ಕಾಂತಾರದ ವಿರುದ್ದ ಕಾನೂನು ಸಮರಕ್ಕೆ ಸಿದ್ಧತೆ| ‘ವರಾಹರೂಪಂ’ ಮೇಲೆ ಕೃತಿಚೌರ್ಯದ ಕರಿನೆರಳು

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ’ ಭರ್ಜರಿ ಯಶಸ್ಸು ಕಂಡಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಹೀಗಿರುವಾಗಲೇ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ಬಗ್ಗೆ ಕಾನೂನು ಹೋರಾಟಕ್ಕೆ ಕೇರಳದ ತೈಕುಡಂ ಬ್ರಿಗೇಡ್ ಸಂಸ್ಥೆ ಮುಂದಾಗಿದೆ.

Ad Widget ... ..

ಮಲಯಾಳಂ ‘ನವರಸಂ’ ಹಾಡು ಹೋಲುವಂತೆ ‘ವರಾಹ ರೂಪಂ’ ಹಾಡಿನ ಸಾಮ್ಯತೆ ಇದೆ. 5 ವರ್ಷಗಳ ಹಿಂದೆ ‘ನವರಸಂ’ ಆಲ್ಬಂ ಸಾಂಗ್ ಬಿಡುಗಡೆಯಾಗಿದ್ದು, ಅದರ ಟ್ಯೂನ್ ಕಾಪಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

Ad Widget

ಇದು ಕಾಪಿ ರೈಟ್ ಉಲ್ಲಂಘನೆಯಾಗಿದ್ದು, ‘ಕಾಂತಾರ’ ಚಿತ್ರತಂಡದ ವಿರುದ್ಧ ಕಾನೂನು ಮೊರೆ ಹೋಗುವುದಾಗಿ ತೈಕುಡಂ ಬ್ರಿಗೇಡ್ ಸಂಸ್ಥೆ ತಿಳಿಸಿದೆ.

ವರಾಹ ರೂಪಂ ಸಂಗೀತಾಭಿಮಾನಿಗಳನ್ನು ಸೆಳೆದಿದೆ. ಚಿತ್ರದ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಮತ್ತು ಸಾಯಿ ವಿಘ್ನೇಶ್ ಅವರು ಹಾಡಿರುವ ವರಾಹ ರೂಪಂ ಮತ್ತು ಕೇರಳ ಮೂಲದ ಬಹು-ಪ್ರಕಾರದ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್‌ನ ನವರಸಂ ಹಾಡಿನ ಕಾಪಿಯಾಗಿದೆ ಎಂದು ಹೇಳಲಾಗಿದೆ.

ವಿಪಿನ್ ಲಾಲ್ ಅವರು ಐದು ವರ್ಷಗಳ ಹಿಂದೆ ಬಿಡುಗಡೆಯಾದ ತಮ್ಮ ಚೊಚ್ಚಲ ಆಲ್ಬಂನ ಶೀರ್ಷಿಕೆ ಗೀತೆಯೊಂದಿಗೆ ವರಾಹ ರೂಪಂ ಸಾಮ್ಯತೆ ಹೊಂದಿದೆ ಎಂದು ದೂರಿದ್ದಾರೆ. ಅಲ್ಲದೇ ಕಾನೂನು ಸಮರ ನಡೆಸುವುದಾಗಿ ಹೇಳಿದ್ದಾರೆ.

ನಮ್ಮ ನವರಸಂ ಮತ್ತು ವರಾಹ ರೂಪಂ ನಡುವಿನ ಸಾಮ್ಯತೆಗಳು ಆಡಿಯೋ ವಿಷಯದಲ್ಲಿ ಹಕ್ಕುಸ್ವಾಮ್ಯ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ನಮ್ಮ ದೃಷ್ಟಿಕೋನದಿಂದ, ‘ಪ್ರೇರಿತ’ ಮತ್ತು ‘ಚೌರ್ಯ’ ನಡುವಿನ ಗೆರೆಯು ವಿಭಿನ್ನವಾಗಿದೆ ಮತ್ತು ನಿರ್ವಿವಾದವಾಗಿದೆ. ಆದ್ದರಿಂದ, ನಾವು ಇದಕ್ಕೆ ಕಾರಣವಾದ ಕ್ರಿಯೇಟಿವ್ ತಂಡದ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *