ದುರ್ಬಲ ವರ್ಗದವರಿಗೆ ಶೇ.10 ಮೀಸಲಾತಿ| ಸರ್ಕಾರದ ನಡೆಯನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್

ಸಮಗ್ರ ನ್ಯೂಸ್: ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10 ರಷ್ಟು ಮೀಸಲಾತಿ ವಿಚಾರ ನೀಡುವ ಕುರಿತಂತೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಮಾನ ಹೊರ ಬಿದ್ದಿದ್ದು, ಐವರು ನ್ಯಾಯಮೂರ್ತಿಗಳ ಪೈಕಿ ನಾಲ್ವರು ನ್ಯಾಯಮೂರ್ತಿಗಳು ಸರ್ಕಾರದ ತೀರ್ಮಾನವನ್ನು ಎತ್ತಿ ಹಿಡಿದಿದ್ದಾರೆ. ನ್ಯಾಯಮೂರ್ತಿ ರವೀಂದ್ರ ಭಟ್‌ ಅವರು ಮಾತ್ರ ಇದು ಅಸಾಂವಿಧಾನಿಕ ಎಂದು ಅಭಿಪ್ರಾಯಪಟ್ಟಿದ್ದಾರೆ.

. Ad Widget . Ad Widget

ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವುದರಿಂದ ಸಂವಿಧಾನದ ಆಶಯಗಳಿಗೆ ಧಕ್ಕೆ ಆಗುವುದಿಲ್ಲ ಎಂದು ಅಭಿಪ್ರಾಯಪಡಲಾಗಿದ್ದು, ಮೀಸಲಾತಿಗಾಗಿ ಸಂವಿಧಾನದ ತಿದ್ದುಪಡಿ ಸರಿಯಾಗಿದೆ ಎಂದು ಮೀಸಲಾತಿ ಪರ ತೀರ್ಪು ನೀಡಿರುವ ನ್ಯಾಯಾಧೀಶರು ಹೇಳಿದ್ದಾರೆ.

. Ad Widget . . Ad Widget . Ad Widget

ಕೇಂದ್ರ ಸರ್ಕಾರ ಶಿಕ್ಷಣ ಉದ್ಯೋಗಕ್ಕೆ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡ 10 ಮೀಸಲಾತಿ ನೀಡಿದ್ದು ಇದನ್ನು ಪ್ರಶ್ನಿಸಿ ಕೆಲವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ನಾಲ್ವರು ನ್ಯಾಯಮೂರ್ತಿಗಳ ಪರವಾದ ತೀರ್ಪಿನಿಂದಾಗಿ ಉಚ್ಛ ನ್ಯಾಯಾಲಯ ಸರ್ಕಾರದ ತೀರ್ಮಾನವನ್ನು ಎತ್ತಿ ಹಿಡಿದಿದಂತಾಗಿದೆ.

Leave a Comment

Your email address will not be published. Required fields are marked *