ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ|ಕಾಣಿಯೂರಿನಿಂದ ಶ್ರೀ ವಿಷ್ಣುಮೂರ್ತಿ ದೈವದ ಬೆಳ್ಳಿಯ ಮೊಗ ಹೊರೆಕಾಣಿಕೆ ಮೆರವಣಿಗೆ
ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವ, ಶ್ರೀ ಕಾಳಿಕಾಂಬ ದೇವಿ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜೂ.1ರಂದು ಸಂಭ್ರಮದ ಚಾಲನೆ ನೀಡಲಾಯಿತು. ಶ್ರೀ ಕ್ಷೇತ್ರದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಜೂ.11ರಿಂದ ಜೂ13ರವರೆಗೆ ನಡೆಯಲಿದ್ದು, ಜೂ.11ರಂದು ಸಂಜೆ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಿಂದ ಪುಣ್ಚತ್ತಾರು ಕರಿಮಜಲು ದೈವಸ್ಥಾನದವರೆಗೆ ಶ್ರೀ ವಿಷ್ಣುಮೂರ್ತಿ ದೈವದ […]










