November 2022

ಬಸ್ಕಲ್ ಗ್ರಾ.ಪಂ ಬಸ್ ನಿಲ್ದಾಣ ಒತ್ತುವರಿ:
ಗ್ರಾ.ಪಂ ಮಾಜಿ ಅಧ್ಯಕ್ಷರಿಂದ ಆರೋಪ

ಸಮಗ್ರ ನ್ಯೂಸ್: ಮೂಡಿಗೆರೆ ತಾಲೂಕಿಿ ನಂದಿಪುರ ಗ್ರಾ.ಪಂ ವ್ಯಾಪ್ತಿಯ ಬಸ್ಕಲ್ ಗ್ರಾಮದ ಬಸ್ ನಿಲ್ದಾಣವನ್ನು ಒತ್ತುವರಿ ಮಾಡಲಾಗಿದೆ ಎಂದು ಗ್ರಾ.ಪಂ ಮಾಜಿ ಅಧ್ಯಕ್ಷರಾದ ನಾರಾಯಣ್ ಅವರು ಆರೋಪಿಸಿದ್ದಾರೆ. ಬಸ್ಕಲ್ ಗ್ರಾಮದ ಮಂಜುನಾಥ್ ಎಂಬುವವರು ಸಾರ್ವಜನಿಕರಿಗೆ ಉಪಯೋಗವಾಗಲೆಂದು ಬಸ್ ನಿಲ್ದಾಣಕ್ಕೆ ಜಾಗವನ್ನು ದಾನವಾಗಿ ನೀಡಿದ್ದರು. ಈ ಜಾಗವನ್ನು ದುರುಪಯೋಗ ಮಾಡಿಕೊಂಡು ಬಸ್ ನಿಲ್ದಾಣವನ್ನು ದುರಸ್ಥಿಗಾಗಿ ನೆಲಸಮ ಮಾಡಿದ ಸಂದರ್ಭದಲ್ಲಿ ಬಸ್ ನಿಲ್ದಾಣದ ಜಾಗವನ್ನು ಒತ್ತುವರಿ ಮಾಡಲಾಗಿದೆ‌. ನೂರಾರು ಪ್ರಯಾಣಿಕರಿಗೆ ಅನುಕೂಲವಾಗಿದ್ದ ಬಸ್ ನಿಲ್ದಾಣ್ ಜಾಗವನ್ನು ಒತ್ತುವರಿ ಮಾಡಿದವರ ವಿರುದ್ದ […]

ಬಸ್ಕಲ್ ಗ್ರಾ.ಪಂ ಬಸ್ ನಿಲ್ದಾಣ ಒತ್ತುವರಿ:
ಗ್ರಾ.ಪಂ ಮಾಜಿ ಅಧ್ಯಕ್ಷರಿಂದ ಆರೋಪ
Read More »

ಪುತ್ತೂರು: 8ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಅನಾರೋಗ್ಯದಿಂದಾಗಿ ನಿಧನರಾಗಿರುವ ಘಟನೆ ನ.10ರಂದು ನಡೆದಿದೆ. ಮೃತರನ್ನು ಕೃತಿ ಕೆ.ಎ (13) ಎಂದು ಗುರುತಿಸಲಾಗಿದೆ. ಬನ್ನೂರಿನ ಸೇಡಿಯಾಪು ಕಂಜೂರು ನಿವಾಸಿಗಳಾದ ಆನಂದ ಕುಲಾಲ್‌ ಮತ್ತು ಪದ್ಮಾವತಿ ದಂಪತಿ ಪುತಿ ಕೃತಿ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇನ್ನು ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರಿ ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಗೆ ರಜೆ ಕೊಡಲಾಗಿದೆ.

ಪುತ್ತೂರು: 8ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು Read More »

ಬೆಳಗಾವಿ: ಈಜು ಕಲಿಯಲು ಹೋಗಿ ನೀರಿನಲ್ಲಿ ಮುಳುಗಿ ಬಾಲಕ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾರ್ಥನಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಿ ದೇವಾಲಯದ ಹತ್ತಿರ ಬಾವಿಯಲ್ಲಿ ಬಾಳೇಶ ಕಾಂಬಳೆ ಎಂಬ ಬಾಲಕನು ಈಜು ಕಲಿಯಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ನೀರಿನಲ್ಲಿ ಮುಳುಗಿದ ಬಾಲಕನ ಶವವನ್ನು ಮೇಲೆಕ್ಕೆ ಎತ್ತಲಾಗಿದೆ. ಬಾಲಕನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು. ಅಥಣಿ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಬೆಳಗಾವಿ: ಈಜು ಕಲಿಯಲು ಹೋಗಿ ನೀರಿನಲ್ಲಿ ಮುಳುಗಿ ಬಾಲಕ ಸಾವು Read More »

ಕೊಯಮತ್ತೂರು: ಕಾರು ಸ್ಫೋಟ ಪ್ರಕರಣ|
45 ಸ್ಥಳಗಳಲ್ಲಿ ಎನ್‌ಐಎ ಶೋಧ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಚೆನ್ನೈ, ಮಧುರೈ ಸೇರಿದಂತೆ 45 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಎನ್‌ಐಎ ಅಧಿಕಾರಿಗಳು ಕೊಯಮತ್ತೂರಿನಲ್ಲಿ 20, ಚೆನ್ನೈಯಲ್ಲಿ 12ಕ್ಕೂ ಹೆಚ್ಚು ಮತ್ತು ಮುಧುರೈ, ರಾಮನಾಥಪುರಂ ಸೇರಿದಂತೆ ರಾಜ್ಯದ ಹಲವೆಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ಬಂಧಿಸಿರುವ ಆರು ಆರೋಪಿಗಳಿಗೆ ಸಂಬಂಧಪಟ್ಟ ಸ್ಥಳ ಹಾಗೂ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ನಿಷೇಧಿತ ಸಂಘಟನೆಯ ಸದಸ್ಯರನ್ನು ತನಿಖೆ

ಕೊಯಮತ್ತೂರು: ಕಾರು ಸ್ಫೋಟ ಪ್ರಕರಣ|
45 ಸ್ಥಳಗಳಲ್ಲಿ ಎನ್‌ಐಎ ಶೋಧ
Read More »

ಹುಣಸೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೀರಂಗೂರು ಗ್ರಾಮದಲ್ಲಿ ನಡೆದಿದೆ. ಕೆ ಬಿ ರಾಮು(38) ಮೃತ ರೈತ, ಇವರು ವ್ಯವಸಾಯಕ್ಕೆ ಕೈ ಸಾಲ ಹಾಗೂ ತನ್ನ ಹೆಂಡತಿಯ ಹೆಸರಿನಲ್ಲಿ ಸ್ವ ಸಹಾಯ ಸಂಘಗಳಲ್ಲಿ ಸಾಲ ಪಡೆದಿದ್ದರು. ಅದನ್ನು ತೀರಿಸಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಪ್ರಕರಣ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಹುಣಸೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ Read More »

ಮಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ! ಶಾಲಾ ವಿದ್ಯಾರ್ಥಿಗೆ ಥಳಿಸಿದ ಬುರ್ಖಾಧಾರಿ ಮಹಿಳೆ ಮತ್ತು ಯುವಕ!!

ಸಮಗ್ರ ನ್ಯೂಸ್: ಅಪ್ರಾಪ್ತ ಶಾಲಾ ಬಾಲಕನ ಮೇಲೆ ಬಸ್ ನಿಲ್ದಾಣದಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಬುರ್ಖಾಧಾರಿ ಮಹಿಳೆ ಹಾಗೂ ಯುವಕನೋರ್ವ ಮನಬಂದಂತೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದು ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಮಾಡುತ್ತಿರುವುದೇಕೆ ಎನ್ನುವುದು ಬಯಲಾಗಿಲ್ಲ. ಪೊಲೀಸ್ ಇಲಾಖೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸದಿದ್ದಲ್ಲಿ ನೈತಿಕ ಪೊಲೀಸ್ ಗಿರಿ ನಿಯಂತ್ರಿಸುವುದು ಕಷ್ಟ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳೂರು

ಮಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ! ಶಾಲಾ ವಿದ್ಯಾರ್ಥಿಗೆ ಥಳಿಸಿದ ಬುರ್ಖಾಧಾರಿ ಮಹಿಳೆ ಮತ್ತು ಯುವಕ!! Read More »

ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ| ವಿವಿಧ ಕಾರ್ಯಕ್ರಮಗಳ ಅನಾವರಣ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಲ್ಲಿನ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಕರ್ನಾಟಕದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿಯವರ ಭೇಟಿಯ ಸಂಪೂರ್ಣ ಕಾರ್ಯಕ್ರಮಗಳ ಪಟ್ಟಿ ಕೂಡ ಸಿದ್ಧಗೊಂಡಿದೆ. ನವೆಂಬರ್ 11ರಂದು ಬೆಳಿಗ್ಗೆ 10

ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ| ವಿವಿಧ ಕಾರ್ಯಕ್ರಮಗಳ ಅನಾವರಣ Read More »

ಗುಜರಾತ್ ವಿಧಾನಸಭಾ ಚುನಾವಣೆ| ಬಿಜೆಪಿಯಿಂದ 160 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಗುಜರಾತ್ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಹಾಲಿ ಸಿಎಂ ಭೂಪೇಂದ್ರ ಪಟೇಲ್ ಅವರು 2017ರ ಚುನಾವಣೆಯಲ್ಲಿ ಗೆದ್ದಿದ್ದ ಘಟ್ಲೋಡಿಯಾದಿಂದ ಈ ಬಾರಿಯೂ ಕಣಕ್ಕಿಳಿಯಲಿದ್ದಾರೆ. ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಅವರು ಮಜುರಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಇತ್ತೀಚೆಗೆ ಸೇತುವೆ ದುರಂತ ಸಂಭವಿಸಿದ್ದ ಮೋರ್ಬಿ ವಿಧಾನಸಭಾ ಕ್ಷೇತ್ರದಿಂದ ಕಾಂತಿಲಾಲ್ ಅಮರತಿಯಾ ಅವರನ್ನು ಕಣಕ್ಕಿಳಿಸಲಾಗಿದೆ. ಕಾಂಗ್ರೆಸ್‌ನಿಂದ ಬಂದಿರುವ ಬ್ರಿಜೇಶ್ ಮೆರ್ಜಾ ಅವರು ಈ ಹಿಂದೆ ಇಲ್ಲಿ

ಗುಜರಾತ್ ವಿಧಾನಸಭಾ ಚುನಾವಣೆ| ಬಿಜೆಪಿಯಿಂದ 160 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ Read More »

ಬಂಟ್ವಾಳ: ಉದ್ಯೋಗ ಸಂದರ್ಶನಕ್ಕೆಂದು ತೆರಳಿದ ಯುವತಿ ನಾಪತ್ತೆ

ಸಮಗ್ರ ನ್ಯೂಸ್: ಉದ್ಯೋಗ ಸಂದರ್ಶನಕ್ಕೆಂದು ತೆರಳಿದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಇಡಿದು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಕಂಬಳಬೆಟ್ಟು ನಿವಾಸಿ ದಿವಂಗತ ಆನಂದ ಅವರ ಪುತ್ರಿ ಸುಶ್ಮಿತಾ (21) ನಾಪತ್ತೆಯಾದ ಯುವತಿ. ನ. 8 ಮಂಗಳವಾರ ಬೆಳಿಗ್ಗೆ ಮನೆಯಿಂದ ಹೋದವಳು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಕೆಲಸಕ್ಕೆ ಇಂಟರ್‌ವ್ಯೂ ಲೆಟರ್ ಬಂದಿದ್ದು, ಹಾಗಾಗಿ ನಾನು ಹೋಗಿ ಬರುತ್ತೇನೆ ಎಂದು ಮನೆಯವರಲ್ಲಿ ಹೇಳಿ ತೆರಳಿದ್ದು, ನಂತರ ಮನೆಗೆ ಮರಳಿ ಬಾರದೇ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಆಕೆಯ ಹೆತ್ತವರು

ಬಂಟ್ವಾಳ: ಉದ್ಯೋಗ ಸಂದರ್ಶನಕ್ಕೆಂದು ತೆರಳಿದ ಯುವತಿ ನಾಪತ್ತೆ Read More »

‘ವಲ್ಡ್ ಬುಕ್ ಆಫ್ ರೆಕಾರ್ಡ್’ ಗೆ ಸೇರ್ಪಡೆಯಾದ ನಾಡಪ್ರಭು ಪ್ರತಿಮೆ| ವಿಶ್ವದ ಮೊದಲ ಮತ್ತು ಎತ್ತರದ ಕಂಚಿನ ಪ್ರತಿಮೆ ನ.11ಕ್ಕೆ‌ ಅನಾವರಣ

ಸಮಗ್ರ ನ್ಯೂಸ್: ವಿಶ್ವದ ಮೊದಲ ಮತ್ತು ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬ ದಾಖಲೆಗೆ ಕೆಂಪೇಗೌಡರ ಪ್ರತಿಮೆ ಪಾತ್ರವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ವಿಶ್ವದ ಮೊದಲ ಮತ್ತು ಅತ್ಯಂತ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆಯಾಗಿದೆ. 84 ಕೋಟಿ ರೂ. ವೆಚ್ಚದಲ್ಲಿ 108 ಅಡಿಯ ಬೃಹತ್ ಕಂಚಿನ ಪ್ರತಿಮೆ ನಿರ್ಮಿಸಲಾಗಿದ್ದು, ನವೆಂಬರ್ 11 ರಂದು ಉದ್ಘಾಟನೆಗೊಳ್ಳಲಿದೆ.

‘ವಲ್ಡ್ ಬುಕ್ ಆಫ್ ರೆಕಾರ್ಡ್’ ಗೆ ಸೇರ್ಪಡೆಯಾದ ನಾಡಪ್ರಭು ಪ್ರತಿಮೆ| ವಿಶ್ವದ ಮೊದಲ ಮತ್ತು ಎತ್ತರದ ಕಂಚಿನ ಪ್ರತಿಮೆ ನ.11ಕ್ಕೆ‌ ಅನಾವರಣ Read More »