September 2022

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ| ಎನ್ಐಎ ದಾಳಿಯಲ್ಲಿ ಮಹತ್ವದ ದಾಖಲೆಗಳು ವಶಕ್ಕೆ

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ತಂಡವು ಮಂಗಳವಾರ(ಸೆ.6) ಬೆಳ್ಳಂಬೆಳಗ್ಗೆ ಸುಳ್ಯ ಹಾಗೂ ಪುತ್ತೂರು ತಾಲೂಕಿನ 32 ಸ್ಥಳಗಳಿಗೆ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಪ್ರವೀಣ್‌ ಹತ್ಯೆಯ ಆರೋಪಿಗಳ ವಿಚಾರಣೆಯ ಸಂದರ್ಭದಲ್ಲಿ ತನಿಖಾ ದಳದ ತಂಡಕ್ಕೆ ದೊರೆತ ಸುಳಿವಿನ ಆಧಾರದಲ್ಲಿ ಹತ್ಯೆ ಪ್ರಕರಣಕ್ಕೆ ಸಹಕಾರ, ಆರೋಪಿಗಳ ರಕ್ಷಣೆ ನೆರವಾಗುತ್ತಿರುವವರ ಮಾಹಿತಿ ಕಲೆ ಹಾಕಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಪ್ರವೀಣ್‌ ಹತ್ಯೆ […]

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ| ಎನ್ಐಎ ದಾಳಿಯಲ್ಲಿ ಮಹತ್ವದ ದಾಖಲೆಗಳು ವಶಕ್ಕೆ Read More »

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ| ಅಕ್ಟೋಬರ್ ನಲ್ಲಿ 7ನೇ ವೇತನ ಆಯೋಗ ರಚನೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ನಲ್ಲಿ ಏಳನೇ ವೇತನ ಆಯೋಗ ರಚಿಸಲಾ ಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ವಿಧಾನ ಸೌಧದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗೆ ಅಗತ್ಯವಾದ 7ನೇ ವೇತನ ಆಯೋಗ ರಚಿಸುವುದಾಗಿ ಮಾಹಿತಿ ನೀಡಿದರು. ಬೆಳಿಗ್ಗೆಯಿಂದ ಸಂಜೆವರೆಗೆ ಮಾಡುವ

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ| ಅಕ್ಟೋಬರ್ ನಲ್ಲಿ 7ನೇ ವೇತನ ಆಯೋಗ ರಚನೆ Read More »

ಉಡುಪಿ: ರಸ್ತೆ ನಿರ್ಮಾಣ ವಿಚಾರದಲ್ಲಿ ವಾಗ್ವಾದ| ಮಹಿಳೆ ಹಾಗೂ ಪಂ.ಸದಸ್ಯನ ನಡುವೆ ಮಾರಾಮಾರಿ

ಸಮಗ್ರ ನ್ಯೂಸ್: ರಸ್ತೆ ನಿರ್ಮಾಣ ವಿಚಾರಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಮಹಿಳೆ ನಡುವೆ ನಡೆದ ವಾಗ್ವಾದ ಸಂಘರ್ಷಕ್ಕೆ ತಿರುಗಿದ್ದು, ಇಬ್ಬರ ನಡುವೆ ರಸ್ತೆ ಮಧ್ಯೆಯೇ ಮಾರಾಮಾರಿ ನಡೆದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಆತ್ರಾಡಿಯಲ್ಲಿ ನಮ್ಮ ಜಾಗದಲ್ಲಿ ರಸ್ತೆ ನಿರ್ಮಾಣ ಬೇಡ ಎಂದು ಮಹಿಳೆಯೊಬ್ಬರು ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಕ್ಯಾತೆ ತೆಗೆದಿದ್ದಾರೆ. ಇದೇ ವಿಚಾರವಾಗಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಮಹಿಳೆಯ ನಡುವೆ ಮಾತಿಗೆ ಮಾತು ಬೆಳೆದಿದೆ. ಕೋಪಗೊಂಡ ಮಹಿಳೆ ಪಂಚಾಯಿತಿ ಸದಸ್ಯ ಹಾಗೂ

ಉಡುಪಿ: ರಸ್ತೆ ನಿರ್ಮಾಣ ವಿಚಾರದಲ್ಲಿ ವಾಗ್ವಾದ| ಮಹಿಳೆ ಹಾಗೂ ಪಂ.ಸದಸ್ಯನ ನಡುವೆ ಮಾರಾಮಾರಿ Read More »

ಭಾರೀ ಮಳೆಗೆ ಉದ್ಯೋಗದಲ್ಲಿದ್ದ ಯುವತಿ ಮೃತ್ಯು

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆಯೊಂದು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ. ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ ಖಾಸಗಿ ಶಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು. ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಆದರೆ ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿಕೊಂಡು ಶಾಲೆಯಿಂದ ಹೊರಟಿದ್ದರು. ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ

ಭಾರೀ ಮಳೆಗೆ ಉದ್ಯೋಗದಲ್ಲಿದ್ದ ಯುವತಿ ಮೃತ್ಯು Read More »

ಕೆಪಿಟಿ ಕಾಲೇಜಿನ ವಿದ್ಯಾರ್ಥಿ ನಾಪತ್ತೆ

ಬೆಳ್ತಂಗಡಿ : ಮಂಗಳೂರಿನ ಕೆಪಿಟಿ ಕಾಲೇಜಿನ ವಿದ್ಯಾರ್ಥಿ ಮನೆಯಿಂದ ಮಂಗಳೂರಿನ ಕೆ.ಪಿ.ಟಿ ಕಾಲೇಜಿಗೆ ಹೋಗಿ ನಾಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ-2 ನೇರೊಳ್ ಪಲ್ಕೆ ಮನೆ ನಿವಾಸಿ ಮುರಳಿಧರ್ ಎಂಬವರ ಪುತ್ರ, 21 ವರ್ಷದ ಕೌಶಿಕ್ ಕೆ. ನಾಪತ್ತೆಯಾದವನು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಧರ್ಮಸ್ಥಳ ಪೊಲೀಸರಿಗೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ಕೋರಿ

ಕೆಪಿಟಿ ಕಾಲೇಜಿನ ವಿದ್ಯಾರ್ಥಿ ನಾಪತ್ತೆ Read More »

ಕೌಟುಂಬಿಕ ಕಲಹ; ತಂದೆ ತಲೆಗೆ ಕಟ್ಟಿಗೆಯಿಂದ ಹೊಡೆದ ಮಗ

ಸಮಗ್ರ ನ್ಯೂಸ್: ಕೌಟುಂಬಿಕ ಕಲಹದಿಂದ ಸಿಟ್ಟಿಗೆದ್ದ ಮಗನೇ ತಂದೆ ತಲೆಗೆ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಕೂಡ್ಲಿಗಿ ತಾಲೂಕಿನ ಕುದುರೆಡವು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ತಿಪ್ಪೇರುದ್ರಪ್ಪ (70) ಕೊಲೆಯಾದ ವ್ಯಕ್ತಿ. ಕೃತ್ಯವೆಸಗಿದ ಮಗ ನಾಗರಾಜ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಿಪ್ಪೇರುದ್ರಪ್ಪ ಹಾಗೂ ನಾಗರಾಜ್ ನಡುವೆ ಕೌಟುಂಬಿಕ ಕಲಹವಿತ್ತು. ಭಾನುವಾರ ರಾತ್ರಿ ನಾಗರಾಜ್‌ ಊಟಕ್ಕೆ ಮನೆಗೆ ಬಂದಾಗ ತಂದೆ ಅವಹೇಳನ ಮಾಡಿದ್ದಾರೆ. ಇದರಿಂದ ಕುಪಿತಗೊಂಡ ನಾಗರಾಜ್‌ ಕಟ್ಟಿಗೆಯಿಂದ ತಂದೆಯ ಹಣೆ, ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರ

ಕೌಟುಂಬಿಕ ಕಲಹ; ತಂದೆ ತಲೆಗೆ ಕಟ್ಟಿಗೆಯಿಂದ ಹೊಡೆದ ಮಗ Read More »

KPSC ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 2017ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 106 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಸೋಮವಾರದಂದು ಪ್ರಕಟಿಸಲಾಗಿದೆ. 2021ರ ಫೆಬ್ರವರಿಯಲ್ಲಿ ಮುಖ್ಯ ಪರೀಕ್ಷೆ ನಡೆದಿದ್ದು, ಇದಾದ ಒಂದು ವರ್ಷ ಎಂಟು ತಿಂಗಳ ಬಳಿಕ ಫಲಿತಾಂಶ ಪ್ರಕಟಿಸಲಾಗಿತ್ತು.ಇತ್ತೀಚೆಗಷ್ಟೇ ಸಂದರ್ಶನ ನಡೆಸಲಾಗಿದ್ದು, ಒಂದೇ ವಾರದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ.

KPSC ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ವೇಳಾಪಟ್ಟಿ ಪ್ರಕಟ Read More »

ಜನ ಮಳೆನೀರಲ್ಲಿ ಮುಳುಗಿದರೆ ಸಚಿವರು ನಿದ್ದೆಯಲ್ಲಿ‌ ಮುಳುಗಿದರು!! ಸಭೆಯಲ್ಲಿ ಸುಖನಿದ್ರೆಗೆ ಜಾರಿದ ಕಂದಾಯ‌ ಮಂತ್ರಿ ಅಶೋಕ್

ಸಮಗ್ರ ನ್ಯೂಸ್: ವರುಣಾರ್ಭಟಕ್ಕೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ರಾಜಧಾನಿ ಬೆಂಗಳೂರು ಅಕ್ಷರಶಃ ಮುಳುಗಡೆಯಾಗಿದೆ. ಇಂತಹ ಸಂದರ್ಭದಲ್ಲಿಯೂ ಕಂದಾಯ ಸಚಿವ ಆರ್.ಅಶೋಕ್ ಸಭೆಯಲ್ಲಿಯೂ ನಿದ್ದೆಗೆ ಜಾರಿದ್ದು, ಸಚಿವರ ಬೇಜವಾಬ್ದಾರಿಗೆ ಕಾಂಗ್ರೆಸ್ ಕಿಡಿಕಾರಿದೆ. ಸರಣಿ ಟ್ವೀಟ್ ಮೂಲಕ ಕಿಡಿ ಕಾರಿರುವ ಕಾಂಗ್ರೆಸ್, ಬಿಜೆಪಿ ಪ್ರಣಾಳಿಕೆಯ ಭರವಸೆಗಳು ಮಾತ್ರ ಆಕರ್ಷಕ, ಮನಮೋಹಕ. ಆದರೆ ಆಡಳಿತ ಮಾತ್ರ ಜನತೆಗೆ ಯಾತನಾದಾಯಕ, ಭ್ರಷ್ಟಾಚಾರವೇ ಕಾಯಕವಾಗಿದೆ. ಬೆಂಗಳೂರನ್ನು ವಿಶ್ವದರ್ಜೆಯ ನಗರ ಮಾಡುವೆವು ಎಂದ ಬಿಜೆಪಿ ಈಗ ರಸ್ತೆಗುಂಡಿಗಳ ನಗರ, ಮುಳುಗುವ ನಗರವನ್ನಾಗಿ ಮಾಡಿದೆ.

ಜನ ಮಳೆನೀರಲ್ಲಿ ಮುಳುಗಿದರೆ ಸಚಿವರು ನಿದ್ದೆಯಲ್ಲಿ‌ ಮುಳುಗಿದರು!! ಸಭೆಯಲ್ಲಿ ಸುಖನಿದ್ರೆಗೆ ಜಾರಿದ ಕಂದಾಯ‌ ಮಂತ್ರಿ ಅಶೋಕ್ Read More »

ಮಹಿಳೆಯರ ಸರ ಸುಲಿಗೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಮಂಗಳೂರು : ನಗರದ ವಿವಿಧ ಕಡೆ ಮಹಿಳೆಯರ ಸರ ಸುಲಿಗೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಲಶೇಖರ ಸಮೀಪದ ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ (39), ಉರ್ವಸ್ಟೋರ್ ನಿವಾಸಿ ಸುಜಿತ್ ಶೆಟ್ಟಿ (40), ಪುತ್ತೂರು ಪದವಿನಂಗಡಿ ನಿವಾಸಿ ಸುರೇಶ್ ರೈ (39) ಎಂದು ಗುರುತಿಸಲಾಗಿದೆ‌. ಆರೋಪಿಗಳಿಂದ ಸುಲಿಗೆ ಮಾಡಿದ್ದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಫೋನ್ ಸಹಿತ ಒಟ್ಟು 5 ಲಕ್ಷ

ಮಹಿಳೆಯರ ಸರ ಸುಲಿಗೆ ಪ್ರಕರಣ; ಮೂವರು ಆರೋಪಿಗಳ ಬಂಧನ Read More »

ಕ್ರಿಕೆಟ್ ಅಂಗಳಕ್ಕೆ‌ ಗುಡ್ ಬೈ ಹೇಳಿದ ಸುರೇಶ್ ರೈನಾ

ಸಮಗ್ರ ನ್ಯೂಸ್: ಎಲ್ಲಾ ಮಾದರಿಯ ಕ್ರಿಕೆಟ್​​ ಫಾರ್ಮ್ಯಾಟ್​ಗಳಿಗೆ ಟೀಂ ಇಂಡಿಯಾ ಆಟಗಾರ‌ಸುರೇಶ್ ರೈನಾ ಗುಡ್​ಬೈ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿವೃತ್ತಿ ಬಗ್ಗೆ ಘೋಷಣೆ ಮಾಡಿದ್ದು, ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಾನು ವಿದಾಯ ಹೇಳುತ್ತಿದ್ದೇನೆ. ದೇಶ ಮತ್ತು ನನ್ನ ರಾಜ್ಯ ಉತ್ತರ ಪ್ರದೇಶವನ್ನ ಪ್ರತಿನಿಧಿಸುವುದು ಒಂದು ಸಂಪೂರ್ಣ ಗೌರವವಾಗಿದೆ. ನನ್ನ ಕ್ರಿಕೆಟ್ ಬದುಕಿನಲ್ಲಿ ಸಹಕಾರ ನೀಡಿದ ಬಿಸಿಸಿಐ, ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್, ಚೆನ್ನೈ ಐಪಿಎಲ್, ರಾಜೀವ್ ಶುಕ್ಲಾ, ನನ್ನ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಕ್ರಿಕೆಟ್ ಅಂಗಳಕ್ಕೆ‌ ಗುಡ್ ಬೈ ಹೇಳಿದ ಸುರೇಶ್ ರೈನಾ Read More »