ಸಮಗ್ರ ನ್ಯೂಸ್: ಒಡಿಶಾದಲ್ಲಿ 290 ಮಂದಿಯನ್ನು ಬಲಿಪಡೆದ ಸರಣಿ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ರೈಲ್ವೆ ಉದ್ಯೋಗಿಗಳಾಗಿರುವ ಮೂವರನ್ನು ಸಿಬಿಐ ಬಂಧಿಸಿದೆ.
ಈಗಾಗಲೇ ಪ್ರಕರಣಕ್ಕೆ ಸಂಭಧಿಸಿದಂತೆ ರೈಲ್ವೆ ಸುರಕ್ಷತಾ ಆಯುಕ್ತರು ರೈಲ್ವೆ ಮಂಡಳಿಗೆ ಸಲ್ಲಿಸಿದ್ದ ವರದಿಯಲ್ಲಿ, ಮಾನವ ಪ್ರಮಾದ ಮತ್ತು ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಹೇಳಿತ್ತು.
ಬಂಧಿತ ವ್ಯಕ್ತಿಗಳಾದ ಅರುಣ್ ಕುಮಾರ್ ಮಹಂತ, ಮುಹಮ್ಮದ್ ಅಮೀರ್ ಖಾನ್ ಮತ್ತು ಪಪ್ಪು ಕುಮಾರ್ ವಿರುದ್ಧ ಕೊಲೆಗೆ ಸಮನಾಗದ ನರಹತ್ಯೆ ಮತ್ತು ಸಾಕ್ಷ್ಯನಾಶದ ಆರೋಪ ಹೊರಿಸಲಾಗಿದೆ.







