‘ಅಲ್ಲಾ’ನನ್ನು‌ ನಂಬಿರುವ ನಾವು ‘ವಂದೇ ಮಾತರಂ’ ಹೇಳಲಾಗದು| ಎಸ್ ಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಸಮಗ್ರ ನ್ಯೂಸ್: ಸಮಾಜವಾದಿ ಪಕ್ಷದ ಶಾಸಕರೊಬ್ಬರು ವಂದೇ ಮಾತರಂ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಮಹಾರಾಷ್ಟ್ರದ ವಿಧಾನಸಭೆ ಅಧಿವೇಶನದಲ್ಲಿ ಕೋಲಾಹಲ ಉಂಟಾಗಿ ಸದನವನ್ನು ಮುಂದೂಡಲಾಗಿದೆ.

. Ad Widget . Ad Widget

ಮನ್​ಖುರ್ದ್​ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಬು ಅಜ್ಮಿ ನಾವು ಅಲ್ಲಾನನ್ನು ನಂಬುವುದರಿಂದ ವಂದೇ ಮಾತರಂಗೆ ತಲೆಬಾಗಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ವಿವಾದದ ಕಿಡಿಯನ್ನು ಹೊತ್ತಿಸಿದ್ದಾರೆ. ಸಂಭಾಜಿನಗರ ಜಿಲ್ಲೆಯಲ್ಲಿ ನಡೆದ ಗಲಭೆಯನ್ನು ಸದನದಲ್ಲಿ ಪ್ರಸ್ತಾಪಿಸುವ ವೇಳೆ ವಂದೇ ಮಾತರಂ ಪಠಣಕ್ಕೆ ಅಸಮ್ಮತಿ ಸೂಚಿಸಿ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

. Ad Widget . . Ad Widget . Ad Widget

ಕೆಲವರು ಭಾರತದಲ್ಲಿ ವಾಸಿಸಬೇಕಾದರೆ ವಂದೇ ಮಾತರಂ ಪಠಣೆ ಮಾಡಬೇಕು ಎಂದು ಹೇಳುತ್ತಾರೆ. ನಾವು ಹಾಗೆ ಮಾಡಲು ಸಾಧ್ಯವಿಲ್ಲ. ಏಕೆಂದರೆ, ನಾವು ಅಲ್ಲಾನನ್ನು ನಂಬುವ ಕಾರಣ ವಂದೇ ಮಾತರಂಗೆ ತಲೆಬಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *