July 2023

ಟೈಟ್ ಆಗಿ ರಸ್ತೆ ಬಿಟ್ಟು ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿದ ವ್ಯಕ್ತಿ

ಸಮಗ್ರ ನ್ಯೂಸ್:‌ ವ್ಯಕ್ತಿಯೊಬ್ಬ ಟೈಟ್ ಆಗಿ ರಸ್ತೆ ಬಿಟ್ಟು ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲ್ವೆ ಟ್ರ್ಯಾಕ್ ಮೇಲೆ ಕಾರನ್ನು ಚಲಾಯಿಸಿದ ವ್ಯಕ್ತಿಯನ್ನು ಕಣ್ಣೂರಿನ ಜಯಪ್ರಕಾಶ್ ಎಂದು ಗುರುತಿಸಲಾಗಿದೆ.ಈತ ಕಣ್ಣೂರು ಬಳಿಯ ತಾಜಿ ರೈಲ್ವೆ ಕ್ರಾಸಿಂಗ್‌ನಲ್ಲಿ ಟ್ರ್ಯಾಕ್ ಮೇಲೆ ಸುಮಾರು 15 ಮೀಟರ್ ಕಾರು ಚಲಾಯಿಸಿಕೊಂಡು ಹೋಗಿದ್ದ ಬಳಿಕ ಮುಂದಕ್ಕೆ ಹೋಗಲಾಗದೇ ಅಲ್ಲಿಯೇ ಕೆಲಹೊತ್ತು ಕಾರಿನಲ್ಲಿ ಕೂತಿದ್ದಾನೆ. ಇದನ್ನು ನೋಡಿದ […]

ಟೈಟ್ ಆಗಿ ರಸ್ತೆ ಬಿಟ್ಟು ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿದ ವ್ಯಕ್ತಿ Read More »

ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ| ಆರೋಪಿಗಳ ಮನೆಗೆ ಬೆಂಕಿ ಹಚ್ಚಿ ಆಕ್ರೋಶ

ಸಮಗ್ರ ನ್ಯೂಸ್: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಗುಂಪೊಂದು ವಿವಸ್ತ್ರಗೊಳಿಸಿಗಿ ಮೆರವಣಿಗೆ ಮಾಡುತ್ತಿರುವ ವೀಡಿಯೊ ವೈರಲ್ ಆದ ಎರಡು ದಿನಗಳ ನಂತರ, ಪ್ರಮುಖ ಆರೋಪಿ ಹುಯಿರೆಮ್ ಹೆರೋದಾಸ್ ಮೈತೆಯ್ ಅವರ ಮನೆಯನ್ನು ಗುರುವಾರ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ದೃಶ್ಯಗಳಲ್ಲಿ ಪ್ರತಿಭಟನಾಕಾರರ ಗುಂಪು ಆರೋಪಿಯ ಮನೆಗೆ ಬೆಂಕಿ ಹಚ್ಚುವುದು ಕಂಡು ಬಂದಿದೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಕಾದಾಡುತ್ತಿರುವ ಸಮುದಾಯವೊಂದರ ಮಹಿಳೆಯರನ್ನು ಇನ್ನೊಂದು ಕಡೆಯಿಂದ ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ 4 ಮಂದಿ ಬಂಧಿಸಲಾಗಿದೆ.

ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ| ಆರೋಪಿಗಳ ಮನೆಗೆ ಬೆಂಕಿ ಹಚ್ಚಿ ಆಕ್ರೋಶ Read More »

ತುಳು ಸಾಹಿತ್ಯ ಅಕಾಡೆಮಿಗೆ ಕಿಶೋರ್ ಶೆಟ್ಟಿ ಆಯ್ಕೆಗೆ ಬೆಂಬಲಿಗರ ಒತ್ತಾಯ

ಸಮಗ್ರ ನ್ಯೂಸ್: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಹಲವರ ಹೆಸರು ಚಾಲ್ತಿಯಲ್ಲಿದ್ದು ತುಳುನಾಡ ಜಾನಪದ ಕಲೆ, ಸಂಸ್ಕೃತಿಯನ್ನು ಪ್ರಚುರಪಡಿಸುವಲ್ಲಿ ತಮ್ಮದೇ ಆದ ಕಾರ್ಯ ನಿರ್ವಹಿಸುತ್ತ ಬಂದಿರುವ ಕಿಶೋರ್ ಶೆಟ್ಟಿ ದೆಪ್ಪುಣಿಗುತ್ತು ಅವರನ್ನು ಆಯ್ಕೆ ಮಾಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ. ಕಿಶೋರ್ ಶೆಟ್ಟಿ ಅವರು ಕಲೆ, ಸಾಹಿತ್ಯ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು ದೈವಾರಾಧನೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರು. ಅವರ ದೈವದ ನುಡಿಗಟ್ಟು ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಇನ್ನಷ್ಟು ಶ್ರೀಮಂತಗೊಳಿಸಿದ್ದು ಅವರನ್ನು

ತುಳು ಸಾಹಿತ್ಯ ಅಕಾಡೆಮಿಗೆ ಕಿಶೋರ್ ಶೆಟ್ಟಿ ಆಯ್ಕೆಗೆ ಬೆಂಬಲಿಗರ ಒತ್ತಾಯ Read More »

ಸುಳ್ಯದ ಐವರ್ನಾಡಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ತಲವಾರುನಲ್ಲಿ ಹಲ್ಲೆಗೆ ಯತ್ನ; ಪೊಲೀಸ್ ದೂರು

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ತಲವಾರು ಹಿಡಿದು ಹಲ್ಲೆಗೆ ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಶ್ರೀ ಪಂಚಲಿಂಗೇಶ್ವರ ಪೆಟ್ರೋಲ್ ಪಂಪ್ ಬಳಿ ಇರುವ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ್ತವ್ಯವಿರುವ ಪ್ರವೀಣ ಎಂಬವರು ಇನ್ನೊರ್ವ ನಿವಾಸಿ ಧರ್ಮಲಿಂಗಂ ಎಂಬವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ತಮ್ಮ ವಾಹನದಿಂದ ತಲವಾರು ತೆಗೆದು ಹಲ್ಲೆ ನಡೆಸಲು ಮುಂದಾಗಿದ್ದಾಗಿ‌ ವರದಿಯಾಗಿದೆ. ಘಟನೆ ಸಂದರ್ಭದಲ್ಲಿ ಅಲ್ಲಿಯ ಸ್ಥಳೀಯರು ತಡೆದಿದ್ದಾರೆ. ಈ ಬಗ್ಗೆ ಧರ್ಮಲಿಂಗಂ ರವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು

ಸುಳ್ಯದ ಐವರ್ನಾಡಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ತಲವಾರುನಲ್ಲಿ ಹಲ್ಲೆಗೆ ಯತ್ನ; ಪೊಲೀಸ್ ದೂರು Read More »

ಬರ್ತಾ ಇದೆ ಸೌಜನ್ಯ ಮರ್ಡರ್ ಮಿಸ್ಟ್ರಿ| ‘ಸ್ಟೋರಿ ಆಫ್ ಸೌಜನ್ಯ’ ಹೆಸರಲ್ಲಿ ಟೈಟಲ್ ನೋಂದಣಿ

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸಂತೋಷ್ ರಾವ್​ನನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು. ಆದರೆ ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವ ಮುನ್ನವೇ ಸೌಜನ್ಯ ಹೆಸರಲ್ಲಿ ಜಿ.ಕೆ ವೆಂಚರ್ಸ್​ ಹೆಸರಿನ ಸಂಸ್ಥೆಯೊಂದು ಸಿನಿಮಾ ಮಾಡಲು ಮುಂದಾಗಿದ್ದು ಚಲನಚಿತ್ರ ಮಂಡಳಿಯಲ್ಲಿ ಶೀರ್ಷಿಕೆಯನ್ನು ನೋಂದಣಿ ಕೂಡ ಮಾಡಲಾಗಿದೆ. ಈ ಸಿನಿಮಾದ ಹೆಸರನ್ನು ‘ಸ್ಟೋರಿ ಆಫ್ ಸೌಜನ್ಯ’ ಎಂದು ಇಡಲಾಗಿದೆ. ಈ ಸಿನಿಮಾದ ನಿರ್ದೇಶನವನ್ನು ವಿ. ಲವ ಎನ್ನುವವವರು ಮಾಡಲಿದ್ದಾರೆ. ಇದೊಂದು ಸಾಮಾಜಿಕ ಚಿತ್ರವಾಗಿರಲಿದೆ ಎನ್ನಲಾಗುತ್ತಿದೆ.

ಬರ್ತಾ ಇದೆ ಸೌಜನ್ಯ ಮರ್ಡರ್ ಮಿಸ್ಟ್ರಿ| ‘ಸ್ಟೋರಿ ಆಫ್ ಸೌಜನ್ಯ’ ಹೆಸರಲ್ಲಿ ಟೈಟಲ್ ನೋಂದಣಿ Read More »

ಮಂಗಳೂರು: ಭಜರಂಗದಳದ ಮೂವರು ಕಾರ್ಯಕರ್ತರ ಗಡಿಪಾರು!? ಡಿಸಿಪಿ ಎದುರು ಹಾಜರಾಗಲು ಬುಲಾವ್

ಸಮಗ್ರ ನ್ಯೂಸ್: ಮಂಗಳೂರು ನಗರದ ಸುಲ್ತಾನ್ ಜ್ಯುವೆಲರಿ ಹಾಗೂ ಹೋಳಿ ಆಚರಣೆ ವೇಳೆ ನಡೆದ ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಮೂವರನ್ನು ಗಡಿಪಾರು ಮಾಡಲು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಗಡಿಪಾರು ಪ್ರಕ್ರಿಯೆ ಆರಂಭಿಸಿದೆ ಎಂದು ತಿಳಿದುಬಂದಿದೆ. ಇಂದು (ಜು.21) ಮೂವರು ಬಜರಂಗದಳ ಕಾರ್ಯಕರ್ತರಿಗೆ ಕಾನೂನು ಸುವ್ಯವಸ್ಥೆ ಖಾತ್ರಿ ಪಡಿಸಲು ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಬಳಿಕ ಅಧಿಕೃತವಾಗಿ ಒಂದು ವರ್ಷ ಕಾಲ ಗಡಿಪಾರು ಮಾಡುವ ಸಾಧ್ಯತೆ ಇದೆ. ಹೀಗಾಗಿ ಸ್ಥಳೀಯ ಠಾಣೆಗಳ

ಮಂಗಳೂರು: ಭಜರಂಗದಳದ ಮೂವರು ಕಾರ್ಯಕರ್ತರ ಗಡಿಪಾರು!? ಡಿಸಿಪಿ ಎದುರು ಹಾಜರಾಗಲು ಬುಲಾವ್ Read More »

ಸುಳ್ಯ: ಬೇಲಿ ನಾಶ, ಜಾತಿನಿಂದನೆ| ಪೆರುವಾಜೆ ಗ್ರಾ.ಪಂ. ಸದಸ್ಯ ಸಚಿನ್ ರಾಜ್ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಪೆಲತಡ್ಕ ಎಂಬಲ್ಲಿ ಬೇಲಿ ನಾಶ ಮಾಡಿರುವುದಾಗಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿರುವುದಾಗಿ ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ವ್ಯಕ್ತಿಯೋರ್ವರು ಜು.18 ರಂದು ದೂರು ನೀಡಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರುವಾಜೆ ಗ್ರಾಮದ ಪೆಲತಡ್ಕ ನಿವಾಸಿ ದಾಮೋದರ ನಾಯ್ಕ ಎಂಬವರ ಮನೆ ಸಮೀಪ ಸಾರ್ವಜನಿಕ ರಸ್ತೆ ಕಾಮಗಾರಿ ನಡೆಯುತ್ತಿದ್ದು , ಮನೆಯ ಜಮೀನಿನ ಬೇಲಿಯು ಅರ್ಧದಷ್ಟು ನಾಶವಾಗಿದ್ದು ಈ ಬಗ್ಗೆ ಕಾಮಗಾರಿ

ಸುಳ್ಯ: ಬೇಲಿ ನಾಶ, ಜಾತಿನಿಂದನೆ| ಪೆರುವಾಜೆ ಗ್ರಾ.ಪಂ. ಸದಸ್ಯ ಸಚಿನ್ ರಾಜ್ ವಿರುದ್ದ ಪ್ರಕರಣ ದಾಖಲು Read More »

‘ವಂದೇ‌ ಭಾರತ್’ ನಲ್ಲಿ ಮೂತ್ರ ವಿಸರ್ಜನೆ ಮಾಡಿ ₹.6 ಸಾವಿರ ಕಳಕೊಂಡ ವ್ಯಕ್ತಿ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ಮೂತ್ರ ವಿಸರ್ಜಿಸಲು ವಂದೇ ಭಾರತ್ ರೈಲಿಗೆ ಹತ್ತಿದ್ದು, 6,000 ರೂ.ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಹೈದರಾಬಾದ್ ಮೂಲದ ಅಬ್ದುಲ್ ಖಾದಿರ್ ಎಂಬುವರು ತಮ್ಮ ಕುಟುಂಬದೊಂದಿಗೆ ಭೋಪಾಲ್ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿದ್ದಾಗ ಅವರಿಗೆ ಮೂತ್ರ ವಿಸರ್ಜಿಸುವ ತುರ್ತು ಅಗತ್ಯವಿತ್ತು. ಈ ವೇಳೆ, ಅಲ್ಲಿನ ಶೌಚಾಲಯಕ್ಕೆ ಹೋಗದೇ ವಂದೇ ಭಾರತ್ ರೈಲಿನ ಶೌಚಾಲಯವನ್ನು ಬಳಸಲು ಹತ್ತಿದರು. ಖಾದಿರ್ ಜುಲೈ 15 ರಂದು ಸಂಜೆ 5.20 ಕ್ಕೆ ಭೋಪಾಲ್ ನಿಲ್ದಾಣವನ್ನು ತಲುಪಿದ್ದರು ಮತ್ತು ಸಿಂಗ್ರೌಲಿಗೆ ಅವರ ರೈಲು

‘ವಂದೇ‌ ಭಾರತ್’ ನಲ್ಲಿ ಮೂತ್ರ ವಿಸರ್ಜನೆ ಮಾಡಿ ₹.6 ಸಾವಿರ ಕಳಕೊಂಡ ವ್ಯಕ್ತಿ Read More »

ರಾಜ್ಯಾದ್ಯಂತ ವರುಣಾರ್ಭಟ| ಮುಂದಿನ ನಾಲ್ಕು ದಿನ ಮಳೆ ಜೋರು

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಿನ್ನೆಯಿಂದ (ಜುಲೈ 20) ಮಳೆ ಬಿರುಸುಗೊಂಡಿದ್ದು, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿದಿದೆ. ಮುಂದಿನ 4 ದಿನಗಳ ವರೆಗೆ ಕರ್ನಾಟಕದ ಕೆಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ನೈರುತ್ಯ ಮುಂಗಾರು ಜೋರಾಗುವ ಸಾಧ್ಯತೆಯಿದ್ದು, ಸಮುದ್ರ ಮಟ್ಟದಲ್ಲಿ ಗಾಳಿಯ ವೇಗ ಹೆಚ್ಚಿರುತ್ತದೆ. ಹೀಗಾಗಿ ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ರಾಜ್ಯಾದ್ಯಂತ ವರುಣಾರ್ಭಟ| ಮುಂದಿನ ನಾಲ್ಕು ದಿನ ಮಳೆ ಜೋರು Read More »

‌ಉಡುಪಿ: ನಿದ್ದೆ ಕಣ್ಣಿನಲ್ಲಿ ಮನೆಯಿಂದ ರಸ್ತೆಗೆ ಬಂದ ಮಗು| ಆಕೆಯನ್ನು ತಡೆದು ನಿಲ್ಲಿಸಿದ್ದು ಕೊರಗಜ್ಜನೇ!?

ಸಮಗ್ರ ನ್ಯೂಸ್: ಮಗುಯೊಂದು ರಾತ್ರಿ ವೇಳೆ ಮನೆಯಿಂದ ಎದ್ದು ರಸ್ತೆಯಲ್ಲಿ ನಡೆದುಕೊಂಡು ಹೋದ ಘಟನೆ ಉಡುಪಿಯ ಕುಂದಾಪುರ ಕೆದೂರು ಸಮೀಪದ ದಬ್ಬೆಕಟ್ಟೆಯಲ್ಲಿ ಜು.19ರ ರಾತ್ರಿ 3 ಗಂಟೆಗೆ ನಡೆದಿದೆ. ಪುಟ್ಟ ಬಾಲಕಿಯೊಬ್ಬಳು ನಿದ್ದೆ ಕಣ್ಣಿನಲ್ಲಿ ಮನೆಯಿಂದ ಎದ್ದು ರಸ್ತೆಯವರೆಗೆ ನಡೆದುಕೊಂಡು ಬಂದಿದ್ದಾಳೆ. ರಾತ್ರಿ 3 ಗಂಟೆಗೆ ಇದೇ ದಾರಿಯಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ವಿಶ್ವ ಎನ್ನುವವರು ಮಗುವನ್ನು ನೋಡಿ ಕಾರು ನಿಲ್ಲಿಸಿದ್ದರು. ಬಳಿಕ ಮಗುವನ್ನು ಮಾತಾಡಿಸಿದಾಗ ನಿದ್ದೆ ಕಣ್ಣಿನಿಂದ ನಡೆದುಕೊಂಡು ಬಂದ ವಿಷಯ ಬೆಳಕಿಗೆ ಬಂದಿದೆ. ಬಳಿಕ

‌ಉಡುಪಿ: ನಿದ್ದೆ ಕಣ್ಣಿನಲ್ಲಿ ಮನೆಯಿಂದ ರಸ್ತೆಗೆ ಬಂದ ಮಗು| ಆಕೆಯನ್ನು ತಡೆದು ನಿಲ್ಲಿಸಿದ್ದು ಕೊರಗಜ್ಜನೇ!? Read More »