ಮಂಗಳೂರು: ಲಾರಿ ಚಾಲಕನ ಧಾವಂತಕ್ಕೆ
ಮಹಿಳೆ ಸೇರಿದಂತೆ ಇಬ್ಬರು ಸಾವು

ಸಮಗ್ರ ನ್ಯೂಸ್: ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನಪ್ಪಿದ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Ad Widget ... ..

ಮೃತರನ್ನು ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು ನಿವಾಸಿ ಗಂಗಾಧರ (45) ಮೃತರು. ಸ್ಕೂಟರಿನಲ್ಲಿ ಇವರ ಜೊತೆಗಿದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget

ಇವರು ಸ್ಕೂಟರ್ ನಲ್ಲಿ ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಎದುರುಗಡೆ ಅಡ್ಡ ರಸ್ತೆಯಿಂದ ಹೆದ್ದಾರಿಗೆ ನುಗ್ಗುತ್ತಿದ್ದ ಸರಕು ತುಂಬಿದ್ದ ಲಾರಿ ಡಿಕ್ಕಿಯಾಗಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಗಂಗಾಧರ್ ಮತ್ತು ನೇತ್ರಾವತಿ ರಸ್ತೆಗೆ ಬಿದ್ದು ಮೃತಪಟ್ಟಿದ್ದಾರೆ.‌ ಲಾರಿ ಚಾಲಕ ಹನೀಫ್ ನಿರ್ಲಕ್ಷ್ಯದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *