ಸುಳ್ಯ -ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಮಣ್ಣು ಕುಸಿತ

ಸಮಗ್ರ ನ್ಯೂಸ್: ಕಳೆದ ಮೂರು ದಿನಗಳಿಂದ‌ ಎಡೆ ಬಿಡದೆ ಸುರಿಯುತ್ತಿರುವ ಮಳೆಯ ಪರಿಣಾಮ ಸುಳ್ಯ -ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ತಡೆ ಉಂಟಾದ ಘಟನೆ ಸಂಭವಿಸಿದೆ.

. Ad Widget . Ad Widget

ಗಡಿ ಪ್ರದೇಶ ಕೇರಳದ ಭಾಗ ಕಲ್ಲಪಳ್ಳಿಯಲ್ಲಿ ಜೂ.6ರಂದು ಬೆಳಿಗ್ಗೆ ಮಣ್ಣು ಕುಸಿತ ಉಂಟಾಗಿದ್ದು, ಇದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಬಳಿಕ ಸ್ಥಳೀಯರು ಸೇರಿ ಮಣ್ಣು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *