ಬೆಟ್ಟಕ್ಕೆ ತೆರಳಿದ ಯುವಕ ಚಿರತೆ ಬಾಯಿಗೆ ಬಲಿ

ಸಮಗ್ರ ನ್ಯೂಸ್: ತಿ.ನರಸೀಪುರ ತಾಲ್ಲೂಕಿನ ಮದ್ಗಾರ್ ಲಿಂಗಯ್ಯನಹುಂಡಿ ಗ್ರಾಮದ ಬಳಿ ಚಿರತೆ ದಾಳಿಗೆ ಯುವಕ ಬಲಿಯಾಗಿದ್ದಾನೆ. ಮಹಾರಾಜ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಮಂಜುನಾಥ್ (18) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

Ad Widget ... ..

ಮಲ್ಲಪ್ಪನ ಬೆಟ್ಟದ ಸಮೀಪವಿರುವ ಮುದ್ದು ಮಾರಮ್ಮ ದೇವಾಲಯಕ್ಕೆ ಸ್ನೇಹಿತರೊಂದಿಗೆ ಪೂಜೆಗೆಂದು ಹೋಗಿದ್ದಾಗ ಘಟನೆ ನಡೆದಿದೆ.

Ad Widget

ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದಾಗ ಪೊದೆಯಿಂದ ಜಿಗಿದು ಬಂದ ಚಿರತೆ ಯುವಕನ ಮೇಲೆ ದಾಳಿ ನಡೆಸಿತು. ಸ್ನೇಹಿತರು ಚಿರತೆಗೆ ಕಲ್ಲು ಹೊಡೆದು ಮಂಜುನಾಥ್‌ನನ್ನು ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಗ್ರಾಮಸ್ಥರು ಯುವಕನ ಸಹಾಯಕ್ಕೆ ಬರುವಷ್ಟರಲ್ಲೇ ಆತ​ ಮೃತಪಟ್ಟಿದ್ದನು.

ಈ ಘಟನೆಯ ಹಿನ್ನೆಲೆಯಲ್ಲಿ ಮಲ್ಲಪ್ಪನ ಬೆಟ್ಟದ ಸುತ್ತಮುತ್ತಲಿನ ಗ್ರಾಮದ ಜನ ರಾತ್ರಿಯ ವೇಳೆ ಮನೆಯಿಂದ ಹೊರಬರಲು ಭಯಭೀತರಾಗಿದ್ದಾರೆ.

Leave a Comment

Your email address will not be published. Required fields are marked *