ಸಮಗ್ರ ನ್ಯೂಸ್: ಬೈಕ್ ಸ್ಕಿಡ್ ಆಗಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನಪ್ಪಿದ ಘಟನೆ ಭಾನುವಾರ ರಾತ್ರಿ ಬೆಳುವಾಯಿಲ್ಲಿ ಸಂಭವಿಸಿದೆ.
ಮೃತ ಯುವಕನ್ನು ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ರಾಣಿಕೇರಿ ನಿವಾಸಿ, ಮೂಲತಃ ಚಿಕ್ಕಮಗಳೂರಿನ ರಾಜೇಶ್ (28) ಎಂದು ಗುರುತಿಸಲಾಗಿದೆ. ಈತ ಬಾಳೆಹೊನ್ನೂರಿನಲ್ಲಿ ಅಜ್ಜಿಯ ಅಂತ್ಯ ಸಂಸ್ಕಾರ ಮುಗಿಸಿ ಮೂಡುಬಿದಿರೆಗೆ ಬೈಕ್ ನಲ್ಲಿ ಮರಳುತ್ತಿದ್ದ ವೇಳೆ ಬೆಳುವಾಯಿಯಲ್ಲಿ ಬೈಕ್ ಸ್ಕಿಡ್ ಆಗಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೆರವುಗೊಳಿಸಿದ ಮರಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ತಲೆಗೆ ಬಲವಾದ ಪೆಟ್ಟು ಹಾಗೂ ರಕ್ತಸ್ರಾವದಿಂದ ರಾಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಜೇಶ್ ಅವರಿಗೆ ಒಂದುವರೆ ವರ್ಷದ ಹಿಂದೆ ಮದುವೆಯಾಗಿದ್ದು, ಐದು ತಿಂಗಳ ಮಗುವಿದೆ.

















