ಕೊಟ್ಟಿಗೆಹಾರ: ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ಸಮಗ್ರ ನ್ಯೂಸ್: ಅಪಘಾತದಲ್ಲಿ ಸಾವನ್ನಪ್ಪಿದ ಪುತ್ರನ ಅಂಗಾಂಗವನ್ನು ಪೋಷಕರು ದಾನ ಮಾಡಿ ಸಾರ್ಥಕತೆ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿಯಲ್ಲಿ ನಡೆದಿದೆ.

Ad Widget ... ..

ಧನ್ಯ ಕುಮಾರ್(37) ಮೃತರು. ಇವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕ್ಯಾಂಟರ್ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡು
ಎಷ್ಟೇ ಪ್ರಯತ್ನಪಟ್ಟರೂ ಬದುಕಿಸಲು ಸಾಧ್ಯವಾಗಲ್ಲ ಎಂದು ವೈದ್ಯರು ತಿಳಿಸಿದ್ದರು.

Ad Widget

ಆದರೆ ಧನ್ಯಕುಮಾರ್ ದೇಹದ ಇತರೆ ಭಾಗಗಳು ಸುರಕ್ಷಿತವಾಗಿವೆ ವೈದ್ಯರು ಹೇಳಿದ್ದರು. ಈ ಕಾರಣ ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಮುಂದಾಗಿದ್ದಾರೆ.

ಸದ್ಯ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೀತಿರೋ ಅಂಗಾಂಗ ದಾನ ಪ್ರಕ್ರಿಯೆಯಲ್ಲಿ ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳನ್ನು ದಾನ ಮಾಡಿದ್ದಾರೆ.

Leave a Comment

Your email address will not be published. Required fields are marked *