ಹವಾಮಾನ ವರದಿ| ಇಂದಿನಿಂದ ಐದು ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಸಿಲಿನಿಂದ ರಾಜ್ಯದ ಜನತೆ ತತ್ತರಿಸಿರುವ ಕರ್ನಾಟಕದ ಹಲವೆಡೆ, ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಪರಿಣಾಮ ಮಳೆ ಆಗಲಿದೆ ಎನ್ನಲಾಗಿದ್ದು, ಮಾರ್ಚ್ 14 ರಿಂದ 18 ರ ವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ, ಮಾರ್ಚ್ 16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ತಿಳಿಸಲಾಗಿದೆ.

Ad Widget

ಹಾಗೆಯೇ ಮಾರ್ಚ್ 16 ರಿಂದ ಮಾರ್ಚ್ 18ರ ವರೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಬಳ್ಳಾರಿ, ಗದಗ, ಧಾರವಾಡ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಮಾರ್ಚ್ 17 ರಿಂದ 18 ರ ವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

Leave a Comment

Your email address will not be published. Required fields are marked *