September 2022

ಸಮವಸ್ತ್ರದಲ್ಲಿ ಮಲ‌ಮಾಡಿದ್ದಕ್ಕೆ ಬಿಸಿನೀರು ಎರಚಿ ವಿಕೃತಿ ಮೆರೆದ ಶಿಕ್ಷಕ

ಸಮಗ್ರ ನ್ಯೂಸ್: ಮಕ್ಕಳಿಗೆ ತಿದ್ದಿ ಬುದ್ದಿ ಹೇಳುವ ಶಿಕ್ಷಕರೇ ಈಗ ವಿಕೃತಿ ಮನಸ್ಥಿತಿಯಿಂದ ಮೆರೆಯುತ್ತಿದ್ದಾರೆ. ಇಂತಹ ಮತ್ತೊಂದು ವಿಲಕ್ಷಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಶಾಲೆಯ ಶಿಕ್ಷಕರೊಬ್ಬರು ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿದ್ದಕ್ಕೆ ಆಕೆಯ ಮೇಲೆ ಬಿಸಿ ನೀರು ಎರಚಿ ವಿಕೃತಿ ಮೆರೆದಿದ್ದಾರೆ. ರಾಯಚೂರು ಜಿಲ್ಲೆಯ ಸಂತೆಕೆಲ್ಲೂರು ಗ್ರಾಮದಲ್ಲಿ ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿಕೊಂಡಿದ್ದರು. ಈ ವೇಳೆ ಶಿಕ್ಷಿಕ ಹುಲಿಗೆಪ್ಪ ವಿದ್ಯಾರ್ಥಿನಿ ಮೇಲೆ ಬಿಸಿ ನೀರು ಹಾಕಿರುವ ಘಟನೆ ತಡವಾಗಿ […]

ಸಮವಸ್ತ್ರದಲ್ಲಿ ಮಲ‌ಮಾಡಿದ್ದಕ್ಕೆ ಬಿಸಿನೀರು ಎರಚಿ ವಿಕೃತಿ ಮೆರೆದ ಶಿಕ್ಷಕ Read More »

ಈ ಶತಕವನ್ನ ಪತ್ನಿ ಅನುಷ್ಕಾಗೆ ಅರ್ಪಿಸುವೆ/ನನ್ನ ಪ್ರತಿಯೊಂದು ಹೆಜ್ಜೆಯಲ್ಲೂ ಆಕೆ ನನ್ನ ಜೊತೆಗಿದ್ದಾಳೆ : ಕಿಂಗ್ ಕೊಹ್ಲಿ

ಕ್ರೀಡೆ ನ್ಯೂಸ್: ಟೀಂ ಇಂಡಿಯಾದ ರನ್ ಮಷಿನ್ ವಿರಾಟ್ ಕೊಹ್ಲಿ ಅಪ್ಘಾನಿಸ್ತಾನದ ವಿರುದ್ಧ ಸೆ.8ರಂದು ನಡೆದ ಏಷ್ಯಾಕಪ್ ಅಂತಿಮ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಬಳಿಕ ಭಾವುಕರಾಗಿ ಮಾತನಾಡಿದ ವಿರಾಟ್ ಕೊಹ್ಲಿ, ಈ ಶತಕವನ್ನು ನನ್ನ ಪತ್ನಿ ಅನುಷ್ಕಾಹಾಗೂ ಪುತ್ರಿ ವಾಮಿಕಾಗೆ ಅರ್ಪಿಸುವೆ ಎಂದು ನುಡಿದಿದ್ದಾರೆ. ಕ್ರಿಕೆಟ್ ಕಳೆದ ಎರಡೂವರೆ ವರ್ಷ ನನಗೆ ಹಲವು ಪಾಠಗಳನ್ನು ಕಲಿಸಿದೆ. ಟಿ20ಯಲ್ಲಿ ನನ್ನ ಶತಕದ ಬರ ನೀಗಲಿದೆ ಎಂದು ಭಾವಿಸಿರಲಿಲ್ಲ. ಕಠಿಣ ಸಮಯದಲ್ಲೂ ನನ್ನೊಂದಿಗೆ ನನ್ನ ತಂಡ ಸಹಕಾರಿಯಾಗಿ

ಈ ಶತಕವನ್ನ ಪತ್ನಿ ಅನುಷ್ಕಾಗೆ ಅರ್ಪಿಸುವೆ/ನನ್ನ ಪ್ರತಿಯೊಂದು ಹೆಜ್ಜೆಯಲ್ಲೂ ಆಕೆ ನನ್ನ ಜೊತೆಗಿದ್ದಾಳೆ : ಕಿಂಗ್ ಕೊಹ್ಲಿ Read More »

ಮಂಗಳೂರು: ಮ.ನ. ಪಾ. ಮೇಯರ್ ಆಗಿ ಜಯಾನಂದ ಅಂಚನ್, ಉಪ ಮೇಯರ್ ಆಗಿ ಪೂರ್ಣಿಮ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಚುನಾವಣೆ ಸೆ.9ರಂದು ನಡೆದಿದ್ದು ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ. ನಡೆದ ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ. ಉಪ ಮೇಯರ್ ಪೂರ್ಣಿಮಮೇಯರ್‌ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಹಾಗೂ ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. ಪಾಲಿಕೆಯ ಒಟ್ಟು 60 ಸ್ಥಾನಗಳ ಪೈಕಿ ಬಿಜೆಪಿ 44

ಮಂಗಳೂರು: ಮ.ನ. ಪಾ. ಮೇಯರ್ ಆಗಿ ಜಯಾನಂದ ಅಂಚನ್, ಉಪ ಮೇಯರ್ ಆಗಿ ಪೂರ್ಣಿಮ Read More »

ಪುತ್ತೂರು: ಧಾರಾಕಾರ ಮಳೆಗೆ ರಾತ್ರೋರಾತ್ರಿ ಧರೆಗುರುಳಿದ ಮನೆ; ಅಪಾರ ನಷ್ಟ

ಸಮಗ್ರ ನ್ಯೂಸ್: ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬಲ್ನಾಡು ಗ್ರಾಮದ ಸಾರ್ಯ ಸಮೀಪ ಮನೆಯೊಂದು ಕುಸಿದು ಬಿದ್ದು ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ. ಬಲ್ನಾಡು ಗ್ರಾಮದ ಸಾರ್ಯ ಅಬರೆಗುರಿ ನಿವಾಸಿ ವಿಶ್ವನಾಥ ರೈ ಎಂಬವರ ಹಂಚಿನ ಮಾಡಿನ ಮನೆ ಮಳೆಗೆ ಕುಸಿದು ಬಿದ್ದಿರುವುದಾಗಿದೆ. ಕೂಲಿ ಕಾರ್ಮಿಕರಾಗಿ ಜೀವನ ನಿರ್ವಹಣೆ ಮಾಡುತ್ತಿರುವ ಇವರು ಪತ್ನಿ, ಇಬ್ಬರು ಪುತ್ರಿಯರು ಮನೆಯಲ್ಲಿ ವಾಸವಿದ್ದರು. ರಾತ್ರಿ ಸುಮಾರು ಒಂದೂವರೆ ಗಂಟೆ ವೇಳೆಗೆ ಮನೆ ಕುಸಿದು ಬಿದ್ದಿದೆ. ಮನೆ ಕುಸಿಯುತ್ತಿದ್ದ ಶಬ್ದ ಕೇಳಿ

ಪುತ್ತೂರು: ಧಾರಾಕಾರ ಮಳೆಗೆ ರಾತ್ರೋರಾತ್ರಿ ಧರೆಗುರುಳಿದ ಮನೆ; ಅಪಾರ ನಷ್ಟ Read More »

ಮಂಗಳೂರು: ಹೋಂ ಸ್ಟೇ, ಮನೆಗಳಿಂದ ನಗ ನಗದು ದೋಚಿದ್ದ ಕಳ್ಳನ ಬಂಧನ

ಸಮಗ್ರ ನ್ಯೂಸ್: ಸೋಮೇಶ್ವರ ಬೀಚ್ ಬಳಿಯ ಹೋಂ ಸ್ಟೇ ಒಂದಕ್ಕೆ ಬುಧವಾರ‌ ಸಂಜೆ ಕನ್ನ ಹಾಕಿದ್ದ ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಉಳ್ಳಾಲ ಠಾಣೆ ವ್ಯಾಪ್ತಿಯ ಎರಡು ಮನೆಗಳಿಂದ ನಗ, ನಗದು ದೋಚಿದ್ದ ಕಳ್ಳನನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಮೊವಾಝ್ (35) ಬಂಧಿತ . ಆರೋಪಿ ಮೊವಾಝ್ ಕೇರಳದ ಕಣ್ಣೂರಿನ ಪತ್ನಿ ಮನೆಯಲ್ಲೇ ನೆಲೆಸಿದ್ದು ಆಗಾಗ್ಗೆ ಮಂಗಳೂರಿಗೆ ಬಂದು ಕಳ್ಳತನ ನಡೆಸುತ್ತಿದ್ದ ಎನ್ನಲಾಗಿದೆ. ಸೋಮೇಶ್ವರ ಬಸ್ಸು ತಂಗುದಾಣದ ಬಳಿಯ

ಮಂಗಳೂರು: ಹೋಂ ಸ್ಟೇ, ಮನೆಗಳಿಂದ ನಗ ನಗದು ದೋಚಿದ್ದ ಕಳ್ಳನ ಬಂಧನ Read More »

ಮಂಗಳೂರು: ಮ.ನ.ಪಾ ಮೇಯರ್‌, ಉಪ ಮೇಯರ್ ಇಂದು(ಸೆ.9) ಚುನಾವಣೆ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್‌, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆ ಇಂದು (ಸೆ.9) ನಡೆಯಲಿದೆ. ಮೇಯರ್‌ ಗಾದಿ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಹಾಗೂ ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿರುವ ಕಾರಣ ಅದೃಷ್ಟ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಅಂತಿಮ ಕ್ಷಣದ ಬದಲಾವಣೆ ಹೊರತುಪಡಿಸಿದರೆ ಬಿಜೆಪಿ ಹಿರಿಯ ಸದಸ್ಯ ಜಯಾನಂದ ಅಂಚನ್ ( ಕದ್ರಿ ಪದವು ವಾರ್ಡ್ ) ಅವರು

ಮಂಗಳೂರು: ಮ.ನ.ಪಾ ಮೇಯರ್‌, ಉಪ ಮೇಯರ್ ಇಂದು(ಸೆ.9) ಚುನಾವಣೆ Read More »

ಗಣೇಶೋತ್ಸವ ಮೆರವಣಿಗೆ ವೇಳೆ ಯುವಕನಿಗೆ ಚೂರಿ ಇರಿದು ಕೊಲೆ

ಸಮಗ್ರ ನ್ಯೂಸ್: ಗಣೇಶೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ಯುವಕನೊಬ್ಬನಿಗೆ ಚೂರಿ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಜಿಲ್ಲೆಯ ತೋಟಂದಾರ್ಯ ಮಠದ ಬಳಿ ನಿನ್ನೆ(ಸೆ. 9) ತಡರಾತ್ರಿ ನಡೆದಿದೆ. ಕೊಲಯಾದ ಯುವಕನನ್ನು ಸುದೀಪ್ ಮುಡೆವಾಡಿ(22) ಎಂದು ಗುರುತಿಸಲಾಗಿದೆ. ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಸುದೀಪ್ ಸ್ನೇಹಿತರೇ ಚಾಕುವಿನಲ್ಲಿ ಇರಿದು ಕೊಲೆ ಮಾಡಿದ್ದು, ರಕ್ತದ ಮಡುವಿನಲ್ಲೇ ಬಿದ್ದು ಸುದೀಪ್ ಸಾವನ್ನಪ್ಪಿದ್ದಾನೆ. ಶಹರಾ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.

ಗಣೇಶೋತ್ಸವ ಮೆರವಣಿಗೆ ವೇಳೆ ಯುವಕನಿಗೆ ಚೂರಿ ಇರಿದು ಕೊಲೆ Read More »

ಕರಾವಳಿ, ಉತ್ತರ‌ ಕರ್ನಾಟಕದಲ್ಲಿ ಇಂದೂ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ಕರಾವಳಿ ಸೇರಿದಂತೆ ಉತ್ತರ ಕರ್ನಾಟಕ, ಹಾಗೂ ರಾಜ್ಯಾದ್ಯಂತ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಅರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳುರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ

ಕರಾವಳಿ, ಉತ್ತರ‌ ಕರ್ನಾಟಕದಲ್ಲಿ ಇಂದೂ ಭಾರೀ ಮಳೆ ಸಂಭವ Read More »

ತಿರಂಗಾದಿಂದ ಸ್ಕೂಟರ್ ಒರೆಸಿ ಅಗೌರವ; ವಿಡಿಯೋ ವೈರಲ್

ಸಮಗ್ರ ನ್ಯೂಸ್: ರಾಷ್ಟ್ರಧ್ವಜವನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯ. ಇದನ್ನು ಬಾಲ್ಯದಿಂದಲೇ ಕಲಿಸಲಾಗುತ್ತದೆ. ತ್ರಿವರ್ಣ ಧ್ವಜಕ್ಕೆ ಯಾವುದೇ ಅಗೌರವ ಅಥವಾ ತಿರಸ್ಕಾರ ತೋರಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಯಾಗಬಹುದು. ಈಶಾನ್ಯ ದೆಹಲಿಯ ಭಜನ್ಪುರ ಪ್ರದೇಶದಲ್ಲಿ 52 ವರ್ಷದ ವ್ಯಕ್ತಿಯೊಬ್ಬ ರಾಷ್ಟ್ರಧ್ವಜಕ್ಕೆ ಅಗೌರವ ತೋರುವ ರೀತಿಯಲ್ಲಿ ವರ್ತಿಸಿದ್ದಾನೆ. ತನ್ನ ದ್ವಿಚಕ್ರ ವಾಹನವನ್ನು ಸ್ವಚ್ಛಗೊಳಿಸಲು ಈತ ರಾಷ್ಟ್ರಧ್ವಜವನ್ನು ಬಳಸಿದ್ದಾನೆ. ಈ ವ್ಯಕ್ತಿ ಉತ್ತರ ಘೋಂಡಾ ಪ್ರದೇಶದ ನಿವಾಸಿ. ವ್ಯಕ್ತಿ ಮಡಚಿಟ್ಟಿದ್ದ ಧ್ವಜದಿಂದ ತನ್ನ ಬಿಳಿ ಸ್ಕೂಟರ್ ಅನ್ನು ಸ್ವಚ್ಛಗೊಳಿಸುವ

ತಿರಂಗಾದಿಂದ ಸ್ಕೂಟರ್ ಒರೆಸಿ ಅಗೌರವ; ವಿಡಿಯೋ ವೈರಲ್ Read More »

ಬ್ರಿಟನ್ ರಾಣಿ ಎಲಿಜಬೆತ್ ನಿಧನ

ಸಮಗ್ರ ನ್ಯೂಸ್: ಬ್ರಿಟನ್‌ ನ ರಾಣಿ ಎಲಿಝಬೆತ್ || ಗುರುವಾರ ನಿಧನರಾಗಿದ್ದಾರೆ. 96 ವರ್ಷದ ಎಲಿಝಬೆತ್ ಅವರ ಆರೋಗ್ಯದಲ್ಲಿ ಏರುಪೇರಾದ ಬಳಿಕ ವೈದ್ಯರ ನಿಗಾದಲ್ಲಿ ಅವರನ್ನು ಇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಬಂಕಿಂಗ್‌ಹ್ಯಾಮ್‌ ಅರಮನೆ ಹೇಳಿಕೆ ಬಿಡುಗಡೆ ಮಾಡಿದೆ. “ಇಂದು ಬೆಳಗ್ಗೆ ಹೆಚ್ಚಿನ ಪರೀಕ್ಷೆಯ ಬಳಿಕ, ರಾಣಿಯ ವೈದ್ಯರು ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ಅವರು ವೈದ್ಯಕೀಯ ನಿಗಾದಲ್ಲಿ ಉಳಿಯಲು ಶಿಫಾರಸು ಮಾಡಿದ್ದರು. ನಂತರ ಅವರ ಹಿರಿಯ ಮಗ ಮತ್ತು ಉತ್ತರಾಧಿಕಾರಿ

ಬ್ರಿಟನ್ ರಾಣಿ ಎಲಿಜಬೆತ್ ನಿಧನ Read More »