July 2023

ಕನ್ನಡ ಕಿರುತೆರೆಗೆ ಕಾಲಿಟ್ಟ ನಟ ದೀಪಕ್ ರೈ ಪಾಣಾಜೆ

ಸಮಗ್ರ ನ್ಯೂಸ್: ಕನ್ನಡದಲ್ಲಿ ಬಿಡುಗಡೆಯಾಗಿ ಕೊನೆಗೆ ಪ್ಯಾನ್ ಇಂಡಿಯಾ ಮೂವಿ ಆಗಿ ತೆರೆ ಕಂಡ ಕಾಂತರ ಸಿನಿಮಾದಲ್ಲಿ ಒಂದು ಫನ್ನಿ ರೋಲ್ ನಲ್ಲಿ ಕಾಣಿಸಿಕೊಂಡಿರುವ ನಟ ದೀಪಕ್ ರೈ ಪಾಣಾಜೆ ಅವರು ಇದೀಗ ಧಾರಾವಾಹಿಗೆ ಕಾಲಿಡುತ್ತಿದ್ದಾರೆ. ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ’ಗಟ್ಟಿಮೇಳ’ದಲ್ಲಿ ನಟಿಸುವ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ ದೀಪಕ್ ರೈ ಪಾಣಾಜೆ.‌ಪಾತ್ರ ಬಹಳ ದೊಡ್ಡದಲ್ಲದಿದ್ದರೂ ಬಹಳಷ್ಟು ಟ್ವಿಸ್ಟ್ ಗಳನ್ನು ಹೊಂದಿರುವ ಈ ಪಾತ್ರಕ್ಕಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಒಬ್ಬ ಪೋಸ್ಟ್ ಮಾಸ್ಟರ್‌ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಈ […]

ಕನ್ನಡ ಕಿರುತೆರೆಗೆ ಕಾಲಿಟ್ಟ ನಟ ದೀಪಕ್ ರೈ ಪಾಣಾಜೆ Read More »

ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮುಂಗಾರು ಮಳೆ| ಮಹಾಮಳೆಗೆ ಮೂವರು ಬಲಿ; 9 ಜಿಲ್ಲೆಗಳಿಗೆ ಪ್ರವಾಹ ಭೀತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ತಡವಾಗಿ ಆರಂಭಗೊಂಡ ಮುಂಗಾರು ಮಳೆ ರಾಜ್ಯದ ಮೂರನೇ ಒಂದು ಭಾಗದಲ್ಲಿ ಅಬ್ಬರಿಸುತ್ತಿದೆ. ಈ ಕಾರಣದಿಂದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವರುಣಾಘಾತವೇ ಉಂಟಾಗಿದೆ. ಕಳೆದ ಒಂದೆರಡು ವಾರದಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ, ಭೀಮಾ ಸೇರಿದಂತೆ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಅಲ್ಲದೇ ಈವರೆಗೆ ಮಹಾಮಳೆಗೆ ಮೂವರು ಬಲಿಯಾಗಿದ್ದಾರೆ. ಭಾರೀ ಮಳೆಯಿಂದಾಗಿ ಕಲಬುರ್ಗಿ ಜಿಲ್ಲೆಯಲ್ಲಿ ಇಬ್ಬರು, ಹಾವೇರಿಯಲ್ಲಿ

ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮುಂಗಾರು ಮಳೆ| ಮಹಾಮಳೆಗೆ ಮೂವರು ಬಲಿ; 9 ಜಿಲ್ಲೆಗಳಿಗೆ ಪ್ರವಾಹ ಭೀತಿ Read More »

ಭಾರಿ ಮಳೆ ಹಿನ್ನಲೆ| ಕಡಬ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಕಡಬ ತಾಲ್ಲೂಕಿನಲ್ಲಿ ಇಂದು ಭಾರಿ ಮಳೆಯಾಗುತ್ತಿರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ ಶಾಲೆಗಳಿಗೆ ಮತ್ತು ಪ್ರೌಢ ಶಾಲೆಗಳಿಗೆ ಮಾತ್ರ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಭಾರಿ ಮಳೆ ಹಿನ್ನಲೆ| ಕಡಬ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ Read More »

ಸುಳ್ಯ: ಭಾರೀ ಮಳೆ ಹಿನ್ನೆಲೆ | ಈ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಹರಿಹರ ಕ್ಲಸ್ಟರ್ ನ ಎಲ್ಲಾ ಶಾಲೆಗಳಿಗೆ ಹಾಗೂ ಸುಬ್ರಹ್ಮಣ್ಯ ಕ್ಲಸ್ಟರ್ ನ ಆಯ್ದ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಮಾಡಿದ್ದಾರೆ. ಸುಬ್ರಹ್ಮಣ್ಯ ಕ್ಲಸ್ಟರ್ ಗೊಳಪಡುವ – ‌ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ,ಎಸ್ ಎಸ್ ಪಿ ಯು ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವರಹಳ್ಳಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಸುಳ್ಯ: ಭಾರೀ ಮಳೆ ಹಿನ್ನೆಲೆ | ಈ ಶಾಲೆಗಳಿಗೆ ರಜೆ ಘೋಷಣೆ Read More »

ಮಲೆನಾಡು ಈಗ ಮಳೆನಾಡು| ಹೆಬ್ಬಾಳೆ ಸೇತುವೆ ಮುಳುಗಡೆ| ಕಳಸ- ಹೊರನಾಡು ಸಂಪರ್ಕ ಕಡಿತ

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ರವಿವಾರವೂ ಮುಂದುವರಿದಿದ್ದು, ಭಾರೀ ಮಳೆ ಹಲವೆಡೆ ಭಾರೀ ಅವಾಂತರಗಳನ್ನು ಸೃಷ್ಟಿಸಿದೆ. ಶನಿವಾರ ರಾತ್ರಿ ಹಾಗೂ ರವಿವಾರ ಇಡೀ ದಿನ ಸುರಿದ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಕಳಸ ಸಮೀಪದಲ್ಲಿ ಹರಿಯುವ ಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗಿ ಕಳಸ-ಹೊರನಾಡು ಸಂಪರ್ಕ ಕಡಿತಗೊಂಡಿದೆ. ಶೃಂಗೇರಿ ತಾಲೂಕಿನಾದ್ಯಂತ ಭಾರೀ ಮಳೆ ಪರಿಣಾಮ ತುಂಗಾ ನದಿಯ ನೆರೆ ನೀರು ಶೃಂಗೇರಿ ಪಟ್ಟಣದ ಗಾಂಧಿಮೈದಾನವನ್ನು ಆವರಿಸಿಕೊಂಡಿದೆ. ಇನ್ನು ಅಲ್ಲಲ್ಲಿ ಮರಗಳು ಉರುಳಿ

ಮಲೆನಾಡು ಈಗ ಮಳೆನಾಡು| ಹೆಬ್ಬಾಳೆ ಸೇತುವೆ ಮುಳುಗಡೆ| ಕಳಸ- ಹೊರನಾಡು ಸಂಪರ್ಕ ಕಡಿತ Read More »

ಕರಾವಳಿಯಲ್ಲಿ ವರುಣಾರ್ಭಟ| ಮುಂದಿನ 24 ಗಂಟೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರಾವಳಿಯ ಹಲವು ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರುವ ಮೂಲಕ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ. ದಕ್ಷಿಣದ ಪ್ರಮುಖ ನದಿಗಳಾದ ಕುಮಾರಧಾರೆ ಹಾಗೂ ನೇತ್ರಾವತಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಪ್ರವಾಹದ ಭೀತಿ ಎದುರಾಗಿವೆ. ಅಲ್ಲದೆ ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಹಲವೆಡೆ ಮನೆಗಳಿಗೆ ನೀರು ನುಗ್ಗಿವೆ. ಮಲೆನಾಡು ಮತ್ತು ಕರಾವಳಿಯಲ್ಲಿ ಮುಂದಿನ 24ಗಂಟೆ ವ್ಯಾಪಕ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದ್ದು ಅರೆಂಜ್ ಅಲರ್ಟ್ ಘೋಷಿಸಿದೆ. ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ

ಕರಾವಳಿಯಲ್ಲಿ ವರುಣಾರ್ಭಟ| ಮುಂದಿನ 24 ಗಂಟೆ ಭಾರೀ ಮಳೆ ಮುನ್ಸೂಚನೆ Read More »

ಎಡೆಬಿಡದ ಮಳೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲಾ, ಪಿಯು ಕಾಲೇಜುಗಳಿಗೆ ಸೋಮವಾರ (ಜು.24) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಸದ್ಯ ಕರಾವಳಿ ಸೇರಿದಂತೆ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ನೆರೆ ನೀರು ಆವರಿಸಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

ಎಡೆಬಿಡದ ಮಳೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ Read More »

ಭಾರೀ ಮಳೆ ಮುನ್ಸೂಚನೆ| ಜು.24 ರಂದು ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲ ಶಾಲೆಗಳಿಗೆ ಸೋಮವಾರ (ಜು.24) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ನಾಲ್ಕು ದಿನಗಳಿಂದ ಮಳೆ ಅಬ್ಬರಿಸುತ್ತಿದ್ದು ಶನಿವಾರ ರಾತ್ರಿಯಿಂದ ಮಳೆ ಬಿರುಸುಗೊಂಡಿದೆ. ಭಾನುವಾರ ಇಡೀ ದಿನ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

ಭಾರೀ ಮಳೆ ಮುನ್ಸೂಚನೆ| ಜು.24 ರಂದು ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ Read More »

ಚಿಕ್ಕಮಗಳೂರಿನಲ್ಲಿ ಮುಂದುವರಿದ ವರ್ಷಧಾರೆ| ಕೊಪ್ಪ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಮಳೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ (ಜುಲೈ 24) ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ‌ ತಾಲೂಕಿನ ಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಿ ತಹಶಿಲ್ದಾರ್ ಆದೇಶ ಹೊರಡಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಹಸೀಲ್ದಾರ್ ರವರ ವರದಿ ಅಧರಿಸಿ ರಜೆ ಘೋಷಿಸಲಾಗಿದೆ.

ಚಿಕ್ಕಮಗಳೂರಿನಲ್ಲಿ ಮುಂದುವರಿದ ವರ್ಷಧಾರೆ| ಕೊಪ್ಪ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ Read More »

ಹಾಸನದಲ್ಲಿ ಮುಂದುವರಿದ ವರ್ಷಧಾರೆ| ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಮಳೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ (ಜುಲೈ 24) ರಂದು ಸಕಲೇಶಪುರ, ಬೇಲೂರು ಆಲೂರು ಹಾಗೂ ಅರಕಲಗೂಡು ತಾಲೂಕಿನ ಎಲ್ಲಾ ಅಂಗನವಾಡಿ,ಸರ್ಕಾರಿ, ಅನುದಾನಿತ ಹಾಗೂ ಖಾಸಗಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಸಕ ಸಿಮೆಂಟ್ ಮಂಜುನಾಥ್ ಸೂಚನೆ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಹಸೀಲ್ದಾರ್ ರವರ ವರದಿ

ಹಾಸನದಲ್ಲಿ ಮುಂದುವರಿದ ವರ್ಷಧಾರೆ| ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ Read More »