ರಾಜ್ಯದ ಜನತೆ ಜಗದೀಶ್ ಶೆಟ್ಟರ್ ರನ್ನು ಕ್ಷಮಿಸುವುದಿಲ್ಲ: ಬಿ.ಎಸ್.ವೈ

ಸಮಗ್ರ ನ್ಯೂಸ್:‘ಜಗದೀಶ್ ಶೆಟ್ಟರ್ ಅವರು ಕೈಗೊಂಡ ನಿರ್ಧಾರ ಹಾಗೂ ನೀಡಿರುವ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

. Ad Widget . Ad Widget . Ad Widget .

ಜಗದೀಶ್ ಶೆಟ್ಟರ್ ರಾಜೀನಾಮೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಆದರೆ, ಇಂದು ‘ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಲು ಕಾರಣವೇನು?, ರಾಜ್ಯದ ಜನತೆ ಶೆಟ್ಟರ್ ಅವರನ್ನು ಕ್ಷಮಿಸುವುದಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

‘ಧರ್ಮೇಂದ್ರ ಪ್ರಧಾನ್ ಅವರು ಜಗದೀಶ್ ಶೆಟ್ಟರ್ ಕುಟುಂಬಕ್ಕೆ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಇದಕ್ಕೆ ಶೆಟ್ಟರ್ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಒಂದು ವೇಳೆ ಅವರು ಬಿಜೆಪಿಗೆ ಮರಳಿ ಬಂದರೆ ಸ್ವಾಗತಿಸುತ್ತೇವೆ’ ಎಂದು ಯಡಿಯೂರಪ್ಪ ಹೇಳಿದರು.

http://pic.twitter.com/x9Dw9LNY0v

ಬಿಜೆಪಿ ಟಿಕೆಟ್ ವಂಚಿತ ಅತೃಪ್ತ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Leave a Comment

Your email address will not be published. Required fields are marked *