ಸಮಗ್ರ ನ್ಯೂಸ್: ಬೈಕ್ ಮೇಲೆ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಬಳಿ ಸಂಭವಿಸಿದೆ.

ವೇಣುಗೋಪಾಲ್ (45) ಮೃತ ದುರ್ದೈವಿ. ಮೂಲತಃ ಉತ್ತರ ಕರ್ನಾಟಕದವರಾದ ಇವರು ಚಿಕ್ಕಹಳ್ಳ ಗ್ರಾಮದಲ್ಲಿ ಹೋಂ ಸ್ಟೇ ಜೊತೆಗೆ ಮೂಡಿಗೆರೆಯಲ್ಲಿ ಬಳೆ ಅಂಗಡಿ ನಡೆಸುತ್ತಿದ್ದರು. ಈ ಕಾರಣ ಇವರು ತನ್ನ ಹೋಂ ಸ್ಟೇಯಿಂದ ಮನೆಗೆ ತೆರಳುತ್ತಿದ್ದಾಗ ಹೋಂ ಸ್ಟೇಯ ತುಸು ದೂರದಲ್ಲಿ ಒಂದರ ಹಿಂದೆ ಒಂದರಂತೆ ಒಂದೇ ಕಾಲಕ್ಕೆ ಮೂರು ಮರಗಳು ಬಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಇನ್ನೂ ಇದು 2023ರ ಮಳೆಗೆ ಕಾಫಿನಾಡಲ್ಲಿ ಮೊದಲ ಬಲಿಯಾಗಿದೆ.
ವರದಿ: ಸಂತೋಷ್ ಅತ್ತಿಗೆರೆ