ಜಾರ್ಖಂಡ್: ಬಹುಮಹಡಿ ಕಟ್ಟಡಕ್ಕೆ ಬೆಂಕಿ; 14 ಮಂದಿ‌ ಸಜೀವ ದಹನ

ಸಮಗ್ರ ನ್ಯೂಸ್: ಜಾರ್ಖಂಡ್ ನ ಧನ್ಬಾದ್ ನ ಬಹುಮಹಡಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 14 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಧನ್ಬಾದ್ ನ ಆಶೀರ್ವಾದ್ ಟವರ್ ಜೋರಫಟಕ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು, ಸುಮಾರು 40 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

. Ad Widget . Ad Widget . Ad Widget .

ಇತ್ತೀಚಿನ ಮಾಹಿತಿಯ ಪ್ರಕಾರ ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದ್ದು 11 ಮಂದಿ ಮಂದಿ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಅಗ್ನಿ ಅವಘಡದಿಂದ ಉಂಟಾಗಿರುವ ನಷ್ಟದ ಪ್ರಮಾಣ ಇನ್ನಷ್ಟೇ ತಿಳಿಯಬೇಕಿದೆ ಎಂದು ಮುಖ್ಯ ಕಾರ್ಯದರ್ಶಿ ಸುಖ್ ದೇವ್ ಸಿಂಗ್ ಹೇಳಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಮೃತಪಟ್ಟವರ ಪೈಕಿ 10 ಮಂದಿ ಹಾಗೂ ಮೂವರು ಮಕ್ಕಳು ಇದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಿಎಂ ಹೇಮಂತ್ ಸೊರೇನ್ ಈ ಬಗ್ಗೆ ಮಾತನಾಡಿದ್ದು, ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾ ಆಡಳಿತ ಕಾರ್ಯನಿರ್ವಹಿಸುತ್ತಿದೆ, ಗಾಯಾಳುಗಳನ್ನು ರಕ್ಷಿಸಲಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಗ್ನಿ ಅವಘಡದಿಂದ ಮಂದಿ ಸಾವನ್ನಪ್ಪಿರುವುದು ಹೃದಯವಿದ್ರಾವಕ ಘಟನೆಯಾಗಿದ್ದು, ಸಮರೋಪಾದಿಯಲ್ಲಿ ಜಿಲ್ಲಾಡಾಳಿತ ಕಾರ್ಯನಿರ್ವಹಿಸುತ್ತಿದೆ. ನಾನು ಖುದ್ದಾಗಿ ಪರಿಶೀಲಿಸುತ್ತಿದ್ದೇನೆ ಎಂದು ಸೊರೇನ್ ಟ್ವೀಟ್ ಮಾಡಿದ್ದಾರೆ.

Leave a Comment

Your email address will not be published. Required fields are marked *