ಬೆಳ್ತಂಗಡಿ- ಗಡಾಯಿಕಲ್ಲು ಚಾರಣಕ್ಕೆ ಬ್ರೇಕ್

ಸಮಗ್ರ ನ್ಯೂಸ್: ಐತಿಹಾಸಿಕ ಪ್ರವಾಸಿ ತಾಣವಾಗಿರುವ ಬೆಳ್ತಂಗಡಿಯ ನಡ ಗ್ರಾಮದಲ್ಲಿರುವ ಸಾವಿರ ಅಡಿ ಎತ್ತರದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.

Ad Widget ... ..

ಧಾರಾಕಾರ ಸುರಿಯುತ್ತಿರುವ ಮಳೆಯಿಂದ ಬಂಡೆಯಲ್ಲಿ ನೀರು ಹರಿಯುತ್ತಿದ್ದು, ಮೆಟ್ಟಿಲುಗಳಲ್ಲಿ ಪಾಚಿ ಬೆಳೆದು ಜಾರುವ ಸಾಧ್ಯತೆಗಳು ಇರುವುದರಿಂದ ಜು.7ರಿಂದ ಮುಂದಿನ ಆದೇಶದ ತನಕ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ಇಲಾಖೆಯ ವಲಯಾರಣ್ಯಧಿಕಾರಿ ಸ್ವಾತಿ ಅವರು ತಿಳಿಸಿದ್ದಾರೆ.

Ad Widget

ಧರ್ಮಸ್ಥಳಕ್ಕೆ ತುಂಬ ಹತ್ತಿರದಲ್ಲಿಯೇ ಗಡಾಯಿಕಲ್ಲು ಕೋಟೆಯಿದ್ದು ಇದು ಕುದುರೇಮುಖ ಪರ್ವತ ಶ್ರೇಣಿಯ ಭಾಗವಾಗಿದೆ. ಚಾರಣಪ್ರಿಯರು ತುಂಬಾ ಇಷ್ಟಪಡುವ ಪ್ರವಾಸಿ ತಾಣವಿದಾಗಿದೆ. ಇದನ್ನು ನರಸಿಂಹ ಗಢ, ಜಮಲಾಬಾದ್ ಕೋಟೆ ಎಂದು ಕೂಡ ಕರೆಯುತ್ತಾರೆ.

ಸಮುದ್ರ ಮಟ್ಟದಿಂದ 1,788 ಅಡಿ ಎತ್ತರದಲ್ಲಿರುವ ಈ ಗಡಾಯಿಕಲ್ಲು ಬೆಳ್ತಂಗಡಿ ಪಟ್ಟಣದಿಂದ 8 ಕಿಮೀ ದೂರದಲ್ಲಿದೆ. ಗಡಾಯಿಕಲ್ಲು ಮಂಗಳೂರಿನಿಂದ ಸುಮಾರು 60 ಕಿ.ಮೀ, ಧರ್ಮಸ್ಥಳದಿಂದ ಸುಮಾರು 15 ಕಿ.ಮೀ. ದೂರದಲ್ಲಿರುವ ಬೆಳ್ತಂಗಡಿಯಿಂದ ಮಂಜೊಟ್ಟಿಗೆ ಬಂದು ಚಾರಣ ಪ್ರಾರಂಭಿಸಿ ಗಡಾಯಿಕಲ್ಲು ತಲುಪಬಹುದು.

Leave a Comment

Your email address will not be published. Required fields are marked *