July 2023

ಹವಾಮಾನ ವರದಿ: ರಾಜ್ಯಾದ್ಯಂತ ಸಮೃದ್ಧ ವರ್ಷಧಾರೆ| ಇನ್ನೆಷ್ಟು ದಿನ ಮಳೆ?

ಸಮಗ್ರ ನ್ಯೂಸ್: ನೈರುತ್ಯ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 26ರಂದು ಕಲಬುರಗಿ, ಉಡುಪಿ, ಬೀದರ, ಚಿಕ್ಕಮಗಳೂರು, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಚ್‌’ ಹಾಗೂ ಹಾಸನ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಜುಲೈ 27ರಂದು ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, […]

ಹವಾಮಾನ ವರದಿ: ರಾಜ್ಯಾದ್ಯಂತ ಸಮೃದ್ಧ ವರ್ಷಧಾರೆ| ಇನ್ನೆಷ್ಟು ದಿನ ಮಳೆ? Read More »

ಮಹಾಮಳೆಗೆ ತತ್ತರಿಸಿದ ಕರುನಾಡು| 9 ಜಿಲ್ಲೆಗಳಿಗೆ ಪ್ರವಾಹ ಭೀತಿ| ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆಯ ಅಬ್ಬರ ಮುಂದುವರೆದಿದ್ದು, 9 ಜಿಲ್ಲೆಗಳಲ್ಲಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನಜೀವನ ಅಸ್ಥವ್ಯಸ್ತಗೊಂಡಿದೆ. 9 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನೈರುತ್ಯ ಮುಂಗಾರು ರಾಜ್ಯದ ಬಹುತೇಕ ಭಾಗದಲ್ಲಿ ಅಬ್ಬರಿಸುತ್ತಿದೆ. ರಾಜ್ಯದಾದ್ಯಂತ ಮುಂದಿನ ನಾಲ್ಕು ದಿನ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 26ರಂದು ಬೀದರ್, ಕಲಬುರಗಿ, ಉಡುಪಿ, ಬೆಳಗಾವಿ,

ಮಹಾಮಳೆಗೆ ತತ್ತರಿಸಿದ ಕರುನಾಡು| 9 ಜಿಲ್ಲೆಗಳಿಗೆ ಪ್ರವಾಹ ಭೀತಿ| ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕನಕಪುರ ರಸ್ತೆ ಬದಿ ಕಂತೆ ಕಂತೆ 2000ದ ನೋಟು

ಸಮಗ್ರ ನ್ಯೂಸ್: ದೇಶದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ ವತಿಯಿಂದ 2,000 ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಲ್ಲಿಸಿದೆ. ಬ್ಯಾಂಕ್‌ಗಳಿಂದ ಯಾವುದೇ ಗ್ರಾಹಕರಿಗೆ ಈ ನೋಟುಗಳನ್ನು ನೀಡುವುದಿಲ್ಲ. ಜೊತೆಗೆ, ಯಾವುದೇ ಬ್ಯಾಂಕ್‌ಗಳ ಎಟಿಎಂನಲ್ಲಿಯೂ 2000 ರೂ. ಮುಖಬೆಲೆಯ ನೋಟುಗಳನ್ನು ಹಾಕುತ್ತಿಲ್ಲ. ಆದರೆ, ಗ್ರಾಹಕರಿಂದ ಈ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಪಡೆಯಲಾಗುತ್ತದೆ. ಗ್ರಾಹಕರು ಈ ನೋಟುಗಳನ್ನು ತಂದು ಬ್ಯಾಂಕ್‌ ಖಾತೆಗೆ ಜಮಾ ಮಾಡಬಹುದು ಎಂದು ತಿಳಿಸಿದೆ. ಆದರೆ, ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡದ ತೆರಿಗೆ ವಂಚಿತ (ಕಪ್ಪುಹಣ) ಹಣವಿದ್ದರೆ ಅದನ್ನು ಬ್ಯಾಂಕ್‌ಗೆ

ಕನಕಪುರ ರಸ್ತೆ ಬದಿ ಕಂತೆ ಕಂತೆ 2000ದ ನೋಟು Read More »

ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಒಂದು ವರ್ಷ| ಇನ್ನೂ ಪತ್ತೆಯಾಗದ ನರರಾಕ್ಷಸರು| ಅನ್ಯಾಯದ ಹತ್ಯೆಗೆ ನ್ಯಾಯ ಸಿಕ್ಕೀತೇ?

ಸಮಗ್ರ ವಿಶೇಷ: ಕರಾವಳಿಯು ಶಾಂತಿ ಸೌಹಾರ್ದತೆಯ ತವರೂರಾಗುವುದು ಯಾವಾಗ ಎಂಬ ಕುತೂಹಲ ನಿರೀಕ್ಷೆ ಎಲ್ಲರಿಗೂ ಇದೆ. ಅದರಲ್ಲಿಯೂ ನಮ್ಮ ದಕ್ಷಿಣ ಕನ್ನಡ ಜಿಲ್ಲೆ ಅತೀ ಹೆಚ್ಚು ಅಕ್ಷರಸ್ಥರು ಇರುವ ಬುದ್ಧಿವಂತರ ಜಿಲ್ಲೆ ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಆದರೆ ಇಲ್ಲಿ ಯಾಕೆ ಪದೆ ಪದೇ ಮತೀಯ ಗಲಭೆ, ಘರ್ಷಣೆಗಳು, ಪ್ರತಿಕಾರದ ಕೊಲೆಗಳು ನಡೆಯುತ್ತಿವೆ ಎಂಬುವುದಕ್ಕೆ ಉತ್ತರ ಸಿಕ್ಕಿ ಲ್ಲ. ಆ ಉತ್ತರಗಳುವರಾಜಕೀಯ ಪಕ್ಷಗಳ ಬಳಿ ಇರಲು‌ ಸಾಧ್ಯವಿರಬಹುದೇನೊ. ಅಶಾಂತಿಗೆ ಅಂತ್ಯ ಹಾಡಿ ಶಾಂತಿ– ನೆಮ್ಮದಿಯ ದಿನಗಳನ್ನು ಮರಳಿ ತರುವ

ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಒಂದು ವರ್ಷ| ಇನ್ನೂ ಪತ್ತೆಯಾಗದ ನರರಾಕ್ಷಸರು| ಅನ್ಯಾಯದ ಹತ್ಯೆಗೆ ನ್ಯಾಯ ಸಿಕ್ಕೀತೇ? Read More »

ಸುಳ್ಯ: ನೆಟ್ವರ್ಕ್ ಸಮಸ್ಯೆಯಿಂದ ಹೈರಾಣಾದ ಕೊಲ್ಲಮೊಗ್ರ- ಹರಿಹರದ ಜನತೆ| ಎ.ಸಿ ನಿರ್ದೇಶನಕ್ಕೂ ಕ್ಯಾರೇ ಎನ್ನದ BSNL ಅಧಿಕಾರಿಗಳು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕೊಲ್ಲಮೊಗ್ರ- ಹರಿಹರ ಪಲ್ಲತ್ತಡ್ಕ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಜನರು ಹೈರಾಣಾಗಿದ್ದು, ಈ ಬಗ್ಗೆ BSNL ಅಧಿಕಾರಿಗಳಿಗೆ ಎ.ಸಿ ಮೂಲಕ ನಿರ್ದೇಶನ ನೀಡಿದರೂ ಕೂಡ ನಿರ್ಲಕ್ಷ್ಯ ವಹಿಸಿದ್ದಾರೆ. ಕೆಲ ದಿನಗಳಿಂದ ಕರಾವಳಿ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು ಹಲವಾರು ಸಮಸ್ಯೆಗಳನ್ನು ತಂದೊಡ್ಡಿದೆ. ಈ ಕುಂಭದ್ರೋಣ ಕೊಲ್ಲಮೊಗ್ರ- ಹರಿಹರ ಭಾಗದಲ್ಲಿ ಮಳೆಯಿಂದ ನೆರೆ ಬಂದು, ಕೊಲ್ಲಮೊಗ್ರದ, ಬೆಂಡೋಡಿ ಎಂಬಲ್ಲಿ ಸೇತುವೆ ಕೊಚ್ಚಿಹೋಗಿ 70 ಮನೆಗಳಿಗೆ ಸೇತುವೆ ಸಂಪರ್ಕ ಕಡಿತಗೊಂಡಿದೆ. ಇದರಿಂದ ಅಲ್ಲಿರುವ ಜನರ ಸಂಪರ್ಕಿಸುವುದೇ

ಸುಳ್ಯ: ನೆಟ್ವರ್ಕ್ ಸಮಸ್ಯೆಯಿಂದ ಹೈರಾಣಾದ ಕೊಲ್ಲಮೊಗ್ರ- ಹರಿಹರದ ಜನತೆ| ಎ.ಸಿ ನಿರ್ದೇಶನಕ್ಕೂ ಕ್ಯಾರೇ ಎನ್ನದ BSNL ಅಧಿಕಾರಿಗಳು Read More »

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಂಭವ| ಈ ಜಿಲ್ಲೆಗಳಲ್ಲಿ ಭಯಂಕರ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯಾದ್ಯಂತ ಭಾರಿ ಮಳೆಯ ಎಚ್ಚರಿಕೆ ನಡುವೆಯೂ ಪ್ರತ್ಯೇಕವಾಗಿ ಎರಡು ಜಿಲ್ಲೆಗಳಲ್ಲಿ ಭಯಂಕರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರಿನ ಕೆಲವು ಕಡೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ. ಉಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಂಭವ| ಈ ಜಿಲ್ಲೆಗಳಲ್ಲಿ ಭಯಂಕರ ಮಳೆ‌ ಮುನ್ಸೂಚನೆ Read More »

ಚಾರ್ಮಾಡಿ ಘಾಟ್ ಬಂಡೆಯ ಮೇಲೆ ಪ್ರವಾಸಿಗರ ಹುಚ್ಚಾಟ|ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ ಪ್ರವಾಸಿಗರು

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ ಸೋಮನಕಾಡು ಕಣಿವೆ ಪ್ರಪಾತದ ಎಡಭಾಗದಲ್ಲಿ ಬಂಡೆಯ ಮೇಲಿಂದ ಸುರಿಯುವ ಮಳೆಯ ನೀರಿಗೆ ಮೈಯೊಡ್ಡಲು ಪ್ರವಾಸಿಗರು ಬಂಡೆಯ ಹತ್ತುವ ಸಾಹಸ ಮಾಡಿ ಹುಚ್ಚಾಟ ಮೆರೆಯುತ್ತಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ವಿಪರೀತ ಮಳೆಯಿದ್ದು ಅಸಂಖ್ಯ‌ ಜಲಪಾತಗಳು ರಸ್ತೆಯಲ್ಲಿ ಕಣ್ಮನ ಸೆಳೆಯುತ್ತವೆ. ಆದರೆ ಕೆಲವು ವರ್ಷಗಳ ಹಿಂದೆ ಈ ಬಂಡೆ ಜಲಪಾತದಲ್ಲಿ ಯುವಕನೋರ್ವ ಬಂಡೆ ಹತ್ತಿ ಉರುಳಿ ಬಿದ್ದು ಜೀವಕ್ಕೆ ಅಪಾಯ ತಂದು ಕೊಂಡಿದ್ದ.ಕಳೆದ ಎರಡು ದಿನಗಳ ಹಿಂದೆ ಕೊಲ್ಲೂರಿನ ಅರಿಶಿನಗುಂಡಿ ಜಲಫಾತದಲ್ಲಿ ಭದ್ರಾವತಿಯ ಶರತ್ ಬಂಡೆ

ಚಾರ್ಮಾಡಿ ಘಾಟ್ ಬಂಡೆಯ ಮೇಲೆ ಪ್ರವಾಸಿಗರ ಹುಚ್ಚಾಟ|ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ ಪ್ರವಾಸಿಗರು Read More »

ಭಾರೀ ಮಳೆ ಹಿನ್ನಲೆ| ಉಡುಪಿಯಲ್ಲಿ ನಾಳೆಯೂ (ಜು.26) ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲಾ, ಪಿಯು ಕಾಲೇಜುಗಳಿಗೆ ಬುಧವಾರ (ಜು.26) ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಸದ್ಯ ಕರಾವಳಿ ಸೇರಿದಂತೆ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ನೆರೆ ನೀರು ಆವರಿಸಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಉಡುಪಿ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆ ಬೀಸುತ್ತಿದ್ದು. ವಿದ್ಯಾರ್ಥಿಗಳ ಮುಂಜಾಗ್ರತಾ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ಉಡುಪಿ ಜಿಲ್ಲಾದ್ಯಾಂತ ನಾಳೆ

ಭಾರೀ ಮಳೆ ಹಿನ್ನಲೆ| ಉಡುಪಿಯಲ್ಲಿ ನಾಳೆಯೂ (ಜು.26) ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಮಳೆಯಾರ್ಭಟ; ಜು.26 ರಂದು ಉ.ಕನ್ನಡದ ಈ ತಾಲೂಕುಗಳಲ್ಲಿ ಶಾಲೆ – ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಉತ್ತರಕನ್ನಡದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹೀಗಾಗಿ ಕೆಲ ಶಾಲಾ‌ ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ. ಕಾರವಾರ, ಜೋಯಿಡಾ, ಹಳಿಯಾಳ , ದಾಂಡೇಲಿ, ಹೊನ್ನಾವರ ತಾಲೂಕುಗಳಲ್ಲಿ ನಾಳೆ ( ಜುಲೈ 26 ರಂದು) ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ, ಉಳಿದ ತಾಲೂಕುಗಳಲ್ಲಿ ಸ್ಥಳೀಯ ಪರಿಸ್ಥಿತಿ ಅವಲೋಕಿಸಿ, ರಜೆಯ ನಿರ್ಧಾರ ಕೈಗೊಳ್ಳಲು ತಹಶೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ. ಕುಮಟಾ, ಅಂಕೋಲಾದಲ್ಲಿ ಮಳೆಯ ಪರಿಸ್ಥಿತಿ ಅವಲೋಕಿಸಲಾಗುತ್ತಿದ್ದು, ಶೀಘ್ರವೇ ನಿರ್ಧಾರ ಪ್ರಕಟಿಸುವುದಾಗಿ ತಿಳಿದುಬಂದಿದೆ.

ಮಳೆಯಾರ್ಭಟ; ಜು.26 ರಂದು ಉ.ಕನ್ನಡದ ಈ ತಾಲೂಕುಗಳಲ್ಲಿ ಶಾಲೆ – ಕಾಲೇಜುಗಳಿಗೆ ರಜೆ Read More »

ಮುಂದುವರಿದ ವರುಣಾರ್ಭಟ| ಕೊಡಗಿನಲ್ಲಿ ಜು.26 ರಂದು ಶಾಲೆ, ಪಿ.ಯು ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ಬುಧವಾರ (ಜು.26) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್‌ ರಾಜಾ ರಜೆ ಘೋಷಿಸಿ ಪ್ರಕಟಣೆ ಹೊರಡಿಸಿದ್ದಾರೆ. ಸದ್ಯ ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

ಮುಂದುವರಿದ ವರುಣಾರ್ಭಟ| ಕೊಡಗಿನಲ್ಲಿ ಜು.26 ರಂದು ಶಾಲೆ, ಪಿ.ಯು ಕಾಲೇಜಿಗೆ ರಜೆ ಘೋಷಣೆ Read More »