹಣ ರ್ದುವಿನಿಯೋಗ, ಕೋವಿಡ್ ಸಂದರ್ಭದ ಕಾರ್ಯವೈಖರಿ

ಸಾ.ರಾ ಮಹೇಶ್ ಮೇಲೆ ಭೂ ಹಗರಣ ಆರೋಪ| ರೋಹಿಣಿ ಸಿಂಧೂರಿ ವಿರುದ್ಧ ಒಂದು ಕೋಟಿ ರೂ ಮಾನನಷ್ಟ ಮೊಕದ್ದಮೆ Read More »

ಬಿಗ್ ಬಾಸ್ ಆರಂಭಕ್ಕೆ ಕೆಲವೊಂದು ಧಾರಾವಾಹಿ ಅಂತ್ಯಗೊಳಿಸಿದ ಕಲರ್ಸ್ ಕನ್ನಡ

ಬೆಂಗಳೂರು: ಬಿಗ್ ಬಾಸ್ ಕನ್ನಡ 9 ನೇ ಆವೃತ್ತಿ ಆರಂಭವಾಗಲು ಕೆಲವೇ ದಿನ ಬಾಕಿಯಿದೆ. ಹೀಗಾಗಿ ಈ ಕಲರ್ಸ್ ವಾಹಿನಿ ಬಿಗ್ ಬಾಸ್ ಶೋ ಪ್ರಸಾರಕ್ಕೆ ಸಮಯ ನಿಗದಿಪಡಿಸಲು ಕೆಲವೊಂದು ಧಾರವಾಹಿಗಳಿಗೆ ಕತ್ತರಿ ಹಾಕಲು ಹೊರಟಿದೆ. ಬಿಗ್ ಬಾಸ್ ಕನ್ನಡ ಸೀಸನ್ 9 ಟಿವಿಯಲ್ಲಿ ಪ್ರಸಾರವಾಗಲಿದೆ. ಹೀಗಾಗಿ ಕಲರ್ಸ್ ವಾಹಿನಿ ತನ್ನ ಜನಪ್ರಿಯ ಧಾರವಾಹಿಗಳಾದ ನಮ್ಮನೆ ಯುವರಾಣಿ, ಕನ್ಯಾಕುಮಾರಿ, ಮಂಗಳಗೌರಿ ಮದುವೆ ಮತ್ತು ನನ್ನರಸಿ ರಾಧೆ ಎಂಬ ಮೂರು ಧಾರವಾಹಿಗಳನ್ನು ಅಂತ್ಯಗೊಳಿಸುತ್ತಿದೆ. ಈ ಜೊತೆಗೆ ನಮ್ಮನೆ ಯುವರಾಣಿ

ಬಿಗ್ ಬಾಸ್ ಆರಂಭಕ್ಕೆ ಕೆಲವೊಂದು ಧಾರಾವಾಹಿ ಅಂತ್ಯಗೊಳಿಸಿದ ಕಲರ್ಸ್ ಕನ್ನಡ Read More »

ಇನ್ಮುಂದೆ ರಸ್ತೆಗಳಲ್ಲಿ ಹುಟ್ಟುಹಬ್ಬ ಆಚರಿಸಿದರೆ ಜೈಲು ಶಿಕ್ಷೆ ಫಿಕ್ಸ್

ಸಮಗ್ರ ನ್ಯೂಸ್ : ಇತ್ತೀಚೆಗೆ ರಸ್ತೆಗಳಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಟ್ರೆಂಡ್ ಆಗಿಬಿಟ್ಟಿದೆ. ಆದರೆ, ಇನ್ನು ಮುಂದೆ ರಸ್ತೆಗಳಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವವರ ಮೇಲೆ ಕೇಸ್ ದಾಖಲಿಸಿ, ಜೈಲಿಗೆ ಕಳುಹಿಸಲು ಪೊಲೀಸರು ಮುಂದಾಗಿದ್ದಾರೆ. ಸದ್ಯ ಈ ನಿಯಮ ರಾಮನಗರ ಜಿಲ್ಲೆಯಾದ್ಯಂತ ಜಾರಿಯಲ್ಲಿದೆ. ಹುಟ್ಟುಹಬ್ಬದ ಆಚರಣೆ ನೆಪದಲ್ಲಿ ಬೇರೆ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಹಾಗೂ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಈ ರೂಲ್ಸ್ ಜಾರಿ ಮಾಡಲಾಗಿದೆ.

ಇನ್ಮುಂದೆ ರಸ್ತೆಗಳಲ್ಲಿ ಹುಟ್ಟುಹಬ್ಬ ಆಚರಿಸಿದರೆ ಜೈಲು ಶಿಕ್ಷೆ ಫಿಕ್ಸ್ Read More »

ಭಾರಿ ಇಳಿಕೆ ಕಂಡಿದ್ದ ಟೊಮೆಟೊ ದರ ಮತ್ತೆ ಏರಿಕೆ

ಮಂಗಳೂರು: ಕೆಲವು ದಿನಗಳಿಂದ ಭಾರಿ ಇಳಿಕೆ ಕಂಡಿದ್ದ ಟೊಮೆಟೊ ದರ ಮತ್ತೆ ಏರಿಕೆಯಾಗಿದೆ. ಕೆಜಿಗೆ 10 ರೂಪಾಯಿ ಇದ್ದ ಟೊಮೆಟೊ 20 ರೂಪಾಯಿವರೆಗೆ ಏರಿಕೆ ಕಂಡು ಈಗ ಪುತ್ತೂರಿನಲ್ಲಿ 45 ರೂ.ಗೆ ಮಾರಾಟವಾಗುತ್ತಿದೆ. ಕೆಲವು ತಿಂಗಳ ಹಿಂದೆ ಟೊಮೆಟೊ ದರ 10 ರೂ.ಇದ್ದು, ನಂತರ 20 ರೂ. ಗೆ ಬಂದು ನಿಂತಿತ್ತು. ಕೆಲವೇ ದಿನಗಳ ನಂತರ ಮತ್ತೆ ಏರಿಕೆ ಕಾಣುತ್ತಿರುವ ಟೊಮೆಟೊ ದರ ಕೆಜಿಗೆ 45 ರೂ.ಗೆ ಮಾರಾಟವಾಗುತ್ತಿದೆ. ಅದಕ್ಕಿಂತ ಹಿಂದೆ ಕೆಜಿಗೆ 100 ರೂ.ವರೆಗೆ ಏರಿಕೆಯಾಗಿತ್ತು. ಈಗ

ಭಾರಿ ಇಳಿಕೆ ಕಂಡಿದ್ದ ಟೊಮೆಟೊ ದರ ಮತ್ತೆ ಏರಿಕೆ Read More »

ಸಿಡಿಲು ಬಡಿದು ಇಬ್ಬರು ದುರ್ಮರಣ

ಸಮಗ್ರ ನ್ಯೂಸ್: ಸತತವಾಗಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಜನಜೀವನ ನಲುಗಿ ಹೋಗಿದೆ ಅತಿವೃಷ್ಟಿ ಹಾಗೂ ನೆರೆ ಭೀತಿ ಜನರನ್ನು ತಲ್ಲಣಗೊಳಿಸಿದೆ. ಶನಿವಾರ ಸಿಡಿಲು ಬಡಿದು ಓರ್ವ ಮಹಿಳೆ ಹಾಗೂ ವ್ಯಕ್ತಿಯೊಬ್ಬರು ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿಯ ನಂದಮ್ಮ (35) ಹಾಗೂ ದೇವತ್ಕಲ್ ಗ್ರಾಮದ ರಾಜು ಸಿಂಗ್ (38) ಮೃತರು. ತಮ್ಮ ಭತ್ತದ ಜಮೀನಿನಲ್ಲಿನ ಕಳೆ ತೆಗೆದು ವಾಪಸ್ ಬರುವಾಗ ಸಿಡಿಲು ಬಡಿದು ನಂದಮ್ಮ ಮೃತಪಟ್ಟರೆ, ಮನೆ ಮುಂದೆ ನಿಂತಿದ್ದಾಗ ಸಿಡಿಲು ಬಡಿದು ರಾಜು ಸಿಂಗ್ ಕೊನೆಯುಸಿರೆಳೆದರು.

ಸಿಡಿಲು ಬಡಿದು ಇಬ್ಬರು ದುರ್ಮರಣ Read More »

ನಾಲಿಗೆ ಕತ್ತರಿಸಿ ದೇವರಿಗೆ ಅರ್ಪಿಸಿದ ಭಕ್ತ

ಸಮಗ್ರ ನ್ಯೂಸ್: ಭಕ್ತನೊಬ್ಬ ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿದ ಘಟನೆಯೊಂದು ಇಲ್ಲಿನ ಶೀಟ್ಲಾ ದೇವಸ್ಥಾನದಲ್ಲಿ ನಡೆದಿದೆ. ಕೌಶಂಬಿ ನಿವಾಸಿ ಸಂಪತ್ (38) ದೇವರಿಗೆ ನಾಲಿಗೆ ಅರ್ಪಿಸಿದ ಭಕ್ತ. ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಂಪತ್ ತನ್ನ ಪತ್ನಿಯೊಂದಿಗೆ ದೇವಸ್ಥಾನಕ್ಕೆ ಬಂದಿದ್ದರು. ಗಂಗಾ ನದಿಯಲ್ಲಿ ಸ್ನಾನ ಮಾಡಿದ ನಂತರ ಪೂಜೆ ಸಲ್ಲಿಸಿದರು. ದೇವಾಲಯ ಪ್ರದಕ್ಷಿಣೆ ಮುಗಿಸಿದ ನಂತರ, ಅವನು ತನ್ನ ನಾಲಿಗೆಯನ್ನು ಬ್ಲೇಡ್‌ನಿಂದ ಕತ್ತರಿಸಿ ದೇವರಿಗೆ ಅರ್ಪಿಸಿದ್ದಾನೆ

ನಾಲಿಗೆ ಕತ್ತರಿಸಿ ದೇವರಿಗೆ ಅರ್ಪಿಸಿದ ಭಕ್ತ Read More »

ಗಣಪತಿ ಮೆರವಣಿಗೆ ವೇಳೆ ಇತ್ತಂಡಗಳ ನಡುವೆ ಮಾರಾಮಾರಿ| ಯುವಕನ ಬರ್ಬರ ಕೊಲೆ

ಗಣಪತಿ ಮೆರವಣಿಗೆ ವೇಳೆ ಇತ್ತಂಡಗಳ ನಡುವೆ ಮಾರಾಮಾರಿ| ಯುವಕನ ಬರ್ಬರ ಕೊಲೆ ಸಮಗ್ರ ನ್ಯೂಸ್: ಗಣಪತಿ ಮೆರವಣಿಗೆಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ ನಡೆದಿದ್ದು, ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಈ ದುರಂತ ಘಟನೆ ನಡೆದಿದೆ. ಗಣಪತಿ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ಅರ್ಜುನ ಗೌಡ ಪಾಟೀಲ(20) ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ

ಗಣಪತಿ ಮೆರವಣಿಗೆ ವೇಳೆ ಇತ್ತಂಡಗಳ ನಡುವೆ ಮಾರಾಮಾರಿ| ಯುವಕನ ಬರ್ಬರ ಕೊಲೆ Read More »

ಪ್ರವೀಣ್ ಹತ್ಯೆ ಪ್ರಕರಣ ; ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೋದರನಿಂದ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಬೆದರಿಕೆ ಹಾಕಿದವನ ಬಂಧನಕ್ಕೆ ಆಗ್ರಹಿಸಿ ಬೆಳ್ಳಾರೆ ಠಾಣೆ ಎದುರು‌ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫಿಕ್ ಸೋದರ ಸಫ್ರಿದ್‌ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಫೋನ್

ಪ್ರವೀಣ್ ಹತ್ಯೆ ಪ್ರಕರಣ ; ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ Read More »