ಸಮಗ್ರ ನ್ಯೂಸ್ : “ಕೂದಲು ತುಂಬಾ ಹೋಗಿದೆ ಕಾಡಲ್ಲಿ ಒಂದು ಸೊಪ್ಪು ಸಿಕ್ತದೆ.” ಈ ಡೈಲಾಗ್ ಕೇಳಿದರೆ ನಮಗೆ ನೆನಪಾಗುವುದು ಕಾಂತಾರ ಸಿನಿಮಾದಲ್ಲಿ ಅಭಿನಯಿಸಿದ ದೀಪಕ್ ರೈ ಪಣಜಿ ಅವರು. ವೀಕ್ಷಕರನ್ನು ನಕ್ಕು ನಗಿಸಿದ ದೀಪಕ್ ರೈ ಪಣಾಜೆ ಯವರು ಜನಿಸಿದ್ದು ಪುತ್ತೂರು ತಾಲೂಕಿನ ಪಣಾಜೆ ಗ್ರಾಮದ
ಗುವಲ್ ಗದ್ದೆ ಯಲ್ಲಿ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಣಜೆಯಲ್ಲಿ ಮುಗಿಸಿ ಪ್ರೌಢ ಶಿಕ್ಷಣವನ್ನು ಸುಭೋದ ಪ್ರೌಢಶಾಲೆ, ಪಣಜೆಯಲ್ಲಿ ಮುಗಿಸಿದರು. ವಿವೇಕಾನಂದ ಕಾಲೇಜಿನಲ್ಲಿ ತಮ್ಮ ಪಿಯು ಪದವಿಯನ್ನು ಪಡೆದರು. ನೃತ್ಯ ಶಿಕ್ಷಣವನ್ನು ಚಾಮರಾಜ ಡಾನ್ಸ್ ಸ್ಕೂಲ್ ಬೆಂಗಳೂರಿನಲ್ಲಿ ಪಡೆದುಕೊಂಡರು.

ಪ್ರಾರಂಭದಲ್ಲಿ ಇವರು ಕೆನರಾ ಟೂಲ್ ಫಾರ್ಮ್ಸ್ & ಮೈಕ್ರಾನ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಏಳು ವರ್ಷ ಸೇವೆ ಸಲ್ಲಿಸಿದ್ದಾರೆ. ಇವರ ಮೊದಲ ನಾಟಕ ಮಚ್ಚೆಂದ್ರನಾಥ್ ಪಾಂಡೇಶ್ವರ್ ನಿರ್ದೇಶನದ ಅಜ್ಜಿನ ಗೌಜಿ ಯಲ್ಲಿ ನಟಿಸಿದ್ದಾರೆ. ಬಸ್ ಕಂಡಕ್ಟರ್, ಮುದುಕನ ಮದುವೆ, ರಕ್ತ ಕಣ್ಣೀರು, ಆಪ್ತಮಿತ್ರ, ಪೊಲೀಸನ ಮಗಳು, ಕಳ್ಳ ಗುರು ಕಪಟ ಶಿಷ್ಯ, ಗೌಡ ಮೆಚ್ಚಿದ ಹುಡುಗಿ, ಎಚ್ಚರ ತಂಗಿ ಎಚ್ಚರ, ಮನೆಗೆ ಬಂದ ಮಹಾಲಕ್ಷ್ಮಿ, ತಾಳಿ ಕಟ್ಟಿದರು ಗಂಡನಲ್ಲ ಮುಂತಾದ ನಾಟಕದಲ್ಲಿ ನಡೆಸಿದ್ದಾರೆ.
ಇವರ ಮೊದಲ ಸಿನಿಮಾ ರಾಮ್ ಶೆಟ್ಟಿ ನಿರ್ದೇಶನದ ಸೂಪರ್ ಮರ್ಮಯ. ಒಂದು ಮೊಟ್ಟೆಯ ಕಥೆ, ಭೂಮಿಕಾ, ಇದು ಎಂಥಾ ಲೋಕವಯ್ಯ, ಜೀವನ ಯಜ್ಞ, ಗರುಡಗಮನ ವೃಷಭ ವಾಹನ, ಹರಿಕಥೆ ಅಲ್ಲ ಗಿರಿಕಥೆ, ಕಾಂತಾರ ಮುಂತಾದ ಸಿನಿಮಾದಲ್ಲಿ ನಟಿಸಿದ್ದಾರೆ. ಕನ್ನಡ ಸಿನಿಮಾ ಮಾತ್ರವಲ್ಲದೆ ತುಳು ಸಿನಿಮಾದಲ್ಲೂ ಇವರು ಹಾಸ್ಯ ನಟನಾಗಿ ನಟಿಸಿದ್ದಾರೆ. ಕೊಂಕಣಿ ಚಿತ್ರ, ಅರೆಬಾಶ ಚಿತ್ರ, ನಲ್ಲೂ ಇವರು ನಟಿಸಿದ್ದಾರೆ. ಇದೀಗ ಇವರು ಬೆರ ಸಿನಿಮಾದಲ್ಲಿ ಇವರು ಕಾಣಿಸಿಕೊಳ್ಳಲಿದ್ದಾರೆ.