ತಿರುಪತಿಯಲ್ಲಿ‌ ಕಂಪಿಸಿದ ಭೂದೇವಿ| ಆತಂಕದಲ್ಲಿ ಭಕ್ತಾದಿಗಳು

ಸಮಗ್ರ ನ್ಯೂಸ್: ಕಳೆದ ತಿಂಗಳಷ್ಟೇ ಆಂದ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಲಘು ಭೂಕಂಪ ಸಂಭವಿಸಿದ್ದು, ಭೂಕಂಪನದಿಂದ ಎನ್ ಟಿಆರ್ ಮತ್ತು ಪಲ್ನಾಡು ಜಿಲ್ಲೆಯ ನಿವಾಸಿಗಳು ಭಯದಿಂದ ತತ್ತರಿಸಿದ್ದಾರೆ. ಇತ್ತೀಚೆಗಷ್ಟೇ ತಿರುಪತಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಭೀತಿಯಿಂದ ಜನರು ಮನೆ ಬಿಟ್ಟು ಹೊರಗೆ ಓಡಿ ಬಂದಿದ್ದರು.

. Ad Widget . Ad Widget . Ad Widget .

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ದೋರವರಿಸತ್ರ ಸೇರಿ ಸುತ್ತಮುತ್ತಲ ಕೆಲ ಗ್ರಾಮಗಳಲ್ಲಿ ಏಕಾಏಕಿ ಭೂಮಿ ಕಂಪಿಸಿದ್ದು, ಮನೆಯಲ್ಲಿದ್ದ ಸಾಮಾನುಗಳು ಕೆಳಗೆ ಬಿದ್ದಿವೆ. ಇನ್ನು ಜನರು ಭಯಭೀತರಾಗಿ ತತ್ತರಿಸಿದ್ದು, ಜನರು ಮನೆಯಿಂದ ಹೊರಬಂದು ಬೀದಿಗೆ ಓಡಿದರು. ರಿಕ್ಟರ್ ಮಾಪಕದಲ್ಲಿ ಈ ಭೂಕಂಪದ ತೀವ್ರತೆ ಇನ್ನೂ ತಿಳಿದುಬಂದಿಲ್ಲ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಆದರೆ, ಇದುವರೆಗೂ ಯಾವುದೇ ಪ್ರಾಣಹಾನಿ, ಆಸ್ತಿ-ಪಾಸ್ತಿ ನಷ್ಟವಾಗಿಲ್ಲದ ಕಾರಣ ಅಧಿಕಾರಿಗಳು ನಿರಾಳರಾಗಿದ್ದಾರೆ. ಫೆಬ್ರವರಿಯಲ್ಲಿ, ಭೂಕಂಪವು ಟರ್ಕಿ ಮತ್ತು ಸಿರಿಯಾದಲ್ಲಿ ಪ್ರಳಯವನ್ನು ಸೃಷ್ಟಿಸಿತು.

Leave a Comment

Your email address will not be published. Required fields are marked *