ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ|ಮಹಿಳೆಯರು ಸೇರಿ ಹಲವರಿಗೆ ಗಾಯ

ಬೆಂಗಳೂರು: ಕಾಂಗ್ರೆಸ್‌ ವಿಜಯ ಸಂಕಲ್ಪ ಶಿಬಿರ ಕಾರ್ಯಾಗಾರದಲ್ಲಿ ಪಕ್ಷದ ಎರಡು ಬಣಗಳ ನಡುವೆ ಜಗಳ ನಡೆದು ಮಹಿಳೆಯರು ಸೇರಿ 20ಕ್ಕೂ ಅಧಿಕ ಮಂದಿಗೆ ಗಾಯಗೊಂಡಿರುವ ಘಟನೆ ದಾಸರಹಳ್ಳಿಯ ಎನ್​ಟಿಟಿಎಫ್​ ಜಿಮ್‌ಖಾನ ಕ್ಲಬ್​ನಲ್ಲಿ ನಡೆದಿದೆ.

Ad Widget ... ..

ದಾಸರಹಳ್ಳಿ ಉಸ್ತುವಾರಿ ಡಾ. ನಾಗಲಕ್ಷ್ಮಿ ಚೌಧರಿ ನೇತೃತ್ವದಲ್ಲಿ ನಡೆಯುತ್ತಿದ್ದ ಶಿಬಿರಕ್ಕೆ ಕಾಂಗ್ರೆಸ್ ಮುಖಂಡ ಪಿ‌.ಎನ್ ಕೃಷ್ಣ ಮೂರ್ತಿಗೆ ಆಹ್ವಾನ ನೀಡಿರಲಿಲ್ಲ. ಇದರಿಂದ ಕೃಷ್ಣಮೂರ್ತಿ ಬೆಂಬಲಿಗರು ಸಭೆ ನಡೆಯುತ್ತಿದ್ದ ಸ್ಥಳಕ್ಕ ಆಗಮಿಸಿ ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ.

Ad Widget

ಇನ್ನು ಗಲಾಟೆ ವೇಳೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಈ ಬಗ್ಗೆ ಪೀಣ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆಯಲ್ಲಿ ಗಾಯಗೊಂಡ ಕಾಂಗ್ರೆಸ್ ಕಾರ್ಯಕರ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *