ಸಮಗ್ರ ನ್ಯೂಸ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕೆ.ಎ ಹಿದಾಯತ್ತುಲ್ಲ ನೇಮಕರಾಗಿದ್ದಾರೆ. ಹಿರಿಯ ಕೆಎಎಸ್ ಅಧಿಕಾರಿಯಾಗಿರುವ ಹಿದಾಯುತ್ತುಲ್ಲಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಇವರು ಈ ಮೊದಲು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಕಂದಾಯ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
ಸದಾ ಜನರ ಪರವಾಗಿ ಇರುವ, ಪ್ರಾಮಾಣಿಕ ಕೆಎಎಸ್ ಅಧಿಕಾರಿ ಹಿದಾಯತ್ತುಲ್ಲ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿಯಾಗಿದ್ದು, ಸರಕಾರದ ಹಲವು ಮಹತ್ತರ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. 2013 ರ ಸಿದ್ದರಾಮಯ್ಯ ಸರಕಾರದಲ್ಲೂ ಆರೋಗ್ಯ ಸಚಿವಾಲಯದಲ್ಲಿ ಕೆಲಸ ಮಾಡಿದ್ದರು.
ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಪರ ಕಾರ್ಯದರ್ಶಿಯಾಗಿ ನೇಮಕವಾಗಿತ್ತು. ಆರೋಗ್ಯ ಇಲಾಖೆಯಲ್ಲಿ ಅನುಭವಿಯಾಗಿರುವ ಹಿದಾಯುತ್ತುಲ್ಲಾ ಅವರನ್ನು ಆರೋಗ್ಯ ಇಲಾಖೆಗೆ ನೇಮಿಸಬೇಕು ಎಂಬ ಬೇಡಿಕೆಯ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಆಪ್ತ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.







