ಸಮಗ್ರ ನ್ಯೂಸ್: ಹಿಂದಿ ಕಿರುತೆರೆಯಲ್ಲಿ ಜನಪ್ರಿಯ ನಟ ಮತ್ತು ‘ಕುಸುಮ್’ ಮತ್ತು ‘ಕಸೌತಿ ಜಿಂದಗಿ ಕೇ’ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡ ನಟ ಸಿದ್ಧಾಂತ್ ಸೂರ್ಯವಂಶಿ ಅವರು ಶುಕ್ರವಾರ ಅಕಾಲಿಕ ಮರಣಕ್ಕೆ ಈಡಾಗಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಸಾವನ್ನಪ್ಪಿದ್ಧಾರೆ ಎಂದು ತಿಳಿದುಬಂದಿದೆ.
ಅವರು ಪತ್ನಿ ಮತ್ತು ಅವರ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸಿದ್ಧಾಂತ್ ಅವರು ಇತ್ತೀಚೆಗೆ ತಮ್ಮ ಹೆಸರನ್ನು ಆನಂದ್ ನಿಂದ ಸಿದ್ಧಾಂತ್ ಸೂರ್ಯವಂಶಿ ಎಂದು ಬದಲಾಯಿಸಿಕೊಂಡಿದ್ದರು.






