June 2023

ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ

ಸಮಗ್ರ ನ್ಯೂಸ್: ಪ್ರಿಯತಮೆಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಕುಕ್ಕರ್ ನಲ್ಲಿ ಬೇಯಿಸಿರುವ ಭೀಕರ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದ್ದು, ಈತ ತನ್ನ ಲಿವ್ ಇನ್ ಗೆಳತಿ ಸರಸ್ವತಿ ವೈದ್ಯ(36) ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಆರೋಪಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ […]

ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ Read More »

ಮಂಗಳೂರು: ಹೂಡಿಕೆಯ ಆಮಿಷವೊಡ್ಡಿ 1.64 ಲಕ್ಷ ರೂ ವಂಚನೆ

ಸಮಗ್ರ ನ್ಯೂಸ್: ಹಣ ಹೂಡಿಕೆಯ ಆಮಿಷವೊಡ್ಡಿ 1.64ಲಕ್ಷ ಹಣ ವಂಚನೆ ಮಾಡಿರುವ ಘಟನೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ಅಪರಿಚಿತ ವ್ಯಕ್ತಿ ದೂರುದಾರರಿಗೆ ಜೂ.4ರಂದು ಇನ್‌ಸ್ಟಾಗ್ರಾಂ ಮೆಸೆಂಜರ್‌ನಲ್ಲಿ ಸಂದೇಶಮತ್ತು ಲಿಂಕ್ ಕಳುಹಿಸಿದ್ದು, ಆ ಲಿಂಕ್ ಕ್ಲಿಕ್ ಮಾಡಿದಾಗ ಇನ್‌ಸ್ಟಾಗ್ರಾಂ ಖಾತೆಯ ಪೇಜ್ ತೆರೆದುಕೊಂಡಿತ್ತು. ಬಳಿಕ ಅಪರಿಚಿತ ವ್ಯಕ್ತಿ 50,000 ರೂ. ಹೂಡಿಕೆ ಮಾಡಿದರೆ 4,90,000 ರೂ. ಲಾಭಾಂಶ ಸಿಗುವುದಾಗಿ ಹೇಳಿದಾಗ ಅದರಂತೆ 50,000 ರೂ. ಹಣವನ್ನು ವರ್ಗಾಯಿಸಿದರು.

ಮಂಗಳೂರು: ಹೂಡಿಕೆಯ ಆಮಿಷವೊಡ್ಡಿ 1.64 ಲಕ್ಷ ರೂ ವಂಚನೆ Read More »

ಐವರ್ನಾಡಿನಲ್ಲಿ ರಬ್ಬರ್ ಟ್ರೇಡಿಂಗ್ ಶುಭಾರಂಭ

ಸಮಗ್ರ ನ್ಯೂಸ್:ಐವರ್ನಾಡಿನ ನೆಕ್ರಪ್ಪಾಡಿ ಕಾಂಪ್ಲೆಕ್ಸ್ ನಲ್ಲಿ ಶರೀಫ್ ನಿಡುಬೆ ಮತ್ತು ಅಬ್ಬಾಸ್ ಪೈಚಾರ್ ಇವರ ಮಾಲಕತ್ವದಲ್ಲಿ ಐವರ್ನಾಡು ರಬ್ಬರ್ ಟ್ರೇಡಿಂಗ್ ಜೂ.8 ರಂದು ಶುಭಾರಂಭಗೊಂಡಿದೆ‌. ಈ ಸಂಧರ್ಭದಲ್ಲಿ ಪ್ರಾ.ಕೃ.ಪ.ಸ.ಸಂಘ.ನಿ. ಅಧ್ಯಕ್ಷರಾದ ಎಸ್.ಎನ್.ಮನ್ಮಥ,ಗ್ರಾಂ.ಪಂ.ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ,ಕೃಷ್ಣಪ್ಪ ಗೌಡ ನೆಕ್ರಪ್ಪಾಡಿ,ಶ್ರೀನಿವಾಸ ಮಡ್ತಿಲ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು. ಇಲ್ಲಿ ರಬ್ಬರ್,ಅಡಿಕೆ,ತೆಂಗಿನಕಾಯಿ, ಬಾಳೆಗೊನೆ,ಕೊಕ್ಕೋ,ಕಾಳುಮೆಣಸು, ಕಾಫಿ ಬೀಜ ಇನ್ನಿತರ ವಸ್ತುಗಳನ್ನು ಉತ್ತಮ ದರದಲ್ಲಿ ಖರೀದಿಸಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.

ಐವರ್ನಾಡಿನಲ್ಲಿ ರಬ್ಬರ್ ಟ್ರೇಡಿಂಗ್ ಶುಭಾರಂಭ Read More »

ಉಳ್ಳಾಲ: 24 ಪುಟಗಳ ಡೆತ್ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ|ನೂತನ ಮನೆ ಖರೀದಿಸಿದ ಐದೇ ದಿನದಲ್ಲಿ ಏನಾಯಿತು ಈಕೆಗೆ..?| ಇದಕ್ಕೆಲ್ಲ ಕಾರಣ ಬ್ಯಾಂಕ್ ಅಧಿಕಾರಿಗಳ..!

ಸಮಗ್ರ ನ್ಯೂಸ್: ಯುವತಿಯೋರ್ವಳು 24 ಪುಟಗಳ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25)ಆತ್ಮ ಹತ್ಯೆಗೈದ ಯುವತಿ.ನಿನ್ನೆ ರಾತ್ರಿ ಅಶ್ವಿನಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ. ಅಶ್ವಿನಿ ಬರೆದ 24 ಪುಟಗಳ ಡೆತ್

ಉಳ್ಳಾಲ: 24 ಪುಟಗಳ ಡೆತ್ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ|ನೂತನ ಮನೆ ಖರೀದಿಸಿದ ಐದೇ ದಿನದಲ್ಲಿ ಏನಾಯಿತು ಈಕೆಗೆ..?| ಇದಕ್ಕೆಲ್ಲ ಕಾರಣ ಬ್ಯಾಂಕ್ ಅಧಿಕಾರಿಗಳ..! Read More »

ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರ ಸಾವು

ಸಮಗ್ರ ನ್ಯೂಸ್: ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರು ಸಾವನ್ನಪ್ಪಿದ ಘಟನೆ ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ಕಾರ್ಮಿಕರು ಜಾಜ್‌ಪುರ ಕಿಯೋಂಜರ್ ರಸ್ತೆ ರೈಲು ನಿಲ್ದಾಣದಲ್ಲಿ ರೈಲ್ವೆ ಸೈಡಿಂಗ್ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ಗುಡುಗು ಸಹಿತ ಮಳೆಯಾಗಿದ್ದರಿಂದ (Thunder Storm) ಅಲ್ಲೇ ನಿಂತಿದ್ದ ಗೂಡ್ಸ್ ರೈಲಿನ ಅಡಿಯಲ್ಲಿ ಆಶ್ರಯ ಪಡೆದಿದ್ದಾರೆ. ದುರಾದೃಷ್ಟವಶಾತ್ ರೈಲಿಗೆ ಎಂಜಿನ್ ಜೋಡಿಸಿರಲಿಲ್ಲ. ಜೋರು ಮಳೆಯಿಂದಾಗಿ ರೈಲು ಚಲಿಸಲು ಪ್ರಾಂಭಿಸಿದ್ದು, ಅದರ ಅಡಿಯಲ್ಲಿ ಆಶ್ರಯ ಪಡೆದಿದ್ದ ಕಾರ್ಮಿಕರು ರೈಲಿನಡಿಗೆ

ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರ ಸಾವು Read More »

ವಿದೇಶದಲ್ಲೂ ಗೆದ್ದ ಡೇರ್ ಡೆವಿಲ್ ಮುಸ್ತಾಫಾ

ಸಮಗ್ರ ಸಿನಿಮಾ: ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ (Poorchandra Tejaswi) ಕಥೆಯಾಧಾರಿತ ಸಿನಿಮಾವಾಗಿರುವ ಡೇರ್ ಡೆವಿಲ್ ಮುಸ್ತಾಫಾ ಭರಪೂರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಸಿನಿಮಾ ಪ್ರೇಮಿಗಳಿಂದ ಹಾಗೂ ವಿಮರ್ಶಕರಿಂದಲೂ ಅಪ್ಪುಗೆ ಪಡೆದಿರುವ ಹೃದಯ ಬೆಸೆಯುವ ಕಥೆ ಯಶಸ್ವಿಯಾಗಿ ಮೂರನೇ ವಾರ ಪ್ರದರ್ಶನ ಕಂಡಿದೆ. ಇದೇ ಖುಷಿಯಲ್ಲಿ ಚಿತ್ರತಂಡ ಯಶಸ್ವಿ ಕಾರ್ಯಕ್ರಮ ಆಯೋಜಿಸಿತ್ತು. ಕೇಕ್ ಕಟ್ ಮಾಡಿ ಸಕ್ಸಸ್ ಖುಷಿಯನ್ನು ಮಾಧ್ಯಮದವರ ಜೊತೆ ಹಂಚಿಕೊಂಡರು. ಡಾಲಿ ಧನಂಜಯ್ (Dolly Dhananjay) ಮಾತನಾಡಿ, ನಾನು ಇಲ್ಲಿ ಕುಳಿತು ಈ ಗೆಲುವನ್ನು ಸಂಭ್ರಮವನ್ನು

ವಿದೇಶದಲ್ಲೂ ಗೆದ್ದ ಡೇರ್ ಡೆವಿಲ್ ಮುಸ್ತಾಫಾ Read More »

ಅತ್ತೆ, ಮಾವ, ಗಂಡ ಸೇರಿಕೊಂಡು ಸೊಸೆಯನ್ನೇ ಉಸಿರುಗಟ್ಟಿಸಿ ಕೊಲೆ!

ಸಮಗ್ರ ನ್ಯೂಸ್: ಅತ್ತೆ, ಮಾವ ಹಾಗೂ ಗಂಡ ಸೇರಿಕೊಂಡು ಸೊಸೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ. ಶ್ರೀದೇವಿ ದೀಪಕ್ ಬೇವಿನಕಟ್ಟಿ (31) ಕೊಲೆಯಾದ ಮಹಿಳೆ. ದೀಪಕ್ ಬೇವಿನಕಟ್ಟಿ (34), ರಾಮಚಂದ್ರ ಬೇವಿನಕಟ್ಟಿ (64) ಹಾಗೂ ಪದ್ಮಾವತಿ ಬೇವಿನಕಟ್ಟಿ (50) ಸೊಸೆಯನ್ನು ಹತ್ಯೆಗೈದ ಆರೋಪಿಗಳು. ಮದುವೆಯಾಗಿ 3 ವರ್ಷಗಳಾದರೂ ಶ್ರೀದೇವಿಗೆ ಮಕ್ಕಳಾಗಿರಲಿಲ್ಲ. ಅಲ್ಲದೇ ತವರು ಮನೆಯಿಂದ ಹಣ ತರುವಂತೆ ಶ್ರೀದೇವಿ ಗಂಡ ಪೀಡಿಸುತ್ತಿದ್ದ. ಈ ಹಿನ್ನೆಲೆ ಪತಿ, ಅತ್ತೆ ಹಾಗೂ ಮಾವ

ಅತ್ತೆ, ಮಾವ, ಗಂಡ ಸೇರಿಕೊಂಡು ಸೊಸೆಯನ್ನೇ ಉಸಿರುಗಟ್ಟಿಸಿ ಕೊಲೆ! Read More »

ಸುಳ್ಯ: ಶ್ರೀ ಕಾಟೂರ್ ಮೆನ್ಸ್ ಫ್ಯಾಷನ್ ಶುಭಾರಂಭ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಶ್ರೀ ಕಾಟೂರು ಮೆನ್ಸ್ ಫ್ಯಾಷನ್ಸ್ ಜೂನ್ 7ರಂದು ದ್ವಾರಕ ಹೊಟೇಲ್ ಬಳಿ ಇರುವ ರಾಜಶ್ರೀ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ. ಈ ಸಂದರ್ಭದಲ್ಲಿ ದೀಪ ಬೆಳಗಿ ಉದ್ಘಟಿಸಿದ ತಂದೆ ಹೊನ್ನಪ್ಪ ಕಾಟೂರು ಮತ್ತು ಮನೆಯವರು, ಕಟ್ಟಡ ಮಾಲೀಕರು ಕೃಷ್ಣ ಇಂಜಿನಿಯರ್, ಪಿ. ಡಬ್ಲ್ಯೂ. ಡಿ ಗುತ್ತಿಗೆದಾರರು ವೆಂಕಪ್ಪ ಗೌಡ ನೆಕ್ರಾಜೆ , ಪದ್ಮನಾಭ ನೆಕ್ರಾಜೆ , ಬೋಸ್ ಮೀಡಿಯಾ ದೇವಿಪ್ರಸಾದ್ ಉಪಸ್ಥಿತರಿದ್ದರು. ಇಲ್ಲಿ ಉತ್ತಮ ಗುಣಮಟ್ಟದ ಬ್ರಾಂಡೆಡ್ ಜೀನ್ಸ್, ಕ್ಯಾಶುವಲ್ಸ್, ಫಾರ್ಮಲ್ಸ್ ಟೀ-ಶರ್ಟ್, ಕಾರ್ಗ್ಸೋ,

ಸುಳ್ಯ: ಶ್ರೀ ಕಾಟೂರ್ ಮೆನ್ಸ್ ಫ್ಯಾಷನ್ ಶುಭಾರಂಭ Read More »

16 ಸಾವಿರಕ್ಕೂ ಹೆಚ್ಚು ಹೃದಯ ಉಳಿಸಿದ್ದ ಡಾಕ್ಟರ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಗುಜರಾತ್‌ನ ಜಾಮ್‌ನಗರದ ಖ್ಯಾತ ಹೃದ್ರೋಗ ತಜ್ಞ ಗೌರವ್ ಗಾಂಧಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳವಾರ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಗಳು ಹೇಳಿವೆ. ಡಾ. ಗಾಂಧಿ ಅವರಿಗೆ 41 ವರ್ಷ ವಯಸ್ಸಾಗಿತ್ತು ಮತ್ತು ಅವರ ವೈದ್ಯಕೀಯ ವೃತ್ತಿಜೀವನದ ಅವಧಿಯಲ್ಲಿ 16,000 ಕ್ಕೂ ಹೆಚ್ಚು ಹೃದಯ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದಾರೆ. ಡಾ. ಗಾಂಧಿ ಸೋಮವಾರ ಎಂದಿನಂತೆ ರೋಗಿಗಳನ್ನು ಭೇಟಿಯಾಗಿದ್ದ ಅವರು ರಾತ್ರಿ ಮನೆಯ ರಸ್ತೆಯಲ್ಲಿರುವ ತಮ್ಮ ನಿವಾಸಕ್ಕೆ ಮರಳಿದ್ದರು. ಆರೋಗ್ಯದ ಬಗ್ಗೆ ಯಾವುದೇ ದೂರು ನೀಡದ ಅವರು ರಾತ್ರಿ

16 ಸಾವಿರಕ್ಕೂ ಹೆಚ್ಚು ಹೃದಯ ಉಳಿಸಿದ್ದ ಡಾಕ್ಟರ್ ಹೃದಯಾಘಾತದಿಂದ ಸಾವು Read More »

ಸರ್ಕಾರದ ಫ್ರೀ ಭಾಗ್ಯದಿಂದ ಗ್ರಾಹಕರ ಜೇಬಿಗೆ ಕತ್ತರಿ| ಹಾಲಿನ ದರ ಲೀಟರ್ ಗೆ ₹5 ಏರಿಕೆ ಪ್ರಸ್ತಾವನೆ

ಸಮಗ್ರ ನ್ಯೂಸ್: ವಿದ್ಯುತ್ ದರ ಹೆಚ್ಚಳದ ಬೆನ್ನಲ್ಲೇ ಹಾಲಿನ ದರ ಹೆಚ್ಚಳದ ಶಾಕ್ ನೀಡುವ ಸಾಧ್ಯತೆ ಇದೆ. ಹಾಲಿನ ದರ ಪರಿಷ್ಕರಣೆಗೆ ಹಾಲು ಒಕ್ಕೂಟಗಳು ಪಟ್ಟು ಹಿಡಿದಿದ್ದು, ಪ್ರತಿ ಲೀಟರ್ ಹಾಲಿನ ದರವನ್ನು 5 ರೂಪಾಯಿ ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲು ಬಮೂಲ್ ಚಿಂತನೆ ನಡೆಸಿದೆ. ಹಾಲು ಉತ್ಪಾದಕ ರೈತರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹಧನ ಕಡಿತಗೊಳಿಸಲು ಹಾಲು ಒಕ್ಕೂಟಗಳು ಮುಂದಾಗಿದ್ದು, ಸಿಎಂ ಸಿದ್ದರಾಮಯ್ಯ ರೈತರ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸದೇ ಯಥಾಸ್ಥಿತಿ ಮುಂದುವರಿಸುವಂತೆ ಸೂಚನೆ ನೀಡಿದ್ದಾರೆ. ಕಡಿತಗೊಳಿಸಿದ್ದ ಪ್ರೋತ್ಸಾಹ

ಸರ್ಕಾರದ ಫ್ರೀ ಭಾಗ್ಯದಿಂದ ಗ್ರಾಹಕರ ಜೇಬಿಗೆ ಕತ್ತರಿ| ಹಾಲಿನ ದರ ಲೀಟರ್ ಗೆ ₹5 ಏರಿಕೆ ಪ್ರಸ್ತಾವನೆ Read More »