ದಾಖಲೆ ಬರೆದ ಮಾಜಿ ಮುಖ್ಯಮಂತ್ರಿ ಎಚ್.ಡಿ‌ ಕುಮಾರಸ್ವಾಮಿ| ಬೃಹತ್ ಹಾರಗಳು ಏಷ್ಯಾ ಮತ್ತು ಇಂಡಿಯನ್ ಬುಕ್ ಆಪ್ ರೆಕಾರ್ಡ್ ಗೆ ದಾಖಲೆಯತ್ತ…!

ಸಮಗ್ರ ನ್ಯೂಸ್: ಕಳೆದ ನವೆಂಬರ್ 18 ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ.

Ad Widget ... ..

ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ‘ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ಹಾಗೂ ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ‘ ದಾಖಲೆಗೆ ಪಾತ್ರರಾಗಿದ್ದಾರೆ.

Ad Widget

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಇಡೀ ದಿನ ಯಾತ್ರೆ ನಡೆಸಿ ಕಳೆದ ರಾತ್ರಿ ಕ್ಷೇತ್ರದ ಯಲ್ಲಾಪುರದಲ್ಲಿ ಮಾಜಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಹೂಡಿದ್ದರು. ಆ ಗ್ರಾಮಕ್ಕೆ ಆಗಮಿಸಿದ ‘ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ತೀರ್ಪುಗಾರರಾದ ಮೋಹಿತ್ ಕುಮಾರ್ ವತ್ಸ ಹಾಗೂ ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ‘ ತೀರ್ಪುಗಾರರಾದ ಆರ್.ಹರೀಶ್ ಅವರು ಮಾಜಿ ಮುಖ್ಯಮಂತ್ರಿ ಅವರಿಗೆ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್ ಗಳನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ತೀರ್ಪುಗಾರರಾದ ಮೋಹಿತ್ ಕುಮಾರ್ ಅವರು, ಇದೊಂದು ವಿಶೇಷವಾದ ದಾಖಲೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಾಜಕಾರಣಿಯೊಬ್ಬರು ಗೌರವಕ್ಕೆ ಪಾತ್ರರಾಗಿರುವುದು ಹಾಗೂ ರೈತರೇ ಬೇಳೆಗಳನ್ನೇ ಬೃಹತ್ ಹಾರಗಳನ್ನಾಗಿ ತಯಾರಿಸಿ ಅವರಿಗೆ ಹಾಕಿ ಸ್ವಾಗತಿಸುತ್ತಿರುವುದು ಸೋಜಿಗ, ಮೊದಲ ದಾಖಲೆ ಎಂದರು.

ಈ ವೇಳೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿಯವರು, ನಾನು ರಥಯಾತ್ರೆ ಮಾಡುತ್ತಿರುವ ಎಲ್ಲಾ ಕಡೆ ಜನರು ನನ್ನನ್ನು ಪ್ರೀತಿಯಿಂದ ಸ್ವಾಗತ ಮಾಡುತ್ತಿದ್ದಾರೆ. ದೊಡ್ಡ ದೊಡ್ಡ ಹಾರಗಳನ್ನು ಹಾಕಿ ಸ್ವಾಗತ ಮಾಡುತ್ತಿದ್ದಾರೆ. ಆ ಜನರ ಪ್ರೀತಿಯಿಂದ ಮಾತ್ರ ಈ ದಾಖಲೆ ನಿರ್ಮಾಣವಾಗಲು ಸಾಧ್ಯವಾಗಿದೆ. ಹೀಗಾಗಿ ಈ ಎಲ್ಲಾ ದಾಖಲೆಯ ಹೆಗ್ಗಳಿಕೆ ರೈತರಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಸಲ್ಲಬೇಕು ಎಂದರು.

Leave a Comment

Your email address will not be published. Required fields are marked *