ಬೆಳ್ತಂಗಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ

ಸಮಗ್ರನ್ಯೂಸ್: ಇಲ್ಲಿಯ ಚಾರ್ಮಾಡಿಯ ಕೃಷ್ಣನಗರ ಪಾಂಡಿಕಟ್ಟೆಯಲ್ಲಿ ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವರು ಗಂಭೀರ ಗಾಯಗೊಂಡ ಘಟನೆ ಮೇ.26 ರಂದು ಮಧ್ಯಾಹ್ನ ನಡೆದಿದೆ.
ಸಾಗರ ಕಡೆಯಿಂದ ಕುಟುಂಬವೊಂದು ಕಾರಿನಲ್ಲಿ ಬರುತ್ತಿರುವ ಸಮಯ ಕಾರು ಬ್ರೇಕ್ ಫೈಲ್ ಆಗಿ ಘಾಟಿಯ ಧರೆಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರಿನಲ್ಲಿದ್ದ ವಿನೋದ್ ಸಾಗರ ಎಂಬುವವರು ಗಂಭೀರ ಗಾಯಗೊಂಡಿದ್ದು, ಕಾರಿನಲ್ಲಿದ್ದ ನಾಲ್ಕು ಮಂದಿ ಮಹಿಳೆಯರಿಗೂ ಗಾಯಗಳಾಗಿದೆ.

. Ad Widget . Ad Widget

ಕಕ್ಕಿಂಜೆ ಕೃಷ್ಣ ಆಸ್ಪತ್ರೆಗೆ ತಕ್ಷಣ ದಾಖಲಿಸಿದ್ದು, ವಿನೋದ್ ಅವರನ್ನು ಉಜಿರೆಯ ಖಾಸಗಿ ಅಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಎ.ಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದು, ಹೆಚ್ಚಿನ ವಿವರ ಇನ್ನಷ್ಟೇ ಲಭಿಸಬೇಕಾಗಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *