November 2022

ಸನ್ಯಾಸಿಗಳಿಂದ ಡ್ರಗ್ಸ್ ಸೇವನೆ| ಅನಾಥವಾದ ದೇವಾಲಯ

ಸಮಗ್ರ ನ್ಯೂಸ್: ಸನ್ಯಾಸಿಗಳೆಂದರೆ‌ ಆಸೆ, ಆಕಾಂಕ್ಷೆಗಳನ್ನು ತೊರೆದವರು. ಆದರೆ ಇತ್ತೀಚಿಗೆ ಈ ಸನ್ಯಾಸಿಗಳ‌ ಕಥೆಯೇ ಬೇರೆಯಾಗ್ತಿದೆ. ಈ ಬೌಧ್ಧವಿಹಾರದಲ್ಲಿ ಎಲ್ಲಾ ಸನ್ಯಾಸಿಗಳು ಮಾದಕ ವಸ್ತು ಸೇವನೆಯಲ್ಲಿ ಪಾಸ್ ಆಗಿದ್ದು, ವಿಹಾರ ಅನಾಥವಾದ ಘಟನೆ ನಡೆದಿದೆ. ಹೌದು, ಥಾಯ್ಲೆಂಡ್‌ನ ಬೌದ್ಧ ದೇವಾಲಯವೊಂದು ಒಂದೇ ದಿನದಲ್ಲಿ ಎಲ್ಲಾ ಸನ್ಯಾಸಿಗಳನ್ನು ವಜಾಗೊಳಿಸಿದೆ. ಕಾರಣವೆಂದರೆ ಅವರಿಗೆ ಡ್ರಗ್ ಸೇವಿಸಿದ್ದಾರೆಯೇ ಎಂದು ಪರೀಕ್ಷೆ ನಡೆಸಲಾಯಿತು. ಆದರೆ ಅಲ್ಲಿ ಡ್ರಗ್ಸ್ ಬಳಸದ ಒಬ್ಬ ಸನ್ಯಾಸಿಯೂ ಇರಲಿಲ್ಲ ಎಂದು ತಿಳಿದುಬಂದಿದೆ. ಇದರೊಂದಿಗೆ ಎಲ್ಲರನ್ನೂ ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು […]

ಸನ್ಯಾಸಿಗಳಿಂದ ಡ್ರಗ್ಸ್ ಸೇವನೆ| ಅನಾಥವಾದ ದೇವಾಲಯ Read More »

NDTV ಆ್ಯಂಕರ್ ರವೀಶ್ ಕುಮಾರ್ ದಿಢೀರ್ ರಾಜೀನಾಮೆ

ಸಮಗ್ರ ನ್ಯೂಸ್: ಎನ್‌ಡಿಟಿವಿಯ ಜನಪ್ರಿಯ ನಿರೂಪಕ ರವೀಶ್ ಕುಮಾರ್ ಅವರು ವಾಹಿನಿಯ ಹಿರಿಯ ಕಾರ್ಯನಿರ್ವಾಹಕ ಸಂಪಾದಕ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಎನ್‌ಡಿಟಿವಿ ಅಧ್ಯಕ್ಷೆ ಸುಪರ್ಣಾ ಸಿಂಗ್ ಅವರು ರವೀಶ್ ಅವರ ರಾಜೀನಾಮೆಯ ಕುರಿತು ಚಾನೆಲ್‌ನ ಉದ್ಯೋಗಿಗಳಿಗೆ ಇಮೇಲ್ ಮೂಲಕ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಗೌತಮ್ ಅದಾನಿ ಚಾನೆಲ್‌ ಅಧೀನವನ್ನು ವಹಿಸಿಕೊಂಡ ನಂತರ ಚಾನೆಲ್‌ನ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ಅವರ ರಾಜೀನಾಮೆಯ ಬೆನ್ನಲ್ಲೇ ರವೀಶ್ ಅವರೂ ರಾಜೀನಾಮೆ ನೀಡಿದ್ದಾರೆ. ತನ್ನ ದಿಟ್ಟ ಪತ್ರಿಕೋದ್ಯಮದ

NDTV ಆ್ಯಂಕರ್ ರವೀಶ್ ಕುಮಾರ್ ದಿಢೀರ್ ರಾಜೀನಾಮೆ Read More »

ಬೆಳ್ತಂಗಡಿ: ಅಡಿಕೆ‌ ಮರ ಬಿದ್ದು ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ತಲೆ ಮೇಲೆ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಮುಂಡಾಜೆ ಗ್ರಾಮದ ಕುಂಟಾಲಪಳಿಕೆ ನಿವಾಸಿ ಅಣ್ಣು ನಲ್ಕೆ (66) ಎಂದು ಗುರುತಿಸಲಾಗಿದೆ. ಇವರು ಕುವೆತ್ಯಾರು ನಿವಾಸಿ ನವೀನ್ ಎಂಬವರ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ತೋಟದ ಹಳೆಯ ಅಡಿಕೆ ಮರಗಳನ್ನು ನೌಫಾಲ್ ಎಂಬರು ಕಡಿಯುತ್ತಿದ್ದರು. ಈ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಅಣ್ಣು ಅವರ ತಲೆ ಮೇಲೆ ಬಿದ್ದಿದ್ದು

ಬೆಳ್ತಂಗಡಿ: ಅಡಿಕೆ‌ ಮರ ಬಿದ್ದು ಕಾರ್ಮಿಕ ಸಾವು Read More »

ಷೇರು ಮಾರುಕಟ್ಟೆಯಲ್ಲಿ ಗೂಳಿ ಗುದ್ದಾಟ| ಸಾರ್ವಕಾಲಿಕ ಏರಿಕೆ ಕಂಡ ಸೆನ್ಸೆಕ್ಸ್, ನಿಪ್ಟಿ

ಸಮಗ್ರ ನ್ಯೂಸ್: ಭಾರತೀಯ ಷೇರು ಮಾರುಕಟ್ಟೆ ಸಾರ್ವಕಾಲಿಕ ಏರಿಕೆ ಕಂಡಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಮತ್ತೊಮ್ಮೆ ಸಾರ್ವಕಾಲಿಕ ಉನ್ನತ ಮಟ್ಟಕ್ಕೆ ತಲುಪಿವೆ. ಇದರೊಂದಿಗೆ ಹೊಸ ದಾಖಲೆ ಸಹ ನಿರ್ಮಾಣವಾಗಿದೆ. ಸೆನ್ಸೆಕ್ಸ್ ಚೊಚ್ಚಲ ಬಾರಿಗೆ 63 ಸಾವಿರದ ಗಡಿ ದಾಟಿದರೆ, ನಿಫ್ಟಿ 18800ರ ಗಡಿ ದಾಟಿದೆ. ಇದರೊಂದಿಗೆ ಇಂದಿನ ಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡರಲ್ಲೂ ಏರಿಳಿತ ಕಂಡಿದೆ. ಸೆನ್ಸೆಕ್ಸ್ ತನ್ನ ಸಾರ್ವಕಾಲಿಕ ಗರಿಷ್ಠ ಮಟ್ಟ 63,303.01 ಕ್ಕೆ ತಲುಪಿದೆ. ಸೆನ್ಸೆಕ್ಸ್ 417.81 (0.67%) ಪಾಯಿಂಟ್‌ ಏರಿಕೆಯೊಂದಿಗೆ 63,099.65ಕ್ಕೆ

ಷೇರು ಮಾರುಕಟ್ಟೆಯಲ್ಲಿ ಗೂಳಿ ಗುದ್ದಾಟ| ಸಾರ್ವಕಾಲಿಕ ಏರಿಕೆ ಕಂಡ ಸೆನ್ಸೆಕ್ಸ್, ನಿಪ್ಟಿ Read More »

ಸುಳ್ಯ: ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ 8 ವರ್ಷದ ಬಾಲಕಿ ಸಾವು

ಸುಳ್ಯ: ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ ಘಟನೆ ಸುಳ್ಯದ ಅರಂತೋಡು ಗ್ರಾಮದಲ್ಲಿ ನ. 30ರಂದು ಸಂಭವಿಸಿದೆ. ಅರಂತೋಡು ಪೇಟೆಯಲ್ಲಿ ಹೊಟೇಲ್ ನಡೆಸುತ್ತಿರುವ ಯೋಗೀಶ್ ಅವರ ಪುತ್ರಿ ಖುಷಿ (8) ಮೃತ ಬಾಲಕಿ. ಅರಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ ಬಾಲಕಿ ಖುಷಿ, ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಬಾಲಕಿ ತಂದೆ ಯೋಗೀಶ್, ತಾಯಿ ಲಲಿತಾರನ್ನು

ಸುಳ್ಯ: ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ 8 ವರ್ಷದ ಬಾಲಕಿ ಸಾವು Read More »

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್

ಸಮಗ್ರ ನ್ಯೂಸ್: ರಿಲೀಸ್​ ಆಗುವ ಪ್ರತಿ ಸಿನಿಮಾ ಕೂಡ ಪ್ರೇಕ್ಷಕರ ಮನಗೆಲ್ಲೋದು ಕಷ್ಟ. ಆದರೆ ಕಂಟೆಂಟ್​ ಇದ್ದರೆ ಎಂತಹದ್ದೇ ಚಿತ್ರವಾದ್ರೂ ಸದ್ದು ಮಾಡುತ್ತೆ. ಸದ್ಯ ‘ಸದ್ದು ವಿಚಾರಣೆ ನಡೆಯುತ್ತಿದೆ’ ಎಂಬ ಸಿನಿಮಾ ಕಳೆದ ಶುಕ್ರವಾರ ತೆರೆಕಂಡಿದ್ದು, ಒಳ್ಳೆಯ ಕಥೆ, ಚಿತ್ರಕಥೆ, ಪಾತ್ರಗಳು ಹಾಗೂ ಮೇಕಿಂಗ್​ನಿಂದ ಎಲ್ಲರ ಗಮನ ಸೆಳೆದಿದೆ. ಕಾಂತಾರ ಬಳಿಕ ಕನ್ನಡದ ಈ ಸಿನಿಮಾ, IMDbಯಲ್ಲಿ 9.8 ರೇಟಿಂಗ್ ಪಡೆದಿದೆ. ಪ್ರತಿಷ್ಠಿತ IMDb ಸಿಕ್ಕ ಸಿಕ್ಕವ್ರಿಗೆಲ್ಲಾ ಹೀಗೆ ರೇಟಿಂಗ್ ಕೊಡುವ ವೆಬ್​ಸೈಟ್ ಅಲ್ಲ. ತುಂಬಾ ಕ್ಲಿಯರ್

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್ Read More »

ಪದವೀಧರ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ

ಸಮಗ್ರ‌ ನ್ಯೂಸ್: ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿ ಇದ್ದ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಈ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15 ಸಾವಿರ ಪದವೀಧದ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. 15 ಸಾವಿರ ಹುದ್ದೆಗಳಿಗೆ 13,363 ಅಭ್ಯರ್ಥಿಗಳು ಮಾತ್ರವೇ ಆಯ್ಕೆಯಾಗಿದ್ದರು. ಇನ್ನೂ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಇಲ್ಲದೇ ಖಾಲಿ ಉಳಿದಿದ್ದವು. ಶಿಕ್ಷಣ

ಪದವೀಧರ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ Read More »

ಪಿಎಫ್ಐ ಬ್ಯಾನ್ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಪಾಪುಲರ್ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ನಿಷೇಧಿಸಿ ಕೇಂದ್ರ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಪಿಎಫ್ಐ ನಿಷೇಧ ಆದೇಶ ಪ್ರಶ್ನಿಸಿ ‌ಪಿಎಫ್ಐ ಮುಖಂಡ ನಾಸಿರ್ ಅಲಿ‌ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಮಾಡಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಇಂದು ಅರ್ಜಿಯನ್ನು ವಜಾಗೊಳಿಸಿದ್ದು, ಕೇಂದ್ರದ ತೀರ್ಪನ್ನು ಎತ್ತಿ ಹಿಡಿದಿದೆ. ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎನ್ನುವ ಆರೋಪದ ಮೇಲೆ ಪಾಪ್ಯುಲರ್‌

ಪಿಎಫ್ಐ ಬ್ಯಾನ್ ಎತ್ತಿ ಹಿಡಿದ ಹೈಕೋರ್ಟ್ Read More »

ಕರಾವಳಿಯಲ್ಲಿ ಮತ್ತೊಂದು ಧರ್ಮದಂಗಲ್ ಶುರು| ಲವ್ ಜಿಹಾದ್ ವಿರುದ್ದ ಹಿಂಜಾವೇ ಪೋಸ್ಟರ್ ಅಭಿಯಾನ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಮತ್ತೊಂದು ಧರ್ಮ ದಂಗಲ್‌ ಶುರುವಾಗಿದ್ದು, ಲವ್‌ ಜಿಹಾದ್‌ ವಿರುದ್ಧ ಹಿಂದೂ ಜಾಗರಣ ವೇದಿಕೆ ಜಾಗೃತಿ ಮೂಡಿಸಲು ಮುಂದಾಗಿದ್ದು ದೆಹಲಿ ಶ್ರದ್ಧಾ ಕೇಸ್‌ ಮುಂದಿಟ್ಟುಕೊಂಡು ಇದೀಗ ಹೊಸ ಪೋಸ್ಟರ್‌ ವಾರ್‌ ಮೂಲಕ ಕಿಚ್ಚು ಹಚ್ಚಿದ್ದಾರೆ. ಈ ಪೋಸ್ಟರ್‌ನಲ್ಲಿ ‘ಕಣ್ಣಿದ್ದು ಕುರುಡಾಗಬೇಡಿ ತಿಳಿದು ತಪ್ಪು,ಮಾಡಬೇಡಿ.. ಹಿಂದೂ ಯುವತಿಯ ಜೊತೆ ತಿರುಗಾಡಿದ್ರೆ ಹುಷಾರ್‌..! ಶವ ಯಾತ್ರೆ ಮಾಡಲಾಗುತ್ತದೆ’ ಎಂದು ಮುಸ್ಲಿಂ ಸಮುದಾಯದ ಯುವಕರಿಗೆ ಭಜರಂಗದಳ ಸಂಚಾಲಕ ಪುನೀತ್‌ ಅತ್ತಾವರ್‌ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ‘ಇನ್ನೂ ಪದೇ ಪದೇ

ಕರಾವಳಿಯಲ್ಲಿ ಮತ್ತೊಂದು ಧರ್ಮದಂಗಲ್ ಶುರು| ಲವ್ ಜಿಹಾದ್ ವಿರುದ್ದ ಹಿಂಜಾವೇ ಪೋಸ್ಟರ್ ಅಭಿಯಾನ Read More »

ಹಿಜಾಬ್ ವಿವಾದ ಎಫೆಕ್ಟ್; ರಾಜ್ಯದ‌10 ಕಡೆ ಮುಸ್ಲಿಂ ‌ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜಿಗೆ ಸರ್ಕಾರದ ಒಪ್ಪಿಗೆ| ಇದು ಖಂಡನೀಯ ಎಂದ ಶ್ರೀರಾಮ ಸೇನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲಾಗುವುದು. ರಾಜ್ಯ ಸರ್ಕಾರದಿಂದಲೇ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಅಸ್ತು ಎನ್ನಲಾಗಿದೆ. ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಮುಂದಿನ ತಿಂಗಳು ಶಂಕುಸ್ಥಾಪನೆ ನೆರವೇರಿಸಲಾಗುವುದು. ಕಾಲೇಜು ನಿರ್ಮಾಣದ ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು. ಪ್ರತಿ ಕಾಲೇಜಿಗೆ 2.50 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಸರ್ಕಾರ ವಕ್ಫ್ ಬೋರ್ಡ್ ನೀಡುವ ಅನುದಾನದಲ್ಲಿ ಕಾಲೇಜು ನಿರ್ಮಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ಕಣ್ಣೂರಿನಲ್ಲಿ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಉತ್ತರ ಕರ್ನಾಟಕ ಸೇರಿದಂತೆ

ಹಿಜಾಬ್ ವಿವಾದ ಎಫೆಕ್ಟ್; ರಾಜ್ಯದ‌10 ಕಡೆ ಮುಸ್ಲಿಂ ‌ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜಿಗೆ ಸರ್ಕಾರದ ಒಪ್ಪಿಗೆ| ಇದು ಖಂಡನೀಯ ಎಂದ ಶ್ರೀರಾಮ ಸೇನೆ Read More »