Ad Widget .

ಸುಳ್ಯ:ಜು.19 ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ | ಆಮಂತ್ರಣ ಪತ್ರಿಕೆ ಬಿಡುಗಡೆ ‌

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ 25 ವರ್ಷ ಪೂರ್ಣಗೊಳಿಸಿದ ನೆನಪಿಗಾಗಿ ಜು.19 ರಂದು ನಡೆಯಲಿರುವ ಬೆಳ್ಳಿ ಹಬ್ಬ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ‌ಸಮಾರಂಭ ಜೂ.21 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ‌ ನಡೆಯಿತು.

Ad Widget . Ad Widget . Ad Widget . Ad Widget .

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು. ಆ ಬಳಿಕ ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ನಡೆಯಿತು.

Ad Widget . Ad Widget .

ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮತ್ತು ಬೆಳ್ಳಿ ಹಬ್ಬ‌ ಸಮಿತಿಯ ಪ್ರಧಾನ‌ ಕಾರ್ಯದರ್ಶಿ ದುರ್ಗಾಕುಮಾರ್ ನಾಯರ್ ಕೆರೆ ಪ್ರಾಸ್ತಾವಿಕವಾಗಿ ‌ಮಾತನಾಡಿದರು.

ಈ ಸಂದರ್ಭದಲ್ಲಿ ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ ‌ಗಂಗಾಧರ ಮಟ್ಟಿ, ಜಿಲ್ಲಾ ಪತ್ರಕರ್ತ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಯಾನಂದ ಕೊರತ್ತೋಡಿ ಸ್ವಾಗತಿಸಿ, ತಾಲೂಕು ಪತ್ರಕರ್ತ ಸಂಘದ ಕೋಶಾಧಿಕಾರಿ ದಯಾನಂದ ಕಲ್ನಾರ್ ವಂದಿಸಿ, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *