ರಾಮನ ಬಳಿಕ ರಾಮಭಂಟನನ್ನೂ ಬಂಧಿಸಿಡುವ ಹುನ್ನಾರ| ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ಗುಡುಗಿದ ಪ್ರಧಾನಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಈ ಹಿಂದೆ ಶ್ರೀರಾಮಚಂದ್ರನ ಬಂಧಿಸಿಟ್ಟಿತು. ಇದೀಗ ಹುನುಮಾನ್ ಜನ್ಮಸ್ಥಳದಲ್ಲೇ ಭಜರಂಗಬಲಿಯನ್ನು ಬಂಧಿಸಿಡಲು ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

. Ad Widget . Ad Widget . Ad Widget .

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಭಜರಂಗದಳ ನಿಷೇಧಿಸುವುದಾಗಿ ಘೋಷಿಸಿದೆ. ಇದರ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಶ್ರೀರಾಮಚಂದ್ರ ಹಾಗೂ ಹನುಮಾನ್ ನಮಗೆ ಪೂಜ್ಯ ಎಂದಿದ್ದಾರೆ. ವಿಜಯನಗರದಲ್ಲಿ ಆಯೋಜಿಸಿದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮೋದಿ, ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಹನುಮಾನ ಜನ್ಮಸ್ಥಾನಕ್ಕೆ ಬಂದಿದ್ದೇನೆ. ನಾನು ಹನುಮಂತನಿಗೆ ಶತ ಪ್ರಣಾಮ ಮಾಡುತ್ತಿದ್ದೇನೆ. ಆದರೆ ಇದೇ ಸಮಯದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗಬಲಿ ಅಂದರೆ ಹನುಮಂತನನ್ನ ಬೀಗ ಹಾಕಿ ಬಂಧಿಸಲು ಹೊರಟಿದ್ದಾರೆ. ಈ ಹಿಂದೆ ಕಾಂಗ್ರೆಸ್ ಶ್ರೀರಾಮಚಂದ್ರನನ್ನು ಬಂಧಿಸಿಟ್ಟಿದ್ದರು. ಅವರಿಗೆ ಈ ಹಿಂದೆ ಶ್ರೀರಾಮ ಕಂಡರೂ ಆಗುತ್ತಿಲ್ಲ. ಇದೀಗ ಹನುಮಂತನ ಕಂಡರೂ ಆಗುತ್ತಿಲ್ಲ. ನಮಗೆ ಶ್ರೀರಾಮ ಚಂದ್ರ ಹಾಗೂ ಹನುಮಂತ ಪೂಜ್ಯ. ಇಡೀ ದೇಶದಲ್ಲಿ ಕರ್ನಾಟಕವನ್ನು ನಂಬರ್ 1 ರಾಜ್ಯವನ್ನಾಗಿ ಮಾಡಲು ನಾವು ಸಂಕಲ್ಪ ಬದ್ಧರಾಗಿದ್ದೇವೆ. ನಮ್ಮ ಈ ಸಂಕಲ್ಪಕ್ಕೆ ಹನುಮಂತನ ಆಶೀರ್ವಾದ ಕೇಳಲು ನಾನು ಇಲ್ಲಿಗೆ ಬಂದಿದ್ದೇನೆ ಎಂದು ಮೋದಿ ಹೇಳಿದ್ದಾರೆ.

Leave a Comment

Your email address will not be published. Required fields are marked *