‘ಜನಗಣಮನ’ ಮತ್ತು ‘ವಂದೇ ಮಾತರಂ’ ಗೆ ಸಮಾನ ಸ್ಥಾನ ನೀಡಬೇಕು- ಕೇಂದ್ರ‌ ಸರ್ಕಾರ

ಸಮಗ್ರ ನ್ಯೂಸ್: ‘ಜನ ಗಣ ಮನ’ ಮತ್ತು ‘ವಂದೇ ಮಾತರಂ’ ಎರಡೂ ಸಮಾನ ಸ್ಥಾನದಲ್ಲಿದ್ದು, ದೇಶದ ಪ್ರತಿಯೊಬ್ಬ ಪ್ರಜೆ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಕೇಂದ್ರ ಸರ್ಕಾರ ಶನಿವಾರ ದೆಹಲಿ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

Ad Widget ... ..

ರಾಷ್ಟ್ರೀಯ ಗೀತೆ ಮತ್ತು ರಾಷ್ಟ್ರಗೀತೆಯ ನಡುವಿನ ಸಮಾನತೆಯ ಪರಿಶೀಲನೆಗಾಗಿ ಮತ್ತು ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ರಾಷ್ಟ್ರಗೀತೆಯ ಸಮನಾದ ಗೌರವ ಮತ್ತು ಸ್ಥಾನಮಾನವನ್ನು ನೀಡುವ ಮಾರ್ಗಸೂಚಿಗಳನ್ನು ರೂಪಿಸುವಂತೆ ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಸಮಯದಲ್ಲಿ (ಪಿಐಎಲ್) ಕೇಂದ್ರವು ಹೈಕೋರ್ಟ್​ಗೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದೆ.

Ad Widget

ಇದಕ್ಕೂ ಮುನ್ನ ದೆಹಲಿ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಗೃಹ ಸಚಿವಾಲಯ, ಶಿಕ್ಷಣ ಸಚಿವಾಲಯ, ಸಂಸ್ಕೃತಿ ಸಚಿವಾಲಯ, ಕಾನೂನು ಮತ್ತು ನ್ಯಾಯ ಸಚಿವಾಲಯ ಮತ್ತು ಇತರರಿಂದ ಪ್ರತಿಕ್ರಿಯೆ ಕೇಳಿತ್ತು.

ಜನವರಿ 24, 1950 ರ ಸಂವಿಧಾನ ಸಭೆಯ ನಿರ್ಣಯದಂತೆ ಮತ್ತು ಮದ್ರಾಸ್ ಹೈಕೋರ್ಟ್ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯವು ನೀಡಿದ ತೀರ್ಪಿನಂತೆ ಪ್ರತಿ ಕೆಲಸದ ದಿನದಂದು ಎಲ್ಲಾ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ‘ಜನ-ಗಣ-ಮನ’ ಮತ್ತು ‘ವಂದೇ ಮಾತರಂ’ ನುಡಿಸುವುದನ್ನು ಮತ್ತು ಹಾಡುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಲಾಗಿದೆ.

Leave a Comment

Your email address will not be published. Required fields are marked *