July 2023

ಮೂಡಿಗೆರೆ: ಸುಂಕಸಾಲೆ ಸುತ್ತಮುತ್ತ ಪ್ರವಾಸಿಗರ ದಟ್ಟಣೆ: ಪ್ರವಾಸಿಗರ ಸ್ವರ್ಗ ರಾಣಿಝರಿ

ಸಮಗ್ರ ನ್ಯೂಸ್: ಮಲೆನಾಡಿನ ಹಸಿರ ಸೆರಗಿನಲ್ಲಿ ಐತಿಹಾಸಿಕ ತಾಣವೊಂದು ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತದೆ.‌ ಅದರಲ್ಲೂ ಬಲ್ಲಾಳರಾಯನ ದುರ್ಗದ ರಾಣಿಝರಿ ಪ್ರವಾಸಿಗರ ಪಾಲಿಗೆ ಸ್ವರ್ಗವಾಗಿದೆ. ಮೂಡಿಗೆರೆ ತಾಲ್ಲೂಕಿನ ಸುಂಕಸಾಲೆ ಸಮೀಪದ ಬಲ್ಲಾಳರಾಯನ ದುರ್ಗ ತಪ್ಪಲಿನಲ್ಲಿ ಈ ರಾಣಿಝರಿ ಎಂಬ ಪ್ರಫಾತ ಪ್ರವಾಸಿಗರ, ಯುವಕ ಯುವತಿಯರ ಮನೆ ಮಾತಾಗಿದೆ.ರಾಣಿಝರಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಾಜೂರು, ನೆರೆಯ ಗ್ರಾಮಗಳು ನಮಗೆ ಗೋಚರಿಸುತ್ತವೆ.ಹಸಿರ ಪ್ರಫಾತದ ಕಣಿವೆ ಎಂತವರ ಎದೆಯನ್ನೊಮ್ಮೆ ನಡುಗಿಸುವ ಪ್ರಫಾತ. ಸಾವಿರಾರು ಅಡಿಯ ಪ್ರಫಾತ ಬಲ್ಲಾಳರಾಯನ ದುರ್ಗಕ್ಕೆ ಭೇಟಿ ನೀಡಿದವರು ರಾಣಿಝರಿಯನ್ನು […]

ಮೂಡಿಗೆರೆ: ಸುಂಕಸಾಲೆ ಸುತ್ತಮುತ್ತ ಪ್ರವಾಸಿಗರ ದಟ್ಟಣೆ: ಪ್ರವಾಸಿಗರ ಸ್ವರ್ಗ ರಾಣಿಝರಿ Read More »

ಸುಂಟಿಕೊಪ್ಪ: ಶುದ್ಧ ನೀರಿನ ಘಟಕ ಉದ್ಘಾಟಿಸಿದ ಡಾ. ಮಂತರ್ ಗೌಡ

ಸಮಗ್ರ ನ್ಯೂಸ್:‌ ಸುಂಟಿಕೊಪ್ಪ ಗ್ರಾಮ ಪಂಚಾಯತ್ ವತಿಯಿಂದ ಮಾದಾಪುರ ರಸ್ತೆಯಲ್ಲಿರುವ ಜಿ.ಎಂ.ಪಿ. ಶಾಲಾ ಮೈದಾನದ ತಡೆಗೋಡೆ ಬದಿಯಲ್ಲಿ ನಿರ್ಮಿಸಿರುವ ನೂತನ ಶುದ್ಧ ನೀರಿನ ಘಟಕವನ್ನು ಶಾಸಕರಾದ ಡಾ. ಮಂತರ್ ಗೌಡ ಅವರು ಉದ್ಘಾಟಿಸಿದರು. ಪಂಚಾಯತಿ ಅಧ್ಯಕ್ಷರಾದ ಶಿವಮ್ಮ ಮಹೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ಕೆ.ಕೆ. ಪ್ರಸಾದ್ ಕುಟ್ಟಪ್ಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಬಿ. ಹೆಚ್. ವೇಣುಗೋಪಾಲ್ ಹಾಗೂ ಸದಸ್ಯರು, ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.ಡ್ರಮ್ ವಿತರಣೆ: ನಂತರ ಮೇಲಿನ ಪನ್ಯ ತೋಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯತಿಯ

ಸುಂಟಿಕೊಪ್ಪ: ಶುದ್ಧ ನೀರಿನ ಘಟಕ ಉದ್ಘಾಟಿಸಿದ ಡಾ. ಮಂತರ್ ಗೌಡ Read More »

ಬ್ರಹ್ಮಾವರ: ಬೈಕಿನಿಂದ ಬಿದ್ದು ಗ್ರಂಥಪಾಲಕಿ ಮೃತ್ಯು

ಸಮಗ್ರ ನ್ಯೂಸ್: ಬೈಕಿನಿಂದ ಬಿದ್ದು ಹಿಂಬದಿ ಸವಾರೆಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ- ಬ್ರಹ್ಮಾವರ ರಸ್ತೆಯ ಕೊಳಂಬೆ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಕೋಟೇಶ್ವರ ನಿವಾಸಿ, ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಲೈಬ್ರೆರಿಯನ್ ಶಾಂಭವಿ ಪಿ.(59) ಎಂದು ಗುರುತಿಸಲಾಗಿದೆ. ಕಾಲೇಜು ಬಿಟ್ಟ ನಂತರ ಇವರು ಕಾಲೇಜಿನ ಲ್ಯಾಬ್ ಟೆಕ್ನಿಷಿಯನ್ ಸುಧೀಂದ್ರ ಎಂಬವರ ಬೈಕಿ ನಲ್ಲಿ ಬ್ರಹ್ಮಾವರದ ಬಸ್ ನಿಲ್ದಾಣದವರೆಗೆ ಹೊರಟಿದ್ದರು. ಕೊಳಂಬೆ ಬಳಿ ಬರುವಾಗ ಜೋರಾಗಿ ಮಳೆ ಬಂದುಬೈಕಿನಿಂದ ಆಯತಪ್ಪಿ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇವರು ಬ್ರಹ್ಮಾವರ ಖಾಸಗಿ

ಬ್ರಹ್ಮಾವರ: ಬೈಕಿನಿಂದ ಬಿದ್ದು ಗ್ರಂಥಪಾಲಕಿ ಮೃತ್ಯು Read More »

ಕಾರ್ಕಳ: ಠಾಣೆಯ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಮೃತರನ್ನು ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿ ಎಚ್.ಸಿ.ಪ್ರಶಾಂತ್ ಎಂದು ಗುರುತಿಸಲಾಗಿದೆ. ರಜೆಯಲ್ಲಿದ್ದ ಇವರು ಕಾರ್ಕಳದ ಮಿಯ್ಯಾರಿನ ತನ್ನ ಮನೆಯ ಹಿಂಭಾಗದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಈ ಘಟನೆ ರವಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

ಕಾರ್ಕಳ: ಠಾಣೆಯ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ Read More »

ಮಂಗಳೂರು: ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಧಿಕಾರಿ ಕರೆ

ಸಮಗ್ರ ನ್ಯೂಸ್‌: ದ.ಕ ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತದೊಂದಿಗೆ ಶಿಕ್ಷಕರು, ಪೋಷಕರು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಜು.15ರಂದು ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಪೊಲೀಸ್‌ ಇಲಾಖೆ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತ್ತು. ಮಾದಕ ವ್ಯಸನ ಮುಕ್ತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು ಅವರು, ಡ್ರಗ್ಸ್ ಬಳಕೆ ರೋಗವಿದ್ದಂತೆ.

ಮಂಗಳೂರು: ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಧಿಕಾರಿ ಕರೆ Read More »

ಹವಾಮಾನ ವರದಿ| ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೊಂಚ ಬಿಡುವು ನೀಡಿದ್ದಂತ ಮಳೆ, ಮತ್ತೆ ಶುರುವಾಗಲಿದೆ. ಮುಂದಿನ ಎರಡು ದಿನ ರಾಜ್ಯಾಧ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯನೀಡಿದೆ. ಅಲ್ಲದೇ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಜುಲೈ.16ರಿಂದ ಜುಲೈ.19ರವರೆಗೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಜುಲೈ.18ರಿಂದ ಮುಂದಿನ ಎರಡು ದಿನ ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಹವಾಮಾನ ವರದಿ| ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ Read More »

ಮುರುಳ್ಯ ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಉದ್ಘಟಾನೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮುರುಳ್ಯ ಗ್ರಾಮ ಪಂಚಾಯತ್ ನ ನೂತನ ಕಟ್ಟಡದ ಉದ್ಘಾಟನೆ ಮತ್ತು ಜಲಜೀವನ್ ಮಿಷನ್ – ಹರ್ ಘರ್ ಜಲ್ ಘೋಷಣಾ ಕಾರ್ಯಕ್ರಮ ಸಮಾರಂಭ ಜು.15 ರಂದು ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ಜಲಜೀವನ್ ಮಿಷನ್ – ಹರ್ ಘರ್ ಜಲ್ ನೀರಿನ ಟ್ಯಾಂಕನ್ನು ಮತ್ತು ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದ.ಕ.

ಮುರುಳ್ಯ ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಉದ್ಘಟಾನೆ Read More »

ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ಪೂರೈಕೆ ತಡೆಯಲು ಟಾಸ್ಕ್ ಪೋರ್ಸ್ ರಚನೆ

ಸಮಗ್ರ ನ್ಯೂಸ್:‌ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾಯಕ ನಾರಾಯಣಸ್ವಾಮಿ ಮೊಟ್ಟೆ ವಿಚಾರವನ್ನು ಪ್ರಸ್ತಾಪಿಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಪದಾರ್ಥಗಳ ಕಳಪೆ ಗುಣಮಟ್ಟದ ಪೂರೈಕೆಯಲ್ಲಿ ಆಗುತ್ತಿದೆ. ಇದೊಂದು ದೊಡ್ಡ ಮಾಫಿಯಾ ಆಗಿ ಬೆಳೆದಿದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು

ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ಪೂರೈಕೆ ತಡೆಯಲು ಟಾಸ್ಕ್ ಪೋರ್ಸ್ ರಚನೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯಶಾಸ್ತ್ರ ಪ್ರಕಾರ ಜುಲೈ 16-22ರವರೆಗಿನ ವಾರ ಭವಿಷ್ಯ ನೋಡುವುದಾದರೆ ಕೆಲವು ರಾಶಿಯವರು ಎಚ್ಚರವಹಿಸಬೇಕು. ಹಲವರ ಜೀವನದಲ್ಲಿ ಗಮನಾರ್ಹ ಬದಲಾವಣೆ ಆಗಲಿದೆ. ಈ ವಾರ ಯಾವ ರಾಶಿಗೆ ಶುಭ, ಯಾವ ರಾಶಿಯವರಿಗೆ ಲಾಭ ನೋಡೋಣ ಬನ್ನಿ… ಮೇಷರಾಶಿ:ವಾರದ ಆರಂಭದಲ್ಲಿ, ಗೆಳೆಯರೊಂದಿಗೆ ಮೋಜು ಅನುಭವಿಸಲು ನಿಮಗೆ ಅವಕಾಶ ಸಿಗಬಹುದು. ಅವರೊಂದಿಗೆ ಎಲ್ಲಾದರೂ ವಾಕ್​​ಗೆ ಹೋಗಲಿದ್ದೀರಿ. ನಿಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕುವಿರಿ. ನಿಮ್ಮ ಮನಸ್ಸಿನಲ್ಲಿ ಸಂತಸ ನೆಲೆಸಲಿದೆ. ವಿವಾಹಿತ ವ್ಯಕ್ತಿಗಳು ತಮ್ಮ ಕೌಟುಂಬಿಕ ಬದುಕಿನ ಸಮಸ್ಯೆಗಳನ್ನು ಮರೆತು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಜುಲೈ 19 ರಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ| ಪದಾಧಿಕಾರಿಗಳಿಂದ ಸುದ್ದಿಗೋಷ್ಠಿ

ಸಮಗ್ರ ನ್ಯೂಸ್:‌ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಆಚರಣೆ ಜುಲೈ19 ರಂದು ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭ, ಮಾಧ್ಯಮ ವಿಚಾರ ಸಂಕಿರಣ, ಪತ್ರಕರ್ತರ ಸಮ್ಮಿಲನ, ಸಮಾರೋಪ ಸಮಾರಂಭ ಹಾಗೂ ಸನ್ಮಾನ, ಸಾಂಸ್ಕೃತಿಕ ಸಂಭ್ರಮ‌ ನಡೆಯಲಿದೆ ಎಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ‌ ಕೊರತ್ತೋಡಿ ತಿಳಿಸಿದ್ದಾರೆ‌. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸುವರು. ಕನ್ನಡ ಪ್ರಭ ಹಾಗೂ

ಜುಲೈ 19 ರಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ| ಪದಾಧಿಕಾರಿಗಳಿಂದ ಸುದ್ದಿಗೋಷ್ಠಿ Read More »