June 2023

ಬಂಟ್ವಾಳ: ಅಡಿಕೆ ಕೀಳುವ ವೇಳೆ‌ ವಿದ್ಯುತ್ ಶಾಕ್ ತಗುಲಿ ಯುವಕ ಸಾವು

ಸಮಗ್ರ ನ್ಯೂಸ್ ಡೆಸ್ಕ್: ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳದ ಮಲಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬೋಳಿಯಾರು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ ಮೃತ ಯುವಕ. ಸಜೀಪ ಮುನ್ನೂರು ಗ್ರಾಮದ ಮೂಸಬ್ಬ ಅವರ ತೋಟದಲ್ಲಿ ಅಡಿಕೆ ತೆಗೆಯುತ್ತಿದ್ದಾಗ ಘಟನೆ ನಡೆದಿದೆ. ರಸ್ತೆಯ ಬದಿಯಲ್ಲಿ ಹಾದು ಹೋಗಿದ್ದ ಎಲ್.ಟಿ. ವಯರಿಗೆ ಫೈಬರ್ ದೋಟಿ ತಾಗಿ, ವಿದ್ಯುತ್ ಶಾಕ್ ಹೊಡೆದಿದೆ ಎಂದು ಹೇಳಲಾಗಿದೆ. ಅಡಿಕೆ ವ್ಯಾಪಾರಿಯಾಗಿರುವ ಶಾಫಿ, ಗಿಡದಿಂದಲೇ ಅಡಿಕೆಯನ್ನು ಕ್ರಯಕ್ಕೆ ಪಡೆದುಕೊಳ್ಳುತ್ತಿದ್ದರು. […]

ಬಂಟ್ವಾಳ: ಅಡಿಕೆ ಕೀಳುವ ವೇಳೆ‌ ವಿದ್ಯುತ್ ಶಾಕ್ ತಗುಲಿ ಯುವಕ ಸಾವು Read More »

‘ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿಗೆ ಕಡಿವಾಣ’ | ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗುಡುಗು

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹೊಣೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೆಗಲೇರಿದೆ. ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಗುಂಡುರಾವ್, ದಕ್ಷಿಣ ಕನ್ನಡದಲ್ಲಿನ ನೈತಿಕ ಪೊಲೀಸ್‌ಗಿರಿ ಅಂತ್ಯಹಾಡುವುದಾಗಿ ಹೇಳಿದ್ದಾರೆ. ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆ. ಇಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು . ಇದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳತ್ತೇವೆ ಎಂದು ಗುಂಡುರಾವ್ ಹೇಳಿದ್ದಾರೆ. ನಾನೇನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ, ಇದು ಮುಖ್ಯಮಂತ್ರಿ

‘ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿಗೆ ಕಡಿವಾಣ’ | ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗುಡುಗು Read More »

ಮಂಗಳೂರು: ಲೋಕಸಭಾಧ್ಯಕ್ಷ ಓಂ ಬಿರ್ಲಾ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸೌಹಾರ್ದ ಭೇಟಿ

ಸಮಗ್ರನ್ಯೂಸ್: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯು.ಟಿ.ಖಾದರ್ ಅವರು, ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಜೂ.8ರಂದು ಸೌಹಾರ್ದತವಾಗಿ ಭೇಟಿ ಮಾಡಿ ಚರ್ಚಿಸಿದರು. ಚರ್ಚೆಯ ಸಂದರ್ಭದಲ್ಲಿ ಲೋಕಸಭಾಧ್ಯಕ್ಷರು ಸದನಗಳಲ್ಲಿ ನಿಯಮಾವಳಿಗಳಂತೆ ಚರ್ಚೆಗೆ ಅವಕಾಶ ನೀಡಿ, ಧರಣಿ ಮತ್ತು ಗದ್ದಲಗಳಿಗೆ ಮುಕ್ತಿ ಕೊಟ್ಟು ಕಾರ್ಯಕಲಾಪಗಳು ಸುಗಮವಾಗಿ Perfectly ಪರಂಪರೆಯನ್ನು ಬೆಳೆಸೋಣ ಎಂಬ ಸಲಹೆಯನ್ನು ನೀಡಿದರು. ಚರ್ಚೆಯು ಅತ್ಯಂತ ಸೌಹಾರ್ದಯುತವಾಗಿತ್ತು ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

ಮಂಗಳೂರು: ಲೋಕಸಭಾಧ್ಯಕ್ಷ ಓಂ ಬಿರ್ಲಾ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸೌಹಾರ್ದ ಭೇಟಿ Read More »

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ| ದ.ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಸಂಪೂರ್ಣ ಪಟ್ಟಿ ಇಲ್ಲಿದೆ…ಬೆಂಗಳೂರು ನಗರ- ಡಿಕೆ ಶಿವಕುಮಾರ್ತುಮಕೂರು- ಡಾ. ಜಿ ಪರಮೇಶ್ವರ್ಗದಗ- ಹೆಚ್.ಕೆ ಪಾಟೀಲ್ಬೆಂಗಳೂರು ಗ್ರಾ.- ಕೆ.ಹೆಚ್ ಮುನಿಯಪ್ಪರಾಮನಗರ- ರಾಮಲಿಂಗಾರೆಡ್ಡಿಚಿಕ್ಕಮಗಳೂರು- ಕೆಜೆ ಜಾರ್ಜ್ ವಿಜಯಪುರ- ಎಂ.ಬಿ ಪಾಟೀಲ್ದಕ್ಷಿಣ ಕನ್ನಡ- ದಿನೇಶ್ ಗುಂಡೂರಾವ್ಮೈಸೂರು- ಹೆಚ್.ಸಿ ಮಹದೇವಪ್ಪಬೆಳಗಾವಿ- ಸತೀಶ್ ಜಾರಕಿಹೊಳಿಕಲಬುರ್ಗಿ- ಪ್ರಿಯಾಂಕಾ ಖರ್ಗೆ ಹಾವೇರಿ- ಶಿವಾನಂದ ಪಾಟೀಲ್ವಿಜಯನಗರ-

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ| ದ.ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರಾವಳಿಗರೇ ಎಚ್ಚರ… ಅಪ್ಪಳಿಸಲಿದೆ ಬಿಪರ್ ಜೋಯ್| ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಬಿಪರ್‌ಜೋಯ್‌ ಚಂಡಮಾರುತದ ಹಿನ್ನೆಲೆಯಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮೂಲ್ಕಿ, ಬೆಳ್ತಂಗಡಿ, ಪುತ್ತೂರು ಮುಂತಾದ ಕಡೆಗಳಲ್ಲಿ ಮುಂಜಾನೆಯಿಂದಲೇ ಬಾರೀ ಮಳೆ ಸುರಿಯುತ್ತಿದೆ. ಮಂಗಳೂರು ನಗರದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಣ್ಣನೆಯ ವಾತಾವರಣ ಸೃಷ್ಟಿಯಾಗಿದೆ. ಇನ್ನು ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಬೈಂದೂರು

ಕರಾವಳಿಗರೇ ಎಚ್ಚರ… ಅಪ್ಪಳಿಸಲಿದೆ ಬಿಪರ್ ಜೋಯ್| ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

‘ಕುಂಕುಮ ವಿಭೂತಿ ಇಡಬಾರದು ಅಂತ ನಾನ್ ಹೇಳಿಲ್ಲ, ಸುಮ್ನೆ ಅಪಪ್ರಚಾರ ಮಾಡ್ಬೇಡಿ’ | ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ಸಮಗ್ರ ನ್ಯೂಸ್: ‘ಪೊಲೀಸರು ಕುಂಕುಮ, ವಿಭೂತಿ ಇಡುವಂತಿಲ್ಲ ಎಂದು ನಾನು ಹೇಳಿಲ್ಲ. ಬೊಟ್ಟು ಯಾರು ಬೇಕಾದರೂ ಇಟ್ಟುಕೊಳ್ಳಬಹುದು. ಪೊಲೀಸರಿಗೆ ನಿಯಮಗಳ ಪ್ರಕಾರ ವಸ್ತ್ರ ಸಂಹಿತೆ ಇರುತ್ತದೆ. ಅದನ್ನು ಪಾಲಿಸಲಷ್ಟೇ ತಿಳಿಸಿದ್ದೇನೆ. ಈ ವಿಚಾರದಲ್ಲಿ ಅಪಪ್ರಚಾರ ಬೇಡ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ ಅವರು, ಅನಗತ್ಯ ವಿವಾದಗಳನ್ನು ಸೃಷ್ಟಿಮಾಡುವ ಅಗತ್ಯವಿಲ್ಲ. ನಾನು ಅಂತಹ ಯಾವುದೇ ಸೂಚನೆಯನ್ನು ನೀಡಿಲ್ಲ. ವಸ್ತ್ರ ಸಂಹಿತೆ ಪಾಲಿಸುವಂತೆ ಸೂಚಿಸಿದ್ದೇನೆ. ಬೊಟ್ಟು ಇಡಬೇಡಿ ಎಂದು ಯಾರಿಗೂ

‘ಕುಂಕುಮ ವಿಭೂತಿ ಇಡಬಾರದು ಅಂತ ನಾನ್ ಹೇಳಿಲ್ಲ, ಸುಮ್ನೆ ಅಪಪ್ರಚಾರ ಮಾಡ್ಬೇಡಿ’ | ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ Read More »

ಆ ಊರಿನ ಪ್ರತೀ ಮನೆಯಲ್ಲೂ ಇದೆ ವಿಮಾನ| ಮನೆ ಎದುರೇ ವಿಮಾನ ಪಾರ್ಕಿಂಗ್| ಎಲ್ಲಿದೆ ಗೊತ್ತಾ ಈ ಊರು? ಸ್ಟೋರಿ ನೋಡಿ…

ಸಮಗ್ರ ಡಿಜಿಟಲ್ ಡೆಸ್ಕ್: ಗ್ಯಾರೇಜುಗಳು ಮತ್ತು ಕಾರುಗಳಿಂದ ತುಂಬಿರುವ ಬೀದಿಗಳು ಕಣ್ಣಿಗೆ ಬೀಳುವುದು ಸಾಮಾನ್ಯ. ಆದರೆ ವಿಮಾನಗಳು ಮತ್ತು ಹ್ಯಾಂಗರ್‌ಗಳಿಂದ ತುಂಬಿದ ಬೀದಿಗಳನ್ನು ನೀವು ಎಂದಾದರೂ ನೋಡಿದ್ದೀರಾ ? ಹೌದು, ಬೀದಿಯ ತುಂಬಾ ವಿಮಾನಗಳೇ ತುಂಬಿರುವ ಊರೊಂದಿದೆ. ಅವರು ಕೆಲಸ ಮತ್ತು ವ್ಯಾಪಾರಕ್ಕಾಗಿ ಪ್ರಯಾಣಿಸಲು ತಮ್ಮ ಅದ್ದೂರಿ ವೈಯಕ್ತಿಕ ವಿಮಾನಗಳನ್ನು ಬಳಸುತ್ತಾರೆ. ಇಂಥದ್ದೊಂದು ಹೈಫೈ ಊರು ಇರೋದು ಕ್ಯಾಲಿಪೋರ್ನಿಯಾದಲ್ಲಿ. ಇಲ್ಲಿನ ಕ್ಯಾಮರೂನ್ ಏರ್‌ಪಾರ್ಕ್ ಕ್ಯಾಲಿಫೋರ್ನಿಯಾದ ಒಂದು ಪಟ್ಟಣವಾಗಿದ್ದು, ಅಲ್ಲಿ ಪ್ರತಿಯೊಬ್ಬರೂ ವಿಮಾನಗಳನ್ನು ಹೊಂದಿದ್ದಾರೆ. ಕ್ಯಾಮರೂನ್ ಏರ್‌ಪಾರ್ಕ್‌ನಂತಹ ವಸತಿ

ಆ ಊರಿನ ಪ್ರತೀ ಮನೆಯಲ್ಲೂ ಇದೆ ವಿಮಾನ| ಮನೆ ಎದುರೇ ವಿಮಾನ ಪಾರ್ಕಿಂಗ್| ಎಲ್ಲಿದೆ ಗೊತ್ತಾ ಈ ಊರು? ಸ್ಟೋರಿ ನೋಡಿ… Read More »

ಹವಾಮಾನ ವರದಿ| ಕರಾವಳಿಯಲ್ಲಿಂದು ಗುಡುಗು ಮಿಂಚಿನ ಜೊತಗೆ ಮಳೆ‌ ಸಾಧ್ಯತೆ| ರಾಜ್ಯಾದ್ಯಂತ ಅಬ್ಬರಿಸಲಿದ್ದಾನೆ ವರುಣ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್‌, ಗದಗ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ

ಹವಾಮಾನ ವರದಿ| ಕರಾವಳಿಯಲ್ಲಿಂದು ಗುಡುಗು ಮಿಂಚಿನ ಜೊತಗೆ ಮಳೆ‌ ಸಾಧ್ಯತೆ| ರಾಜ್ಯಾದ್ಯಂತ ಅಬ್ಬರಿಸಲಿದ್ದಾನೆ ವರುಣ Read More »

ಜೊತೆಯಾಗಿ ಹಿತವಾಗಿ ನಡೆಯೋಣ ಎಂದ ಪ್ರಿಯಕರ ಕಾಮುಕನಾದ| ನೀನೇ ನನ್ನ ಪ್ರಾಣ ಎಂದವ ಗೆಳೆಯನ ಜೊತೆ ಸೇರಿ ಅತ್ಯಾಚಾರ ಮಾಡಿದ| ಏನಿದು ತುಮಕೂರು TO ಬೆಂಗಳೂರು ಸ್ಟೋರಿ.!?

ಸಮಗ್ರ ನ್ಯೂಸ್: ಪ್ರೀತಿಸಿದ ಹುಡುಗನನ್ನು ನಂಬಿಕೊಂಡು ತುಮಕೂರಿನಿಂದ ಬೆಂಗಳೂರಿಗೆ ಬಂದ ಹುಡುಗಿಯ ಮೇಲೆ ಪ್ರೀತಿಸಿದ ಯುವಕ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಮಾಡಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿದ ಪ್ರೇಮಿಗಳು “ಜೊತೆಯಾಗಿ ಹಿತವಾಗಿ ಸೇರಿ ನಡೆವಾ ಸೇರಿ ನುಡಿವ” ಎಂಬ ಹಾಡಿನಂತೆ ತಮ್ಮ ಜೀವನವನ್ನು ಗುರಿ ತಲುಪಿಸಲು ಹಾತೊರೆಯುತ್ತಾರೆ. ಆದರೆ ಇಲ್ಲೊಬ್ಬ ಭೂಪ ಜೀವನಪೂರ್ತಿ ನಿನ್ನ ಜೊತೆಗಿರ್ತೀನಿ ಎಂದು ಭರವಸೆ ನೀಡಿ ಪ್ರೀತಿಸಿದ ಯುವಕನನ್ನು ನಂಬಿಕೊಂಡು ಬಂದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ

ಜೊತೆಯಾಗಿ ಹಿತವಾಗಿ ನಡೆಯೋಣ ಎಂದ ಪ್ರಿಯಕರ ಕಾಮುಕನಾದ| ನೀನೇ ನನ್ನ ಪ್ರಾಣ ಎಂದವ ಗೆಳೆಯನ ಜೊತೆ ಸೇರಿ ಅತ್ಯಾಚಾರ ಮಾಡಿದ| ಏನಿದು ತುಮಕೂರು TO ಬೆಂಗಳೂರು ಸ್ಟೋರಿ.!? Read More »

ದ.ಕ ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ದ.ಕ.ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕರೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಲಕ ಬಾಲಕೃಷ್ಣ (58) ಎಂಬವರು ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮಾಲಾಡಿ ಕೋರ್ಟ್‌ ಬಳಿಯ ರಾಘವೇಂದ್ರ ನಿಲಯ ಎಂಬಲ್ಲಿ ವಾಸಿಸುತ್ತಿದ್ದ ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಾಲಕೃಷ್ಣ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಅವರು ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ದ.ಕ ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕ ಆತ್ಮಹತ್ಯೆಗೆ ಶರಣು Read More »