September 2022

ಮೊಬೈಲ್ ನೋಡ್ತಾ ನೋಡ್ತಾ ಸ್ಕೂಟರ್ ಗೆ ಡಿಕ್ಕಿ ಹೊಡೆದ ಟ್ಯಾಂಕರ್; ಮಹಿಳೆ ಸಾವು, ಚಾಲಕ ಪರಾರಿ

ಸಮಗ್ರ ನ್ಯೂಸ್: ನಗರದ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಈ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ ಮೇಲೆ ಟ್ಯಾಂಕರ್​ ಹತ್ತಿಸಿದ ಘಟನೆ ಲಗ್ಗೆರೆ ಬಸ್ ನಿಲ್ದಾಣ ಬಳಿಯ ಗ್ರೇಸ್ ಪಬ್ಲಿಕ್ ಸ್ಕೂಲ್ ಮುಂಭಾಗ ಸಂಭವಿಸಿದೆ. ಮೃತರನ್ನು ಆಶಾ ಎಂದು ಗುರುತಿಸಲಾಗಿದೆ. ಆಶಾ ಅವರು ಕಿಮ್ಸ್ ಅಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಬಸ್ ನಿಲ್ದಾಣ ಕಡೆಯಿಂದ ಲಗ್ಗೆರೆಯಲ್ಲಿರುವ ಮನೆ ಕಡೆಗೆ ತೆರಳುತಿದ್ದರು. ಸ್ಕೂಲ್ ಮುಂದೆ ಬಂದಾಗ ರಸ್ತೆ ಬದಿಯಲ್ಲಿ ಎಡಭಾಗದಲ್ಲಿ ತೆರಳುತ್ತಿದ್ದ ಆಶಾ […]

ಮೊಬೈಲ್ ನೋಡ್ತಾ ನೋಡ್ತಾ ಸ್ಕೂಟರ್ ಗೆ ಡಿಕ್ಕಿ ಹೊಡೆದ ಟ್ಯಾಂಕರ್; ಮಹಿಳೆ ಸಾವು, ಚಾಲಕ ಪರಾರಿ Read More »

ಕ್ರಿಕೆಟ್ ಅಂಗಳಕ್ಕೆ‌ ಗುಡ್ ಬೈ ಹೇಳಿದ ಸುರೇಶ್ ರೈನಾ

ಸಮಗ್ರ ನ್ಯೂಸ್: ಎಲ್ಲಾ ಮಾದರಿಯ ಕ್ರಿಕೆಟ್​​ ಫಾರ್ಮ್ಯಾಟ್​ಗಳಿಗೆ ಟೀಂ ಇಂಡಿಯಾ ಆಟಗಾರ‌ಸುರೇಶ್ ರೈನಾ ಗುಡ್​ಬೈ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿವೃತ್ತಿ ಬಗ್ಗೆ ಘೋಷಣೆ ಮಾಡಿದ್ದು, ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಾನು ವಿದಾಯ ಹೇಳುತ್ತಿದ್ದೇನೆ. ದೇಶ ಮತ್ತು ನನ್ನ ರಾಜ್ಯ ಉತ್ತರ ಪ್ರದೇಶವನ್ನ ಪ್ರತಿನಿಧಿಸುವುದು ಒಂದು ಸಂಪೂರ್ಣ ಗೌರವವಾಗಿದೆ. ನನ್ನ ಕ್ರಿಕೆಟ್ ಬದುಕಿನಲ್ಲಿ ಸಹಕಾರ ನೀಡಿದ ಬಿಸಿಸಿಐ, ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್, ಚೆನ್ನೈ ಐಪಿಎಲ್, ರಾಜೀವ್ ಶುಕ್ಲಾ, ನನ್ನ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಕ್ರಿಕೆಟ್ ಅಂಗಳಕ್ಕೆ‌ ಗುಡ್ ಬೈ ಹೇಳಿದ ಸುರೇಶ್ ರೈನಾ Read More »

ನವೆಂಬರ್ 1ರಿಂದ ಐದೇ ನಿಮಿಷದಲ್ಲಿ ಆಸ್ತಿ ನೋಂದಣಿ ಪದ್ಧತಿ ಜಾರಿಗೆ – ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು: ಆಸ್ತಿ ನೋಂದಣಿಗಾಗಿ ಜನ ಅಲೆಯುವುದನ್ನು ತಪ್ಪಿಸಲು ಕೇವಲ ಐದೇ ನಿಮಿಷಗಳ ನೋಂದಣಿ ಪದ್ಧತಿಯನ್ನು ಜಾರಿಗೊಳಿಸುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಆಸ್ತಿನೋಂದಣಿಗಾಗಿ ರಾಜ್ಯಾದ್ಯಂತ ಜನರ ಅಲೆದಾಟ ನಡೆಯುತ್ತಲೇ ಇದ್ದು ಇದನ್ನು ತಪ್ಪಿಸಲು ಕಾವೇರಿ-2 ಎಂಬ ಕಾರ್ಯಕ್ರಮ ಜಾರಿಗೊಳಿಸಲಾಗುವುದು. ಇದರಡಿ ಇನ್ನು ಮುಂದೆ ಆಸ್ತಿ ನೋಂದಣಿ ಮಾಡಿಸಲು ಜನ ಉಪನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಡಬೇಕಿಲ್ಲ. ಬದಲಿಗೆ ಮನೆಯಲ್ಲಿ ಕುಳಿತು ಆನ್​ಲೈನ್ ಮೂಲಕ ಆಸ್ತಿ ನೋಂದಣಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯ ಜತೆ ದಾಖಲೆ

ನವೆಂಬರ್ 1ರಿಂದ ಐದೇ ನಿಮಿಷದಲ್ಲಿ ಆಸ್ತಿ ನೋಂದಣಿ ಪದ್ಧತಿ ಜಾರಿಗೆ – ಕಂದಾಯ ಸಚಿವ ಆರ್.ಅಶೋಕ್ Read More »

ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ವೇಳೆ ಡಿಜೆ ಬಂದ್ ಮಾಡಿದ ಗಣೇಶ ಭಕ್ತರು

ಸಮಗ್ರ ನ್ಯೂಸ್: ಗಣಪತಿ ವಿಸರ್ಜನೆ ವೇಳೆ ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ಕಂಡು ಡಿಜೆ ಬಂದ್ ಮಾಡಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದಲ್ಲಿ ನಡೆದಿದ್ದು, ಹಿಂದೂ-ಮುಸ್ಲಿಮರ ಸೌಹಾರ್ದ ಮನೋಭಾವಕ್ಕೆ ಸಾಕ್ಷಿಯಾಗಿದೆ. ಗಜಾನನ ಯುವಕ ಮಂಡಳಿಯ ಸದಸ್ಯರು ಇಲ್ಲಿನ ಉಮಾಶಂಕರ ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದರು. ಗಣೇಶ ವಿಸರ್ಜನೆಯ ಮೆರವಣಿಗೆ ಎಂ ಜಿ ರಸ್ತೆಗೆ ಬಂದಾಗ ಅದೇ ಮಾರ್ಗದಲ್ಲಿ ಮುಸ್ಲಿಂ ವ್ಯಕ್ತಿಯ ಪಾರ್ಥಿವ ಶರೀರವನ್ನು ಕಬರಸ್ತಾನ ಕಡೆಗೆ ಹೊತ್ತೊಯ್ಯುತ್ತಿದ್ದರು.  ಯುವಕ ಮಂಡಳಿಯವರು ಮುಸ್ಲಿಂ ವ್ಯಕ್ತಿಯ ಶವಯಾತ್ರೆ ದಾಟಿ

ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ವೇಳೆ ಡಿಜೆ ಬಂದ್ ಮಾಡಿದ ಗಣೇಶ ಭಕ್ತರು Read More »

ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣೆ ನಿಧನ

ಸಮಗ್ರ ನ್ಯೂಸ್: ಮಾಜಿ ಸಚಿವ ಪ್ರಭಾಕರ ರಾಣೆ ಸೋಮವಾರ ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋ ಸಹಜ ಅಲ್ಪ ಕಾಲದ ಅಸ್ವಸ್ಥತೆ ಯಿಂದ ಬಳಲುತ್ತಿದ್ದರು. ಮರೆವಿನ(ಅಲ್ಜಮೇರಿಯಾ) ಸಹ ಅವರನ್ನು ಕಾಡುತ್ತಿತ್ತು. ಸಿದ್ಧರದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಆರಂಭಿಸಿದ್ದ ಅವರು ಶಿಕ್ಷಕರನ್ನು ಸಂಘಟಿಸಿದ್ದರು. ತಾಲೂಕು ಅಭಿವೃದ್ಧಿ ಮಂಡಳಿ ಸದಸ್ಯರಾಗಿ ರಾಜಕೀಯ ಪ್ರವೇಶಿಸಿದರು‌. 1983 ರಿಂದ ಮೂರು ಅವಧಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿದ್ದರು. 1993 ರಲ್ಲಿ ವೀರಪ್ಪ ಮೊಯ್ಲಿ ಸಚಿವ ಸಂಪುಟದಲ್ಲಿ ವಯಸ್ಕರ

ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣೆ ನಿಧನ Read More »

ಸುಳ್ಯ: ರಸ್ತೆ ದುರಸ್ತಿ‌ಗೊಳಿಸಲು ಮನವಿ ಸಲ್ಲಿಸಿದ ನೆಕ್ಕರೆ ನಿವಾಸಿಗಳು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ನೆಕ್ಕರೆ ಗಿರಿಜನ ಕಾಲೋನಿಗೆ ಸಂಪರ್ಕಿಸುವ ರಸ್ತೆ ದುರಸ್ಥಿಗೊಳಿಸುವ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ನೆಕ್ಕರೆ ನಿವಾಸಿಗಳು ಮನವಿ ಸಲ್ಲಿಸಿದರು. ಅರಂತೋಡು-ಎಲಿಮಲೆ ರಸ್ತೆಯಲ್ಲಿ ನೆಕ್ಕರೆ ಎಂಬ ಊರಿಗೆ ಹಾದು ಹೋಗುವ ರಸ್ತೆಯಾಗಿದ್ದು ಇಲ್ಲಿ ಸುಮಾರು ಆರು ಗಿರಿಜನ ಕುಟುಂಬಗಳು ವಾಸಮಾಡುತ್ತಿವೆ. ಆದರೆ ಈ ಊರಿಗೆ ಸುಮಾರು _10 ಕಿ.ಮೀ ದೂರ ಕಾಡಿನ ಮಧ್ಯದಲ್ಲಿ ಸಂಚರಿಸಬೇಕು. ಕೆಲವು ಕಡೆಗಳಲ್ಲಿ ಮಾತ್ರ ಕಾಂಕ್ರೀಟಿಕರಣ, ಉಳಿದ ಕಡೆಗಳಲ್ಲಿ ಹೊಂಡ ಗುಂಡಿಗಳು ಇವೆ. ಹಾಗಾಗಿ 10

ಸುಳ್ಯ: ರಸ್ತೆ ದುರಸ್ತಿ‌ಗೊಳಿಸಲು ಮನವಿ ಸಲ್ಲಿಸಿದ ನೆಕ್ಕರೆ ನಿವಾಸಿಗಳು Read More »

ಮುಳುಗಿದ ಬೆಂಗಳೂರು; ಮಳೆಹಾನಿ ನಿರ್ವಹಣೆಗೆ 600 ಕೋಟಿ ಬಿಡುಗಡೆ

ಸಮಗ್ರ ನ್ಯೂಸ್: ಸಿಎಂ ಬೊಮ್ಮಾಯಿ ಬೆಂಗಳೂರು ಮಳೆ ಹಾನಿ ಮಾಹಿತಿ ಪಡೆದಿದ್ದು, ರಾಜ್ಯದ ಮಳೆ ಪರಿಸ್ಥಿತಿ ನಿರ್ವಹಣೆಗೆ 600 ಕೋಟಿ ರಿಲೀಸ್​ ಮಾಡಿದೆ. ಬೆಂಗಳೂರಿಗೆ 300 ಕೋಟಿ ಬಿಡುಗಡೆ ಮಾಡಲು ತೀರ್ಮಾನ ಮಾಡಿದೆ. ಸ್ಟಾರ್ಮ್​​​ ವಾಟರ್ ಡ್ರೈನ್ ಮಾಡಲು 300 ಕೋಟಿ ಬಿಡುಗಡೆ ಮಾಡಲಾಗುತ್ತದೆ. ಬೆಂಗಳೂರಿಗೆ ಕಾವೇರಿ ನೀರು ಪಂಪ್​ ಮಾಡುವ ಸ್ಥಳಕ್ಕೂ ಭೇಟಿ ನೀಡಿದ್ಧಾರೆ. ತೊರೆಕಾಡನಹಳ್ಳಿಯಲ್ಲಿ BWSSB ಪಂಪ್​​ ಹೌಸ್​ ಮುಳುಗಿದೆ. ಸೆಪ್ಟೆಂಬರ್​​ ಆರಂಭದಲ್ಲೇ ಶೇ.51ರಷ್ಟು ದಾಖಲೆ ಮಳೆ ಆಗಿದೆ. 17 ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ

ಮುಳುಗಿದ ಬೆಂಗಳೂರು; ಮಳೆಹಾನಿ ನಿರ್ವಹಣೆಗೆ 600 ಕೋಟಿ ಬಿಡುಗಡೆ Read More »

ಮಂಗಳೂರು ವಿ. ವಿ ಪರೀಕ್ಷೆಯಲ್ಲಿ ಅವಾಂತರ| ಹೊಸ ಸಿಲೇಬಸ್ ಗೆ ಹಳೆ ಪ್ರಶ್ನೆಪತ್ರಿಕೆ; ಪರೀಕ್ಷೆ ಮುಂದೂಡಿಕೆ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಪರೀಕ್ಷೆಗಳು ಸೆ. 5ರಂದು ಆರಂಭವಾಗಿದ್ದು, ಮೊದಲ ದಿನವೇ ಬಿಬಿಎ ದ್ವಿತೀಯ ಸೆಮಿಸ್ಟರ್‌ನ ಕನ್ನಡ ಪರೀಕ್ಷೆಗೆ ಹಳೆಯ ಪ್ರಶ್ನೆ ಪತ್ರಿಕೆ ನೀಡಿದ ಪರಿಣಾಮ ಪರೀಕ್ಷೆಯನ್ನು ಮುಂದೂಡಿ ಮುಜುಗರಕ್ಕೀಡಾಗಿದೆ. ಪರಿಷ್ಕೃತ ದಿನಾಂಕವನ್ನು ಶೀಘ್ರ ತಿಳಿಸುವುದಾಗಿ ವಿ.ವಿ. ಆಡಳಿತ ಕಾಲೇಜುಗಳಿಗೆ ತಿಳಿಸಿದೆ. ವಿ.ವಿ. ವ್ಯಾಪ್ತಿಯ 34 ಕಾಲೇಜುಗಳಲ್ಲಿ ಬಿಬಿಎ ದ್ವಿತೀಯ ಸೆಮಿಸ್ಟರ್‌ನ ಪರೀಕ್ಷೆ ಸೋಮವಾರ ಆರಂಭವಾಯಿತು. ಮೊದಲ ದಿನ ಕನ್ನಡ ಪರೀಕ್ಷೆ ನಿಗದಿಯಾಗಿತ್ತು. ವಿದ್ಯಾರ್ಥಿಗಳಿಗೆ ನೀಡಿದ ಪ್ರಶ್ನೆಪತ್ರಿಕೆಯ ಮೇಲ್ಭಾಗದಲ್ಲಿ “ದ್ವಿತೀಯ ಸೆಮಿಸ್ಟರ್‌’ ಎಂದು ನಮೂದಿಸಲಾಗಿತ್ತು.

ಮಂಗಳೂರು ವಿ. ವಿ ಪರೀಕ್ಷೆಯಲ್ಲಿ ಅವಾಂತರ| ಹೊಸ ಸಿಲೇಬಸ್ ಗೆ ಹಳೆ ಪ್ರಶ್ನೆಪತ್ರಿಕೆ; ಪರೀಕ್ಷೆ ಮುಂದೂಡಿಕೆ Read More »

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ಯಿಂದ 32 ಕಡೆ ದಾಳಿ, ಚುರುಕುಗೊಂಡ ತನಿಖೆ

ಸಮಗ್ರ ನ್ಯೂಸ್: ಜುಲೈ 26ರ ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು(34ವ) ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ಬೆನ್ನತ್ತಿ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ. ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದ 32 ಕಡೆ ಮನೆ, ಕಟ್ಟಡಗಳಿಗೆ ಮಿಂಚಿನ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ. ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ. ಸೆ.6ರ ಮುಂಜಾನೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ಯಿಂದ 32 ಕಡೆ ದಾಳಿ, ಚುರುಕುಗೊಂಡ ತನಿಖೆ Read More »

ಸಾವಿಗೆ ಶರಣಾದ ನೇಗಿನಹಾಳ ಬಸವಸಿದ್ದಲಿಂಗ ಸ್ವಾಮೀಜಿ ಡೆತ್ ನೋಟ್ ಪತ್ತೆ ಸತ್ಯ ಬಯಲು !

ಮಹಿಳೆಯರ ಆಡಿಯೋ ವೈರಲ್‌ ಆದ ಹಿನ್ನೆಲೆ ಮನನೊಂದು ಸಾವಿಗೆ ಶರಣಾದ ನೇಗಿನಹಾಳ ಬಸವಸಿದ್ದಲಿಂಗ ಸ್ವಾಮೀಜಿ ಅವರು ಬರೆದಿರುವ ಡೆತ್‌ ನೋಟ್‌ ಇದೀಗ ಪತ್ತೆಯಾಗಿದೆ. ಚಿತ್ರದುರ್ಗದ ಸ್ವಾಮೀಜಿಗಳ ಲೈಂಗಿಕ ಹಗರಣವನ್ನು ಉಲ್ಲೇಖಿಸಿದ್ದಳು, ಆ ಆಡಿಯೋ ವೈರಲ್‌ ಆಗಿತ್ತು. 2007 ರಲ್ಲಿ ಮಡಿವಾಳೇಶ್ವರ ಪೀಠ ಅಲಂಕರಿಸಿದ್ದ ಬಸವಸಿದ್ದಲಿಂಗ ಸ್ವಾಮೀಜಿ 15 ವರ್ಷಗಳಿಂದ ಮಡಿವಾಳೇಶ್ವರ ಪೀಠಾಧಿಪತಿ ಆಗಿದ್ದರು. ನಿನ್ನೆ ತಡರಾತ್ರಿವರೆಗೂ ಕೂಡ ಭಕ್ತರ ಜೊತೆ ಅವರು ಮಾತುಕಥೆಯನ್ನು ನಡೆಸಿದ್ದರು. ಸೇವಕರು ಬೆಳಿಗ್ಗೆ ಸ್ವಾಮೀಜಿ ಕೋಣೆಗೆ ಹೋದಾಗ ಅವರು ಸಾವಿಗೀಡಗಿರುವ ವಿಷಯ ತಿಳಿದುಬಂದಿದೆ.

ಸಾವಿಗೆ ಶರಣಾದ ನೇಗಿನಹಾಳ ಬಸವಸಿದ್ದಲಿಂಗ ಸ್ವಾಮೀಜಿ ಡೆತ್ ನೋಟ್ ಪತ್ತೆ ಸತ್ಯ ಬಯಲು ! Read More »