September 2022

ಪುತ್ತೂರು: ಪ್ರಯಾಣಿಕನನ್ನು ಒದ್ದು ಕೆಳತಳ್ಳಿದ ಕೆಎಸ್ಆರ್ ಟಿಸಿ ಕಂಡಕ್ಟರ್| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕ.ರಾ.ರ. ಸಾರಿಗೆ ಬಸ್ ನಿರ್ವಾಹಕನೊಬ್ಬ ಪ್ರಯಾಣಿಕನಿಗೆ ಕಾಲಿನಿಂದ ಒದ್ದು ಕೆಳಕ್ಕೆ ದೂಡಿ ಅಮಾನವೀಯತೆ ಮೆರೆದ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಡೆದಿದೆ. ಈ ಕುರಿತು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕೆಎ 21 ಎಫ್ 0002 ನಂಬರ್‌ನ ಬಸ್ ನಿರ್ವಾಹಕ ಪ್ರಯಾಣಿಕನೊಬ್ಬನನ್ನು ಕಾಲಿನಿಂದ ತುಳಿದು ಹೊರಹಾಕಿದ್ದು ಗಾಯಗೊಂಡ ಅವನನ್ನು ರಸ್ತೆಯಲ್ಲೇ ಬಿಟ್ಟು ಹೋಗಿದ್ದಾರೆ.ಹೊರ ಎಸೆಯಲ್ಪಟ್ಟ ಪ್ರಯಾಣಿಕ ಮೇಲ್ನೋಟಕ್ಕೆ ಪಾನಮತ್ತನಂತೆ ಕಂಡು ಬರುತ್ತಿದ್ದು ಈಶ್ವರಮಂಗಲ ಪೇಟೆಯ ಜಂಕ್ಷನ್ ಬಳಿ […]

ಪುತ್ತೂರು: ಪ್ರಯಾಣಿಕನನ್ನು ಒದ್ದು ಕೆಳತಳ್ಳಿದ ಕೆಎಸ್ಆರ್ ಟಿಸಿ ಕಂಡಕ್ಟರ್| ವಿಡಿಯೋ ವೈರಲ್ Read More »

ಅಮೆರಿಕ ಜಿಲ್ಲಾ ನ್ಯಾಯಾಧೀಶರಾಗಿ ಭಾರತ ಮೂಲದ ಅರುಣ್ ಸುಬ್ರಮಣಿಯನ್ ನಾಮನಿರ್ದೇಶನ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ನ್ಯೂಯಾರ್ಕ್‌ನ ದಕ್ಷಿಣ ಜಿಲ್ಲೆಯ ನ್ಯಾಯಾಲಯಕ್ಕೆ ಭಾರತ ಮೂಲದ ಅಮೆರಿಕದ ವಕೀಲ ಅರುಣ್ ಸುಬ್ರಮಣಿಯನ್ ಅವರನ್ನು ನಾಮನಿರ್ದೇಶನ ಮಾಡಿದ್ದಾರೆ. ಶ್ವೇತಭವನದ ವರದಿಯ ಪ್ರಕಾರ, ಅಧ್ಯಕ್ಷ ಬೈಡನ್ ಅವರು ಇನ್ನಿತರ ನ್ಯಾಯಾಧೀಶರ ನೇಮಕವನ್ನೂ ಮಾಡಿದ್ದಾರೆ. ಆದರೆ ಈ ಮಾಹಿತಿಯನ್ನು ಸೆನೆಟ್ ಇನ್ನೂ ಬಹಿರಂಗಪಡಿಸಿಲ್ಲ. ಇದು ದೃಢಪಟ್ಟಲ್ಲಿ. ಸುಬ್ರಮಣಿಯನ್ ಅವರು ಅಮೆರಿಕದ ಜಿಲ್ಲಾ ನ್ಯಾಯಾಧೀಶರಾಗಿ ನೇಮಕವಾಗುವ ದಕ್ಷಿಣ ಏಷ್ಯಾ ರಾಷ್ಟ್ರದ ಮೊದಲ ವ್ಯಕ್ತಿಯಾಗಲಿದ್ದಾರೆ. ಸುಬ್ರಮಣಿಯನ್ ಅವರು 2001 ರಲ್ಲಿ ಕೇಸ್ ವೆಸ್ಟರ್ನ್ ರಿಸರ್ವ್

ಅಮೆರಿಕ ಜಿಲ್ಲಾ ನ್ಯಾಯಾಧೀಶರಾಗಿ ಭಾರತ ಮೂಲದ ಅರುಣ್ ಸುಬ್ರಮಣಿಯನ್ ನಾಮನಿರ್ದೇಶನ Read More »

ಕೇರಳದಲ್ಲಿ ಕರೆಂಟ್ ಶಾಕ್ ಹೊಡೆದು ಬಂಟ್ವಾಳದ ಯುವಕ ಮೃತ್ಯು

ಸಮಗ್ರ ನ್ಯೂಸ್: ಕೆಲಸ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಬಂಟ್ವಾಳ ಮೂಲದ ವ್ಯಕ್ತಿಯೋರ್ವರು ಕೇರಳದ ಕಂಪೆನಿಯೊದರಲ್ಲಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮರ್ತಾಜೆ ನಿವಾಸಿ ವಿದ್ಯಾಧರ ಕುಲಾಲ್ (35) ಮೃತಪಟ್ಟ ವ್ಯಕ್ತಿ. ಅವರು ಕೇರಳದ ಖಾಸಗಿ ಎಲೆಕ್ಟ್ರಾನಿಕ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೆ. 5ರಂದು ಸೋಮವಾರ ಕರ್ತವ್ಯ ದಲ್ಲಿರುವಾಗ ವಿದ್ಯುತ್ ಹರಿದು ಅವರು ಮೃತಪಟ್ಟ ಘಟನೆ ನಡೆದಿದೆ. ಮೂಲತ ಬೆಳ್ಳಾರೆ ನಿವಾಸಿಯಾಗಿದ್ದ ಇವರು ಇತ್ತೀಚೆಗೆ ಸಜೀಪ ಮುನ್ನೂರು

ಕೇರಳದಲ್ಲಿ ಕರೆಂಟ್ ಶಾಕ್ ಹೊಡೆದು ಬಂಟ್ವಾಳದ ಯುವಕ ಮೃತ್ಯು Read More »

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ ( 20) ಮೃತಪಟ್ಟ ವಿದ್ಯಾರ್ಥಿನಿ. ಕವಿತಾ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಸೆ. 6ರ ಮಂಗಳವಾರ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ತುಂಬೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕರೆದೊಯ್ಯಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು Read More »

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ ಮಾಡಿದ ಸ್ಟೇಟ್ ಬ್ಯಾಂಕ್| ಬರೋಬ್ಬರಿ 85 ಸಾವಿರ ದಂಡ ವಿಧಿಸಿದ ಗ್ರಾಹಕರ‌ ಆಯೋಗ

ಸಮಗ್ರ ನ್ಯೂಸ್: ಕನ್ನಡದಲ್ಲಿ ಬರೆದ ಚೆಕ್ಕನ್ನು ಅಮಾನ್ಯ ಮಾಡಿದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಶಾಖೆಗೆ 85,177 ರೂ.ದಂಡ ಪರಿಹಾರ ಪಾವತಿಸುವಂತೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿದೆ. ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಉಳಿತಾಯ ಖಾತೆ(Account)ಯಲ್ಲಿದ್ದ ಹಣ ಹಿಂಪಡೆಯಲು ಕನ್ನಡದಲ್ಲಿ ಬರೆದ ಚೆಕ್ ಅನ್ನು ಬ್ಯಾಂಕ್ ಗೆ ನೀಡಿದ್ದು, ಈ ವೇಳೆಯಲ್ಲಿ, ಹಳಿಯಾಳದ ಎಸ್‌ಬಿಐ ಶಾಖೆ ತಿರಸ್ಕರಿಸಿತ್ತು. ಬ್ಯಾಂಕ್ ಕಾರ್ಯವೈಖರಿ ವಿರುದ್ದ ನ್ಯಾಯಕ್ಕಾಗಿ, ಜಿಲ್ಲಾ ಗ್ರಾಹಕರ

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ ಮಾಡಿದ ಸ್ಟೇಟ್ ಬ್ಯಾಂಕ್| ಬರೋಬ್ಬರಿ 85 ಸಾವಿರ ದಂಡ ವಿಧಿಸಿದ ಗ್ರಾಹಕರ‌ ಆಯೋಗ Read More »

ಬುದ್ದಿಮಾಂದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನ; ವೃದ್ಧನ ಬಂಧನ

ಸಮಗ್ರ ನ್ಯೂಸ್: ಬುದ್ದಿಮಾಂದ್ಯ ಯುವತಿಯ ಮೇಲೆ‌ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವೃದ್ಧರೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಎನ್.ಆರ್ ಪುರದಲ್ಲಿ ನಡೆದಿದೆ. ಇಲ್ಲಿನ ಖಾಸಗಿ ಶಾಲೆಯ ಬಸ್ ಚಾಲಕ ತಾಲ್ಲೂಕಿನ ಮಲ್ಲಂದೂರು ಗ್ರಾಮ ನಿವಾಸಿ ಸದಾಶಿವ ಶೆಟ್ಟಿ(66) ಬಂಧಿತ ಆರೋಪಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸದಾಶಿವಶೆಟ್ಟಿ ಪಟ್ಟಣದ ವ್ಯಾಪ್ತಿಯ 20 ವರ್ಷದ ಬುದ್ಧಿಮಾಂದ್ಯ ಯುವತಿ ಮೇಲೆ ಮಂಗಳವಾರ ರಾತ್ರಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಯುವತಿ ಸಹೋದರಿ ನೀಡಿದ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬುದ್ದಿಮಾಂದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನ; ವೃದ್ಧನ ಬಂಧನ Read More »

ಕಡಬ: ಮರದ ಕೊಂಬೆ ಕಡಿಯುವ ವೇಳೆ ವಿದ್ಯುತ್ ಶಾಕ್; ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಮರದ ಕೊಂಬೆ ಕಡಿಯುವಾಗ ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘೋರ ಘಟನೆ ಕಡಬದಲ್ಲಿ ನಡೆದಿದೆ. ಮೃತಪಟ್ಟವನನ್ನು ಕುಂತೂರು ಕಾಲಾಯಿಲ್ ನಿವಾಸಿ ಮನೋಜ್(43) ಎಂದು ಗುರುತಿಸಲಾಗಿದೆ. ಮನೋಜ್ ಅವರು ಮರದ ಕೊಂಬೆಯೊಂದು ಕಡಿಯುವಾಗ 33 kv ವಿದ್ಯುತ್ ತಂತಿ ತಾಗಿ ದುರ್ಮರಣ ಸಂಭವಿಸಿದೆ. ಮನೋಜ್ ಮೃತದೇಹ ಮರದಲ್ಲೇ ನೇತಾಡುತ್ತಿತ್ತು. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ತರಲಾಗಿದೆ.ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಡಬ: ಮರದ ಕೊಂಬೆ ಕಡಿಯುವ ವೇಳೆ ವಿದ್ಯುತ್ ಶಾಕ್; ವ್ಯಕ್ತಿ ಸಾವು Read More »

1.43 ಕೋಟಿ ರೂ. ಮೌಲ್ಯದ ಕರೆನ್ಸಿಗಳಿಂದ ತಯಾರಾದ ಗಣೇಶ ಮಂಟಪ; ಸೋಶಿಯಲ್ ಮೀಡಿಯಾ ದಲ್ಲಿ ವೈರಲ್

ಸಮಗ್ರ ನ್ಯೂಸ್ : ವಾರಂಗಲ್‌ನಲ್ಲಿ ಗಣೇಶ ಮಂಟಪವನ್ನು ನೋಟುಗಳಿಂದ ಅಲಂಕರಿಸಿದ್ದಾರೆ.ಗಣೇಶ ಹಬ್ಬವನ್ನು ಎಲ್ಲೆಡೆ ಆಚರಿಸಲಾಗುತ್ತಿದೆ. ವಾರಂಗಲ್ ನಗರದ ವಿನಾಯಕ ಟ್ರಸ್ಟ್ ಭವನದ ಆಶ್ರಯದಲ್ಲಿ ನಡೆದ ಗಣೇಶ ನವರಾತ್ರಿ ಆಚರಣೆ ವಿಶೇಷ. ಇಲ್ಲಿನ ಗಣೇಶ ಮಂಟಪವನ್ನು ಭಕ್ತರು ಬಣ್ಣ ಬಣ್ಣದ ನೋಟುಗಳಿಂದ ಅಲಂಕರಿಸಿದ್ದಾರೆ.  ಒಂದು ಕೋಟಿ ನಲವತ್ಮೂರು ಲಕ್ಷ ರೂಪಾಯಿಗಳ ಕರೆನ್ಸಿ ನೋಟುಗಳಿಂದ ವಿಶೇಷವಾಗಿ ಅಲಂಕರಿಸಿದ್ದರು. ವಿನಾಯಕ ಟ್ರಸ್ಟ್ ಭವನದ 108 ಸದಸ್ಯರು ಗಣಪತಿಯನ್ನು ಲಕ್ಷ್ಮಿ ಗಣಪತಿಯನ್ನಾಗಿ ಬದಲಾಯಿಸಿದರು. ಸ್ವಾಮಿ ಅವರ ಅಲಂಕಾರಕ್ಕೆ ಬೇಕಾದ ಹಣವನ್ನು ಸಂಗ್ರಹಿಸಿ ವಿನಾಯಕ

1.43 ಕೋಟಿ ರೂ. ಮೌಲ್ಯದ ಕರೆನ್ಸಿಗಳಿಂದ ತಯಾರಾದ ಗಣೇಶ ಮಂಟಪ; ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ Read More »

ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣ| ರಾಜ್ಯದ 33 ಸ್ಥಳಗಳಲ್ಲಿ NIA ಶೋಧ ಕಾರ್ಯಾಚರಣೆ; ಸ್ಪೋಟಕ ಮಾಹಿತಿ ಬಯಲು

ಸಮಗ್ರ ನ್ಯೂಸ್: ಜು 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಯುವ ನೇತಾರ ಪ್ರವೀಣ್‌ ನೆಟ್ಟಾರ್‌ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳವು (NIA) ಚುರುಕುಗೊಳಿಸಿದೆ. ಸೆ 6 ರಂದು ರಾಜ್ಯದ ಮೂರು ಜಿಲ್ಲೆಗಳ 33 ಸ್ಥಳಗಳಲ್ಲಿ ಅದು ಶೋಧ ಕಾರ್ಯಚರಣೆ ನಡೆಸಿ ಹಲವು ಮಹತ್ವದ ದಾಖಲೆ ಹಾಗೂ ವಸ್ತುಗಳನ್ನು ವಶಕ್ಕೆ ಪಡೆದಿದೆ. ಹತ್ಯೆಯ ಕಾರಣ ಬಯಲು :ಈ ಬಗೆಗಿನ ಮಾಹಿತಿಯನ್ನು ಎನ್‌ ಐಎಯು ಸೆ 6 ರಂದು ರಾತ್ರಿ ಹಂಚಿಕೊಂಡಿದೆ. ಈ ವೇಳೆ

ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣ| ರಾಜ್ಯದ 33 ಸ್ಥಳಗಳಲ್ಲಿ NIA ಶೋಧ ಕಾರ್ಯಾಚರಣೆ; ಸ್ಪೋಟಕ ಮಾಹಿತಿ ಬಯಲು Read More »

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪ| ನಿವೃತ್ತ ಅಧಿಕಾರಿಗೆ ಬಿತ್ತು 1.30 ಕೋಟಿ ದಂಡ

ಸಮಗ್ರ ನ್ಯೂಸ್: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರಿಕೆ ನಿರ್ದೇಶನಾಲಯದ ನಿವೃತ್ತ ಜಂಟಿ ನಿರ್ದೇಶಕ ಗಂಗಾಧರ ವಿ. ಮಡ್ಡಿಕೇರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 5 ವರ್ಷಗಳ ಕಾಲ ಸಾದಾ ಸಜೆ ಮತ್ತು 1.30 ಕೋ.ರೂ.ದಂಡ ವಿಧಿಸಿ ಶಿಕ್ಷೆ ವಿಧಿಸಿದೆ. ಗಂಗಾಧರ ವಿ. ಮಡ್ಡಿಕೇರಿ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರ ವಿರುದ್ಧ ಮಂಗಳೂರಿನ ಕರ್ನಾಟಕ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ 2013ರ ಆ. 5ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಯನ್ನು ನಡೆಸಿದ

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪ| ನಿವೃತ್ತ ಅಧಿಕಾರಿಗೆ ಬಿತ್ತು 1.30 ಕೋಟಿ ದಂಡ Read More »