ಸುಬ್ರಹ್ಮಣ್ಯ: ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು

ಸಮಗ್ರ ನ್ಯೂಸ್: ಅಸ್ವಸ್ಥಗೊಂಡು ತಿರುಗಾಡುತ್ತಿದ್ದ ಕಾಡಾನೆಯೊಂದು ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೊಂಬಾರು ವ್ಯಾಪ್ತಿಯಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ‌‌.

Ad Widget ... ..

ಕಾಡಾನೆಯು ಸಂಪೂರ್ಣ ನಿತ್ರಾಣಗೊಂಡ ಸ್ಥಿತಿಯಲ್ಲಿ ಕೊಂಬಾರು ಬಳಿ ಹಳ್ಳವೊಂದರಲ್ಲಿ ಪತ್ತೆಯಾಗಿತ್ತು. ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಚೇರು ಭಾಗದಲ್ಲಿ ಈ ಕಾಡಾನೆ ಸಂಚಾರ ಮಾಡಿ ಬಳಿಕ ಎರ್ಮಾಯಿಲ್ ಎಂಬಲ್ಲಿ ಮತ್ತೆ ರಸ್ತೆಯಲ್ಲೇ ನಡೆದಾಡಲು ಕಷ್ಟಪಡುವ ಸ್ಥಳೀಯರಿಗೆ ಕಾಣಸಿತ್ತು.

Ad Widget

ಅರಣ್ಯ ಅಧಿಕಾರಿಗಳ ತಂಡ ಮಾಹಿತಿ ಮಾಹಿತಿ ಲಭ್ಯವಾದ ತಕ್ಷಣವೇ ನುರಿತ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲನೆಗೆ ಮುಂದಾಗಿದ್ದರು. ವೈದ್ಯಕೀಯ ತಜ್ಞರು ಹೇಳುವ ಪ್ರಕಾರ ವಯೋ ಸಹಜ ತೊಂದರೆಗಳಿಂದ ಬಳಲುತ್ತಿರುವುದಲ್ಲದೆ ಆನೆಯ ಹಲ್ಲುಗಳು ಉದುರಿರುವ ಶಂಕೆ ವ್ಯಕ್ತಪಡಿಸಿದ್ದರು.

Leave a Comment

Your email address will not be published. Required fields are marked *