June 2023

ಏಕಾಏಕಿ ವಿದ್ಯುತ್ ಬಿಲ್ ಡಬ್ಬಲ್| ರಾಜ್ಯ ಸರ್ಕಾರದ ವಿರುದ್ದ ಜನಾಕ್ರೋಶ

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದ ಬಳಿಕ, ವಿದ್ಯುತ್ ದರದಲ್ಲಿ ಏರಿಕೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ವಿದ್ಯುತ್‌ ದರ ಹೆಚ್ಚಳ ಮಾಡಿರುವುದನ್ನು ಸಾರ್ವಜನಿಕರು ಖಂಡಿಸುತ್ತಿದ್ದಾರೆ. ‘ಪ್ರತಿ ತಿಂಗಳು ನಮ್ಮ ಮನೆಗೆ ತಿಂಗಳಿಗೆ 300 ರೂ.ಒಳಗೆ ಕರೆಂಟ್ ಬಿಲ್ ಬರುತ್ತಿತ್ತು. ಈ ತಿಂಗಳು 600 ರೂಪಾಯಿಯಷ್ಟು ಬಿಲ್ ಬಂದಿದೆ’ ಎಂದು ಜನರು ಆರೋಪಿಸುತ್ತಿದ್ದಾರೆ. ಸರ್ಕಾರ ಒಂದೆಡೆ ಉಚಿತ ವಿದ್ಯುತ್‌ ಎಂದು ಘೋಷಣೆ ಮಾಡಿದ್ದು, ಇನ್ನೊಂದೆಡೆ ದರ ಹೆಚ್ಚಿಸುತ್ತದೆ ಎಂದು […]

ಏಕಾಏಕಿ ವಿದ್ಯುತ್ ಬಿಲ್ ಡಬ್ಬಲ್| ರಾಜ್ಯ ಸರ್ಕಾರದ ವಿರುದ್ದ ಜನಾಕ್ರೋಶ Read More »

ಬಿಫೋರ್ ಲೀವಿಂಗ್ ಟುಗೆದರ್ ಆಫ್ಟರ್ ಮರ್ಡರ್| ರಾಜ್ಯ ರಾಜಧಾನಿಯಲ್ಲಿ ಹೆಚ್ಚುತ್ತಿದೆ ಸಾಲು ಸಾಲು ಪ್ರಕರಣ!!

ಸಮಗ್ರ ನ್ಯೂಸ್ : ಲೀವಿಂಗ್ ಟುಗೆದರ್ ಇದ್ದು ಬಳಿಕ ಕೊಲೆ ಮಾಡುತ್ತಿರುವ ಸಾಲು ಸಾಲು ಕ್ರೈಂ ಕೇಸ್ ಗಳ ಸಂಖ್ಯೆ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ. ಕಳೆದ ಎಂಟು ತಿಂಗಳಲ್ಲಿ 7 ಲಿವಿಂಗ್ ಕೊಲೆ ಕೇಸ್ ಗಳು ಬೆಂಗಳೂರಿನಲ್ಲಿ ದಾಖಲಾಗಿವೆ. ಏಳು ಪ್ರಕರಣದಲ್ಲಿ ನಡೆದ ಬಹುತೇಕ ಕೊಲೆಗಳು ಮಾರಕಾಸ್ತ್ರಗಳಿಂದ ಎನ್ನುವುದು ಬೆಚ್ಚಿ ಬೀಳಿಸಿದೆ. ಪ್ರಕರಣ ನಂ.1 : ಅಶೋಕನಗರ ಪೊಲೀಸ್ ಠಾಣಾವ್ಯಾಪ್ತಿಕೊಲೆ ವಿಧಾನ : ಚಾಕುವಿನಿಂದ ಇರಿದು ಕೊಲೆ:ಕಾರಣ : ಬರ್ತ್ ಡೇ ಗಿಫ್ಟ್ ವಿಚಾರಕ್ಕೆ ಜಗಳ ಪ್ರೇಯಸಿಯ

ಬಿಫೋರ್ ಲೀವಿಂಗ್ ಟುಗೆದರ್ ಆಫ್ಟರ್ ಮರ್ಡರ್| ರಾಜ್ಯ ರಾಜಧಾನಿಯಲ್ಲಿ ಹೆಚ್ಚುತ್ತಿದೆ ಸಾಲು ಸಾಲು ಪ್ರಕರಣ!! Read More »

ಮೂಡಿಗೆರೆ: ಪೆಟ್ರೋಲ್ ಸುರಿದು ಬಂಟ್ವಾಳದ ಯುವಕನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಮೂಡಿಗೆರೆಯಲ್ಲಿ ಬಂಟ್ವಾಳದ ವ್ಯಕ್ತಿಯೋರ್ವರನ್ನು ಪೆಟ್ರೋಲ್ ಸುರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ಬಾಸ್ ಅವರ ಪುತ್ರ ಫವಾಜ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆಯ ಹಿಂದೆ ಗಾಂಜಾ ವಹಿವಾಟು ಇರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಫವಾಜ್ ಎಂಬಾತನನ್ನು ಆರೋಪಿಗಳು ಪೆಟ್ರೋಲ್ ಸುರಿದು ಕೊಲೆ ಮಾಡಿದ ಬಳಿಕ ಚಿಕ್ಕಮಗಳೂರು ಮೂಡಿಗೆರೆಯ ಬಣಕ್ಕಲ್ ಎಂಬಲ್ಲಿ ಗುಡ್ಡದಲ್ಲಿ ಬಿಸಾಡಿ ಹೋಗಿದ್ದಾರೆ ಎನ್ನಲಾಗುತ್ತಿದೆ. ಫಯಾಜ್ ಅವರು ಮದುವೆಯಾಗಿದ್ದು, ಬಳಿಕ ಪತ್ನಿಯಿಂದ ದೂರವಿದ್ದರು. ಈತ

ಮೂಡಿಗೆರೆ: ಪೆಟ್ರೋಲ್ ಸುರಿದು ಬಂಟ್ವಾಳದ ಯುವಕನ ಬರ್ಬರ ಹತ್ಯೆ Read More »

ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ದಾರುಣ ಸಾವು| 10 ವರ್ಷಗಳ ಬಳಿಕ ಜನಿಸಿದ ಕಂದಮ್ಮನ ಕಳೆದುಕೊಂಡ ದಂಪತಿ

ಸಮಗ್ರ ನ್ಯೂಸ್: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ 5ನೇ ವಾರ್ಡ್​ನ ಇಂದಿರಾನಗರದಲ್ಲಿ ನಡೆದಿದೆ. ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗಳ ಪುತ್ರಿ ಪ್ರಿಯದರ್ಶಿನಿ ಮೃತಪಟ್ಟ ದುರ್ದೈವಿ. ಆಟವಾಡುತ್ತಿದ್ದಾಗ ಕೈಗೆ ಸಿಕ್ಕಿದ ಮೆಂಥೋಪ್ಲಸ್​​ನ ಚಿಕ್ಕ ಡಬ್ಬಿಯನ್ನು ಮಗು ನುಂಗಿದೆ. ಇದಾದ ನಂತರ ಮಗುವಿಗೆ ಉಸಿರಾಟ ತೊಂದರೆ ಹೆಚ್ಚಾಗಿದ್ದು ಖಾಸಗಿ ವೈದ್ಯರ ಬಳಿಗೆ ಪೋಷಕರು ಕರೆದುಕೊಂಡು ಹೋಗಿದ್ದಾರೆ. ಮಗುವನ್ನು ಪರೀಕ್ಷಿಸಿದ ವೈದ್ಯರು, ಮಾರ್ಗ ಮಧ್ಯೆಯೇ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.

ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ದಾರುಣ ಸಾವು| 10 ವರ್ಷಗಳ ಬಳಿಕ ಜನಿಸಿದ ಕಂದಮ್ಮನ ಕಳೆದುಕೊಂಡ ದಂಪತಿ Read More »

ಜೂ.11: ಸುಳ್ಯದ ರಾಮಚಂದ್ರ‌ ಸೇರಿ ಕರಾವಳಿಯ 8 ಮಂದಿ ಕೊರಗರಿಂದ ರಾಷ್ಟ್ರಪತಿ ಭೇಟಿ

ಸಮಗ್ರ ನ್ಯೂಸ್: ನೈಜ ದುರ್ಬಲ ಬುಡಕಟ್ಟು ಸಮುದಾಯಗಳ ಪ್ರತಿನಿಧಿಗಳಿಗೆ ಜೂನ್‌ 11 ಮತ್ತು 12ರಂದು ರಾಷ್ಟ್ರಪತಿ ಭೇಟಿ ಮತ್ತು ದೆಹಲಿ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕೊರಗರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನ ಸೂರಸಿದ್ಧ ಹೇರೂರು, ಶಂಕರ ಬೋಳಂಬಳ್ಳಿ, ಹೆಬ್ರಿ ತಾಲ್ಲೂಕಿನ ಪ್ರಿಯದರ್ಶಿನಿ, ಬ್ರಹ್ಮಾವರದ ನೀಲು ಕಳತ್ತೂರು, ದಕ್ಷಿಣ ಕನ್ನಡ ಜಿಲ್ಲೆಯಿಂದ ಮರಕಡದ ಎಂ.ಸುಂದರ, ಸುಳ್ಯ ನೆಲ್ಲೂರು ಕೆಮ್ರಾಜೆಯ ರಾಮಚಂದ್ರ, ಕಂಕನಾಡಿಯ ರತ್ನಾ, ಕಿನ್ನಿಗೋಳಿಯ ಸುಪ್ರಿಯಾ ಅವರು ಜೂನ್ 10ರಂದು

ಜೂ.11: ಸುಳ್ಯದ ರಾಮಚಂದ್ರ‌ ಸೇರಿ ಕರಾವಳಿಯ 8 ಮಂದಿ ಕೊರಗರಿಂದ ರಾಷ್ಟ್ರಪತಿ ಭೇಟಿ Read More »

ಗಾಳಿಪಟದ ದಾರಕ್ಕೆ ಯುವಕ ಬಲಿ

ಸಮಗ್ರ ನ್ಯೂಸ್: ಗಾಳಿಪಟದ ದಾರ ಯುವಕನೋರ್ವನ ಕುತ್ತಿಗೆ ಸಿಲುಕಿ ಸಾವನ್ನಪ್ಪಿರುವ ದುರ್ಘಟನೆ ಗದಗ ನಗರದ ಡಂಬಳ ನಾಕಾ ಬಳಿ ನಡೆದಿದೆ. ಪಿ ರವಿ ಮೃತ ದುರ್ದೈವಿ. ಆರು ದಿನಗಳ ಹಿಂದೆ ಗಾಳಿಪಟದ ದಾರ ಸಿಲುಕಿ ಕುತ್ತಿಗೆ ಸೀಳಿಹೋಗಿತ್ತು. ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆರುದಿನಗಳಿಂದ ಸಾವುಬದುಕಿನೊಂದಿಗೆ ಹೋರಾಟ ನಡೆಸಿದ್ದ ರವಿ. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ ನಿವಾಸಿಯಾಗಿರುವ ರವಿ. ಗದಗ ನಗರದ ಬಾರ್ ಒಂದರಲ್ಲಿ ಕೆಲಸ

ಗಾಳಿಪಟದ ದಾರಕ್ಕೆ ಯುವಕ ಬಲಿ Read More »

ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ತಿಳ್ಕೊಬೇಕಾ ? ಹಾಗಾದ್ರೆ ಇದನ್ನು ಪೂರ್ತಿ ಓದಿ.

ಸಮಗ್ರ ನ್ಯೂಸ್: ದಿನಕ್ಕೆ ಮೂರು ಖರ್ಜೂರವನ್ನು ತಿನ್ನುವುದು ದೇಹದಲ್ಲಿ ಸಾಕಷ್ಟು ಬದಲಾವಣೆ ಉಂಟು ಮಾಡುತ್ತದೆ. ಇದರಲ್ಲಿರುವ ನೈಸರ್ಗಿಕ ಜೀವಸತ್ವಗಳು, ಅಮೈನೋ ಆಮ್ಲಗಳು ಮತ್ತು ಖನಿಜಾಂಶಗಳು ಹೇರಳವಾಗಿದ್ದು, ಇದು ಮೆದುಳಿನ ಕೋಶಗಳ ಆರೋಗ್ಯವನ್ನು ಉತ್ತೇಜಿಸಿ ಸಮರ್ಪಕವಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ. ಮತ್ತು ಪೊಟ್ಯಾಸಿಯಮ್ ಅಂಶಗಳು ನರಮಂಡಲವನ್ನು ಬಲಪಡಿಸುವುದಲ್ಲದೆ ಜ್ಞಾಪಕ ಶಕ್ತಿಯನ್ನು ಗಮನಾರ್ಹವಾಗಿ ಸುಧಾರಿಸುತ್ತದೆ. ಕರುಳಿನ ಕ್ಯಾನ್ಸರ್ ಅಪಾಯದಿಂದ ಪಾರು ಮಾಡುವ ಖರ್ಜೂರವು ಜೀರ್ಣಕ್ರಿಯೆಗೆ ಮಾತ್ರವಲ್ಲ, ಅನ್ನನಾಳ ಮತ್ತು ಕೊಲೊನ್ ಅನ್ನು ಬ್ಯಾಕ್ಟೀರಿಯಾದಿಂದಲೂ ಮುಕ್ತವಾಗಿಡುತ್ತದೆ. ಹೀಗಾಗಿ ಇದು ಅತ್ಯಂತ ಅಪಾಯಕಾರಿ

ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ತಿಳ್ಕೊಬೇಕಾ ? ಹಾಗಾದ್ರೆ ಇದನ್ನು ಪೂರ್ತಿ ಓದಿ. Read More »

ಜೂ.11ರಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು ಭೇಟಿ

ಸಮಗ್ರ ನ್ಯೂಸ್: ಜೂ.11ರಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿಗೆ ಆಗಮಿಸಲಿದ್ದಾರೆ. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಜೂ.11ರಂದು ಬೆಳಗ್ಗೆ 8:35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 12:30 ಗಂಟೆಗೆ ಬಜ್ಪೆಯ ಕ.ರಾ.ರ.ಸಾ.ನಿಗಮ ಬಸ್ ನಿಲ್ದಾಣದಲ್ಲಿ ‘ಶಕ್ತಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಪರಾಹ್ನ 3 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ರಾತ್ರಿ 9:50ಕ್ಕೆ

ಜೂ.11ರಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು ಭೇಟಿ Read More »

ಒಂಟಿ ಪೋಷಕ ಪುರುಷ ಸರ್ಕಾರಿ ನೌಕರರಿಗೂ ಶಿಶು ಪೋಷಣಾ ರಜೆ| ರಾಜ್ಯ ಸರ್ಕಾರದಿಂದ ಆದೇಶ

ಸಮಗ್ರ ನ್ಯೂಸ್: ಒಂಟಿ ಪೋಷಕ ಸರ್ಕಾರಿ ಪುರುಷ ನೌಕರರಿಗೆ ಶಿಶು ಪಾಲನಾ ರಜೆ ಸೌಲಭ್ಯ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಈಗ ಮಹಿಳೆಯರಿಗೆ ಮಾತ್ರವಲ್ಲ, ಇನ್ಮುಂದೆ ಪುರುಷ ನೌಕರರಿಗೆ ರಜೆ ಸೌಲಭ್ಯ ಸಿಗಲಿದೆ. ಒಂಟಿ ಪೋಷಕರಾಗಿರುವ ಅವಿವಾಹಿತ, ವಿವಾಹ-ವಿಚ್ಛೇದಿತ ಅಥವಾ ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೂ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳ ಅವಧಿಗೆ ಅಂದರೆ, ಒಟ್ಟು 180 ದಿನಗಳಿಗೆ ಮೀರದಂತೆ ಶಿಶುಪಾಲನಾ ರಜೆಯನ್ನ ತಕ್ಷಣದಿಂದ ಜಾರಿಗೆ ಬರುವಂತೆ

ಒಂಟಿ ಪೋಷಕ ಪುರುಷ ಸರ್ಕಾರಿ ನೌಕರರಿಗೂ ಶಿಶು ಪೋಷಣಾ ರಜೆ| ರಾಜ್ಯ ಸರ್ಕಾರದಿಂದ ಆದೇಶ Read More »

ಸಿಎಂ ಸಿದ್ದರಾಮಯ್ಯ ಅವರಿಂದ ಹಿಂದೂ ಕಾರ್ಯಕರ್ತರ ಹತ್ಯೆ ಹೇಳಿಕೆ| ಶಾಸಕ ಹರೀಶ್ ಪೂಂಜಾಗೆ ಬಿಗ್ ರಿಲೀಫ್

ಸಮಗ್ರ ನ್ಯೂಸ್: ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಶುಕ್ರವಾರ ತಡೆ ವಿಧಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಹರೀಶ್ ಪೂಂಜಾ ಹೇಳಿಕೆ ನೀಡಿದ್ದರು. ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿತ್ತು. ಇದಕ್ಕೆ ತಡೆ ನೀಡುವಂತೆ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ

ಸಿಎಂ ಸಿದ್ದರಾಮಯ್ಯ ಅವರಿಂದ ಹಿಂದೂ ಕಾರ್ಯಕರ್ತರ ಹತ್ಯೆ ಹೇಳಿಕೆ| ಶಾಸಕ ಹರೀಶ್ ಪೂಂಜಾಗೆ ಬಿಗ್ ರಿಲೀಫ್ Read More »