ಮಡಿಕೇರಿ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ದೇವರಾಜ್ ಅಮಾನತು

ಸಮಗ್ರ ನ್ಯೂಸ್: ಮಡಿಕೇರಿ ಲೋಕೋಪಯೋಗಿ ಉಪವಿಭಾಗದ ಕಿರಿಯ ಇಂಜಿನಿಯರ್ ದೇವರಾಜು ಕೆ.ಎಲ್ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗಿದೆ. ಇವರನ್ನು ಕೂಡಲೇ ಅಮಾನತ್ತುಗೊಳಸಲು ಆದೇಶ ಹೊರಡಿಸುವಂತೆ ಹಾಗೂ ಇವರ ವಿರುದ್ಧ ಶಿಸ್ತುಕ್ರಮ ಹೊರಡಿಸಿವಂತೆ ಆದೇಶ ನೀಡಲಾಗಿದೆ.

Ad Widget ... ..

ದೇವರಾಜು ಕೆ.ಎಲ್. ಕೊಡಗು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ತಡೆಗೋಡೆಯ ಕಳಪೆ ಕಾಮಗಾರಿ ನಿರ್ವಹಣೆ, ಗ್ರೇಟರ್ ರಾಜ ಸೀಟ್ ಯೋಜನೆಯಲ್ಲಿ ನಕಲಿ ಎಂ.ಬಿ. ಪುಸ್ತಕಗಳ ಬಳಕೆ ಹಾಗೂ ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಪಾಲ ಎಸ್.ಸಿ ಕಾಲೋನಿಯಲ್ಲಿ ಎಸ್ಇಪಿ/ಟಿ.ಎಸ್.ಪಿ ಅನುದಾನವನ್ನು ಬೇರೆಡೆ ನಿರ್ವಹಿಸಿರುವುದಲ್ಲದೇ ದುರ್ಬಳಕೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕರ್ನಾಟಕ ನಾಗರೀಕ ಸೇವಾ ನಿಯಮಗಳ ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.

Ad Widget

ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ತಡೆ-ಗೋಡೆ ಕಳಪೆ ಕಾಮಗಾರಿ ವಿಚಾರವಾಗಿ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಸತತವಾಗಿ ಹೋರಾಟ ನಡೆಸಿದ್ದರು. ಮಡಿಕೇರಿ ಶಾಸಕ ಎ.ಎಸ್. ಪೊನ್ನಣ್ಣ ಸೂಚನೆ ಮೇರೆಗೆ ಇದೀಗ ಸರಕಾರದಿಂದ ದೇವರಾಜ್ ಅವರನ್ನು ಅಮಾನತು ಮಾಡುವಂತೆ ಆದೇಶ ಜಾರಿ ಮಾಡಲಾಗಿದೆ.

Leave a Comment

Your email address will not be published. Required fields are marked *