ಸುರಕ್ಷಾ ದಂತ ಚಿಕಿತ್ಸಾಲಯದ 27ನೆಯ ಸಂಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಸುರಕ್ಷಾ ದಂತ ಚಿಕಿತ್ಸಾ ಲಯದ ೨೭ ನೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದಿನಾಂಕ ೩ ಜುಲೈ ೨೦೨೩ ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು.ಸುಮಾರು ೫೫ ಮಂದಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.

Ad Widget ... ..

ನಿವ್ರತ್ತ ಬ್ಯಾಂಕ್ ಉದ್ಯೋಗಿ ಶ್ರೀ ವಾಸುದೇವ ಹೊಳ್ಳ ಅವರಿಗೆ ಹಲಸಿನಹಣ್ಣಿನ ಗಿಡವನ್ನು ಡಾ ಮುರಲಿ ಮೋಹನ್ ಚೂಂತಾರು ಅವರು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.

Ad Widget

ಈ ಸಂದರ್ಭದಲ್ಲಿ ಡಾ ರಾಜಶ್ರೀ ಮೋಹನ್,ದಂತ ಪರಿಚಾರಕಿಯರಾದ ರಮ್ಯಾ, ಚೈತ್ರಾ, ಸುಷ್ಮಿತಾ, ಜಯಶ್ರೀ ಮುಂತಾದವರು ಉಪಸ್ಥಿತರಿದ್ದರು. ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ ಶ್ರೀ ಪ್ರಮೋದ್ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Leave a Comment

Your email address will not be published. Required fields are marked *