ಸುಳ್ಯ: ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಗೆ| ಓರ್ವನ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಕೆಲಸ‌ ಮಾಡುತ್ತಿದ್ದ ವೇಳೆ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿದ ಘಟನೆ ಸುಳ್ಯ ನಗರದ ಗಾಂಧಿನಗರದಲ್ಲಿ ನಡೆದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

. Ad Widget . Ad Widget

ಶನಿವಾರ ನಗರದ ಗಾಂಧಿನಗರ ಆಲೆಟ್ಟಿ ರಸ್ತೆ ಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾಗ ಗುಡ್ಡ ಕುಸಿದು ಕಾರ್ಮಿಕರ ಮೇಲೆ ಬಿದ್ದಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಅಬೂಬಕ್ಕರ್ ಎಂಬವರ ಮನೆಯ ಹಿಂದೆ ದೊಡ್ಡ ಗುಡ್ಡವಿದ್ದು, ಇದರ ಸಮೀಪ ಪಿಲ್ಲರ್‌ ನಿರ್ಮಿಸುವ ಕಾಮಗಾರಿ ನಡೆಯುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿತೆಂದು ತಿಳಿದುಬಂದಿದೆ.

. Ad Widget . . Ad Widget . Ad Widget

ಸದ್ಯ ಮಣ್ಣಿನಡಿ‌ ಸಿಲುಕಿರುವ ಮತ್ತಿಬ್ಬರು ಕಾರ್ಮಿಕರ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಜಿಸಿಬಿಯಿಂದ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಮಣ್ಣಿನಡಿ ಸಿಲುಕಿರುವವರನ್ನು ಉತ್ತರ ಭಾರತ ಮೂಲದ ಕಾರ್ಮಿಕರೆಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿದ್ದಾರೆ.

Leave a Comment

Your email address will not be published. Required fields are marked *